ಕಾಂಗ್ರೆಸ್ ನ ಭವಿಷ್ಯದ ವಿತ್ತ ಸಚಿವರ ಬಜೆಟ್ ಕಾಪಿ ಐಪ್ಯಾಡ್ ನಲ್ಲಿ: ಚಿದಂಬರಂ
ನವದೆಹಲಿ, ಜುಲೈ 05: "ಕಾಂಗ್ರೆಸ್ ನ ಭವಿಷ್ಯದ ವಿತ್ತ ಸಚಿವರು ಐಪ್ಯಾಡ್ ನಲ್ಲಿ ಬಜೆಟ್ ಕಾಪಿ ತರುತ್ತಾರೆ, ನೋಡುತ್ತಿರಿ" ಎಂದು ಮಾಜಿ ವಿತ್ತ ಸಚಿವ ಪಿ ಚಿದಂಬರಂ ಅವರು ವ್ಯಂಗ್ಯವಾಡಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಎನ್ ಡಿಎ ಸರ್ಕಾರದ ಮೊದಲ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ(ಜುಲೈ 5)ಮಂಡಿಸಿದರು.
ಈ ಸಂದರ್ಭದಲ್ಲಿ ನಿರ್ಮಲಾ ಸೀತಾರಾಮನ್ ಅವರು ಎಂದಿನಂತೆ ಚರ್ಮದ ಬ್ರೀಪ್ ಕೇಸ್ ತರುವ ಬದಲು ಕೆಂಪು ಬಣ್ಣದ ಚೀಲವನ್ನು ತಂದಿದ್ದು ಗಮನ ಸೆಳೆದಿತ್ತು. ವಸಾಹತುಶಾಹಿ ಸಂಸ್ಕೃತಿಗೆ ವಿದಾಯ ಹಾಡಿ, ಭಾರತೀಯ ಅಸ್ಮಿತೆಯನ್ನು ಅಭಿವ್ಯಕ್ತಿಸುವ ಸಂಕೇತವಾಗಿ ನಿರ್ಮಲಾ ಸೀತಾರಾಮನ್ ಅವರು ಈ ರೀತಿ ಚೀಲವನ್ನು ಹೊತ್ತು ತಂದಿದ್ದಾಗಿ ಬಿಜೆಪಿ ಸಮರ್ಥಿಸಿಕೊಂಡಿತ್ತು.

ಬ್ರಿಟಿಶ್ ಸಂಸ್ಕೃತಿಯನ್ನೇ ಇದುವರೆಗೆ ಅನುಸರಿಸಲಾಗುತ್ತಿದ್ದರಿಂದ ಬಜೆಟ್ ಪ್ರತಿಯನ್ನು ಬ್ರೀಫ್ ಕೇಸಿನಲ್ಲಿಯೇ ತರಲಾಗುತ್ತಿತ್ತು. ಆದರೆ ಇದೀಗ ನಿರ್ಮಲಾ ಸೀತಾರಾಮನ್ ಅವರು ಮಡಿಚಿತ ಕೆಂಪು ಬಟ್ಟೆಯಂತೆ ಕಾಣುವ ಚೀಲದಲ್ಲಿ ಬಜೆಟ್ ತಂದಿರುವುದನ್ನು ಪಿ ಚಿದಂಬರಂ ಟೀಕಿಸುವ ಧಾಟಿಯಲ್ಲಿ ಮಾತನಾಡಿದರು.
"ಅವರು(ನಿರ್ಮಲಾ ಸೀತಾರಾಮನ್) ಕೆಂಪು ಬಟ್ಟೆಯಲ್ಲಿ ಬಜೆಟ್ ಪ್ರತಿಯನ್ನು ತರಬಹುದು. ಆದರೆ ನೆನಪಿಡಿ, ಮುಂದೊಮ್ಮೆ ಕಾಂಗ್ರೆಸ್ ನ ಭವಿಷ್ಯದ ವಿತ್ತ ಸಚಿವರು ಐಪ್ಯಾಡ್ ನಲ್ಲಿ ಬಜೆಟ್ ಪ್ರತಿಯನ್ನು ಹೊತ್ತು ತರುತ್ತಾರೆ" ಎಂದು ಅವರು ಹೇಳಿದರು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications