ಮೋದಿ ಜಾಹೀರಾತು: ಪೇಚಿಗೀಡಾದ ಕಾಂಗ್ರೆಸ್ಸಿಂದ ವಾಪಸ್?
ನವದೆಹಲಿ, ಜ.25- 'ಚಾಯ್ ವಾಲಾ' ಬಿಜೆಪಿಯ ಪ್ರಧಾನಿ ಆಕಾಂಕ್ಷಿ ನರೇಂದ್ರ ಮೋದಿ ಮುಂದಿನ ಲೋಕಸಭಾ ಚುನಾವಣೆಯತ್ತ ದಾಪುಗಾಲು ಹಾಕುತ್ತಿದ್ದರೆ ಇತ್ತ ಕಾಂಗ್ರೆಸ್ ಪಕ್ಷವು ಸೈಲೆಂಟಾಗಿ ಅವರ ಹಾದಿಯಲ್ಲೇ ಸಾಗುತ್ತಿರುವಂತಿದೆ.
ಕಾಪಿ ಕ್ಯಾಟ್ ಅವಾಂತರ!:

ಹೌದು ಲೋಕಸಭಾ ಚುನಾವಣೆ ನಿಮಿತ್ತ ಈಗಾಗಲೇ ಮಾಧ್ಯಮಗಳಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಜಾಹೀರಾತು ಪ್ರವಾಹ ಹರಿಯುತ್ತಿದೆ. ಇದಕ್ಕಾಗಿ ಪಕ್ಷವು 500 ಕೋಟಿ ರೂ ವ್ಯಯಿಸುತ್ತಿದೆ. ಈ ಮಧ್ಯೆ, ಕಾಂಗ್ರೆಸ್ ಪಕ್ಷದ ಪ್ರಚಾರ ಸಾರಥ್ಯ ಹೊತ್ತಿರುವ AICC ಉಪಾಧ್ಯಕ್ಷ ರಾಹುಲ್ ಗಾಂಧಿ ಭಾವಚಿತ್ರವುಳ್ಳ ಕಾಂಗ್ರೆಸ್ ಜಾಹೀರಾತು ಆ ಪಕ್ಷಕ್ಕೆ ತೀವ್ರ ಮುಜುಗರ ತಂದಿದೆ.
ಸದರಿ ಜಾಹೀರಾತಿನಲ್ಲಿ ಬಳಸಿರುವ 'ಮೈ ನಹೀ, ಹಮ್' (ನಾನು ಅಲ್ಲ, ನಾವು) ಎಂಬ ಘೋಷ ವಾಕ್ಯವು 2011ರಲ್ಲಿಯೇ ಬಿಜೆಪಿಯ ಹಾಲಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಭಾಗವಹಿಸಿದ್ದ ಸಮಾರಂಭದಲ್ಲಿಯೇ ಬಳಕೆಯಾಗಿತ್ತು. ಇದರಿಂದ ಕಾಂಗ್ರೆಸ್ ತೀವ್ರ ಮುಜುಗರಕ್ಕೀಡಾಗಿದ್ದರೆ, ಬಿಜೆಪಿ ಪಕ್ಷವು ಮುಸಿಮುಸಿ ನಗುವಂತಾಗಿದೆ.
ಆದರೆ ಅಚಾತುರ್ಯದಿಂದ ಎಚ್ಚೆತ್ತಿರುವ ಕಾಂಗ್ರೆಸ್, ಪ್ರಮುಖ ಪ್ರತಿಪಕ್ಷಕ್ಕೆ ಅನಾಯಾಸವಾಗಿ ಮತ್ತೊಂದು ಅಸ್ತ್ರವನ್ನು ಸ್ವತಃ ತಾನೇ ಎತ್ತಿಕೊಡುವ ಬದಲು ಜಾಹೀರಾತನ್ನು ತಕ್ಷಣ ವಾಪಸ್ ತೆಗೆದುಕೊಳ್ಳುವ ಆಲೋಚನೆ ನಡೆಸಿದೆ.
ನಕಲ್ ಕೆ ಲಿಯೆ ಅಕಲ್ ಚಾಹಿಯೆ:
ಜಾಹೀರಾತಿಗೆ ಸಂಬಂಧಿಸಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರೂ ಪ್ರತಿಕ್ರಿಯೆ ನೀಡಿದ್ದಾರೆ. ತಾನು ಬಳಸಿದ್ದ ಪದಗುಚ್ಛವನ್ನೇ ಕಾಂಗ್ರೆಸ್ ಪಕ್ಷ ತನ್ನ ಜಾಹೀರಾತಿನಲ್ಲಿ ಬಳಸಿದೆ. ಇದು 'ಕಾಪಿ-ಕ್ಯಾಟ್' ಎಂದಿದ್ದಾರೆ ಮೋದಿ.
'ನಕಲ್ ಕೆ ಲಿಯೆ ಅಕಲ್ ಚಾಹಿಯೆ' (ನಕಲಿ ಮಾಡಲೂ ಬುದ್ಧಿವಂತಿಕೆ ಬೇಕು). ಕಾಂಗ್ರೆಸ್ ಪಕ್ಷವು ಮೋದಿಯನ್ನು ದ್ವೇಷಿಸುತ್ತದೆ, ಆದರೆ ಅವರ ಟ್ಯಾಗ್ ಲೈನ್ ಅನ್ನು ಪ್ರೀತಿಸುತ್ತದೆ. ರಾಹುಲ್ ಅವರು ಸ್ಲೋಗನ್ ಅನ್ನಷ್ಟೇ ಕದಿಯಬಹುದು, ಆದರೆ, ಮೋದಿಯವರ ಅನುಭವ ಹಾಗೂ ಸಾಮರ್ಥ್ಯವನ್ನು ಹೊಂದಲು ಸಾಧ್ಯವೇ?' ಎಂದು ಬಿಜೆಪಿ ವಕ್ತಾರ ಶಹನವಾಜ್ ಹುಸೇನ್ ಲೇವಡಿ ಮಾಡಿದ್ದಾರೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications