ದೆಹಲಿ ಹಿಂಸಾಚಾರ ಪೀಡಿತ ಪ್ರದೇಶಕ್ಕೆ ಲೆಫ್ಟಿನೆಂಟ್ ಗವರ್ನರ್ ಭೇಟಿ
ನವದೆಹಲಿ, ಫೆಬ್ರವರಿ.28: ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ಹೊತ್ತಿ ಉರಿದ ರಾಷ್ಟ್ರ ರಾಜಧಾನಿಯಲ್ಲಿ ಹಿಂಸಾಚಾರ ಪೀಡಿತ ಪ್ರದೇಶಕ್ಕೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಶುಕ್ರವಾರ ಭೇಟಿ ನೀಡಲಿದ್ದಾರೆ.
ಜಫ್ರಾಬಾದ್, ಮೌಜ್ ಪುರ್, ಚಾಂದ್ ಬಾಗ್, ಖುರೇಜ್ ಖಾಸ್, ಮತ್ತು ಭಜನ್ ಪುರಗೆ ಭೇಟಿ ನೀಡಲಿರುವ ಲೆಫ್ಟಿನೆಂಟ್ ಗವರ್ನರ್ ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿನ ಪರಿಸ್ಥಿತಿಯ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಇದುವರೆಗೂ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 42ಕ್ಕೆ ಏರಿಕೆಯಾಗಿದೆ.
ಐವರು ಸದಸ್ಯರನ್ನೊಳಗೊಂಡ ಕಾಂಗ್ರೆಸ್ ನಿಯೋಗ ಕೂಡಾ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದೆ. ಈ ಕಾಂಗ್ರೆಸ್ ನಿಯೋಗದಲ್ಲಿ ಮುಕುಲ್ ವಾಸ್ನಿಕ್, ತಾರಿಕ್ ಅನ್ವರ್, ಸುಷ್ಮಿತಾ ದೇವ್, ಶಕ್ತಿ ಸಿನ್ಹಾ ಗೋಹಿಲ್ ಮತ್ತು ಕುಮಾರಿ ಸೆಲ್ಜಾ ಇದ್ದಾರೆ.

ಶುಕ್ರವಾರ ಹಿನ್ನೆಲೆ ಮಸೀದಿಗಳ ಬಳಿ ಹೆಚ್ಚಿನ ಭದ್ರತೆ:
ಶುಕ್ರವಾರವಾದ ಹಿನ್ನೆಲೆ ಮುಸ್ಲಿಂ ಬಾಂಧವರು ಮಸೀದಿಗಳಲ್ಲಿ ಪ್ರಾರ್ಥನೆಗೆ ತೆರಳಲಿರುವ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿ ತೀವ್ರ ನಿಗಾ ವಹಿಸಿದ್ದಾರೆ. ಸೋಮವಾರದಿಂದ ಈಶಾನ್ಯ ಭಾಗದ ಪ್ರದೇಶಗಳಲ್ಲಿ 7 ಸಾವಿರಕ್ಕೂ ಅಧಿಕ ಪ್ಯಾರಾ ಮಿಲಿಟರಿ ಫೋರ್ಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಈಶಾನ್ಯ ದೆಹಲಿಯಲ್ಲಿ ಕಳೆದ 36 ಗಂಟೆಗಳಲ್ಲಿ ಹೇರಿದ್ದ ನಿಷೇಧಾಜ್ಞೆಯನ್ನು ಶುಕ್ರವಾರ 10 ಗಂಟೆಗಳ ಕಾಲ ಕೇಂದ್ರ ಗೃಹ ಸಚಿವಾಲಯವು ಸಡಿಲಗೊಳಿಸಿತ್ತು. ಈ ಸಂದರ್ಭ ಮನೆಯಿಂದ ಹೊರ ಬಂದ ಜನರು ಅಗತ್ಯ ವಸ್ತುಗಳನ್ನು ಖರೀದಿಸುವಲ್ಲಿ ನಿರತರಾಗಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications