ಕಾಂಗ್ರೆಸ್ಸಿಗೆ ಪ್ರಜಾಪ್ರಭುತ್ವದ ಅರ್ಥ ಗೊತ್ತಿಲ್ಲ: ಅನಂತ್ ಕುಮಾರ್
ನವದೆಹಲಿ, ಮಾರ್ಚ್ 13: "ಕಾಂಗ್ರೆಸ್ಸಿಗೆ ಪ್ರಜಾಪ್ರಭುತ್ವದ ಅರ್ಥಗೊತ್ತಿಲ್ಲ" ಎಂದು ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಹೇಳಿದ್ದಾರೆ.
ಮುಯ್ಯಿಗೆ ಮುಯ್ಯಿ... ಕಾಂಗ್ರೆಸ್ ಸೇರಿಗೆ ಬಿಜೆಪಿ ಸವ್ವಾಸೇರು!
ಪಾರ್ಲಿಮೆಂಟ್ ಬೋರ್ಡ್ ಮೀಟಿಂಗ್ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, "ಸಂಸತ್ತಿನಲ್ಲಿ ಚರ್ಚೆಗಳು ನಡೆಯಲು ಕಾಂಗ್ರೆಸ್ ಸೇರಿದಂತೆ ಎಲ್ಲ ಪಕ್ಷಗಳೂ ಅವಕಾಶ ಮಾಡಿಕೊಡಬೇಕು. ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ ಅನ್ನಿಸುತ್ತೆ. ಪ್ರಜಾಪ್ರಭುತ್ವದ ಬಗ್ಗೆ ಅವರಿಬ್ಬರೂ ಭಾಷಣ ಮಾಡುತ್ತಾರೆ. ಆದರೆ ಅದನ್ನು ಸಂಸತ್ತಿನ ಒಳಗೇ ಪಾಲಿಸುವುದಿಲ್ಲ. ಅವರ ರಕ್ತದಲ್ಲೇ ಪ್ರಜಾಪ್ರಭುತ್ವವಿಲ್ಲ" ಎಂದು ಅವರು ಲೇವಡಿ ಮಾಡಿದ್ದಾರೆ.
ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಸಂಸತ್ತಿನಲ್ಲಿ ಎಲ್ಲ ವಿಷಯಗಳ ಬಗ್ಗೆಯೂ, ಎಲ್ಲ ಪಕ್ಷಗಳೂ ಶಾಂತಿಯುತವಾಗಿ ಚರ್ಚೆ ನಡೆಸಬೇಕು ಎಂದು ಅವರು ಹೇಳಿದರು. ಲೋಕಸಭೆ ಮತ್ತು ರಾಜ್ಯ ಸಭೆಯಲ್ಲಿ ವಿರೋಧಪಕ್ಷದ ನಾಯಕರು ಗಲಾಟೆ ಎಬ್ಬಿಸಿದ್ದನ್ನು ಅವರು ವಿರೋಧಿಸಿದರು.