ಲೋಕಸಭೆ 2019 : ಬಿಜೆಪಿಯ ನಿದ್ದೆ ಕೆಡಿಸಲಿದೆ ಕಾಂಗ್ರೆಸ್ ನ ಹೊಸ ಕಾರ್ಯತಂತ್ರ!
Recommended Video

ನವದೆಹಲಿ, ನವೆಂಬರ್ 30 : 2019 ರ ಮೇ ತಿಂಗಳಿನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ಈಗಲೇ ಕಾರ್ಯತಂತ್ರ ರೂಪಿಸುತ್ತಿರುವ ಕಾಂಗ್ರೆಸ್, ಆಡಳಿತಾರೂಢ ಬಿಜೆಪಿಯನ್ನು ಬಗ್ಗುಬಡಿಯಲು ಇರುವ ಎಲ್ಲ ಸಾಧ್ಯತೆಗಳನ್ನೂ ಕಾರ್ಯರೂಪಕ್ಕೆ ತರಲು ನಿರ್ಧರಿಸಿದೆ.
ಮಧ್ಯಮ ವರ್ಗದ ಜನರನ್ನು ಓಲೈಸುವುದನ್ನು ಮುಖ್ಯ ಅಜೆಂಡಾವನ್ನಾಗಿ ಇಟ್ಟುಕೊಂಡಿರುವ ಕಾಂಗ್ರೆಸ್ , ಇದರೊಟ್ಟಿಗೆ ಬಿಜೆಪಿಯ ನಿದ್ದೆ ಕೆಡಿಸುವಂಥ ಕೆಲವು ಕಾರ್ಯತಂತ್ರಗಳನ್ನು ತನ್ನ ಬತ್ತಳಿಕೆಯಲ್ಲಿ ಇರಿಸಿಕೊಂಡಿದೆ.
ನರೇಂದ್ರ ಮೋದಿ ನಾಯಕತ್ವದ ಬಗ್ಗೆ ಮುನಿಸಿಕೊಂಡು ಬಿಜೆಪಿ ತೊರೆದ, ಮತ್ತು ಬಿಜೆಪಿ ವಿರೋಧಿ ಮನೋಭಾವ ಹೊಂದಿರುವವರನ್ನು ಹಲವಾರು ನಾಯಕರನ್ನು ಸೇರಿಸಿ, ಅವರನ್ನು ಕಾಂಗ್ರೆಸ್ ಪರ ಪ್ರಚಾರಕ್ಕಲ್ಲದಿದ್ದರೂ, ಬಿಜೆಪಿ ವಿರುದ್ಧದ ಪ್ರಚಾರಕ್ಕಾದರೂ ಬಳಸಿಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ. ಈ ತಂತ್ರ ಕೈಹಿಡಿದರೆ ಬಿಜೆಪಿಗೆ ನಷ್ಟವಾಗುವುದು ಖಂಡಿತ.
ಇದನ್ನೇ ರಾಜಕೀಯದಲ್ಲಿ ಮೈನಸ್ ಡಿಗ್ರಿ ಪಾಲಿಟಿಕ್ಸ್ ಅಂತ ಕರೆಯುತ್ತಾರೆ. ಕರ್ನಾಟಕದಲ್ಲಿ 2013ರಲ್ಲಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ನಾಯಕರು ಅನುಸರಿಸಿದ್ದು ಇದೇ ಮೈನಸ್ ಡಿಗ್ರಿ ಪಾಲಿಟಿಕ್ಸ್ ಎಂಬುದನ್ನು ಮರೆಯಬಾರದು. ಆದರೆ ಈ ನೆಗೆಟಿವ್ ಸ್ಟ್ರಾಟಜಿ ಕಾಂಗ್ರೆಸ್ ಕೈಹಿಡಿಯುವುದಾ ಅಥವಾ ಕೈಕೊಡುವುದಾ?

ಯಾರ್ಯಾರ ಮೇಲೆ ಕಾಂಗ್ರೆಸ್ ಕಣ್ಣು?
ರಿಸರ್ವ್ ಬ್ಯಾಂಕ ನ ಮಾಜಿ ಗವರ್ನರ್ ರಘುರಾಮ್ ರಾಜನ್, ಬಿಜೆಪಿಯ ಮಾಜಿ ನಾಯಕ ಯಶವಂತ್ ಸಿನ್ಹಾ, ವಕೀಲ ಪ್ರಶಾಂತ್ ಭೂಷಣ್ ಸೇರಿದಂತೆ ಹಲವು ನಾಯಕರ ಮೇಲೆ ಕಾಂಗ್ರೆಸ್ ಕಣ್ಣು ಹಾಕಿದೆ! ಇವರೆಲ್ಲ ನೇರವಾಗಿ ಪ್ರಚಾರದಲ್ಲಿ ಭಾಗವಹಿಸಲು ಒಪ್ಪದಿರಬಹುದಾದ್ದರಿಂದ ಪರೋಕ್ಷವಾಗಿ ಅವರ ಸಲಹೆ, ಸಹಕಾರವನ್ನು ಕಾಂಗ್ರೆಸ್ ಪಡೆಯಲಿದೆ.

ಪರ್ಯಾಯ ಅಜೆಂಡಾಗಳು
ಕಾಂಗ್ರೆಸ್ ಈ ಬಾರಿ ಲೋಕಸಭಾ ಚುನಾವಣೆಯನ್ನು ಗೆಲ್ಲಲೇ ಬೇಕೆಂಬ ಜಿದ್ದಿಗೆ ಬಿದ್ದಿದ್ದು, ಒಂದಲ್ಲ, ನೂರು ಅಜೆಂಡಾಗಳನ್ನು ತನ್ನ ಕೈಲಿರಿಸಿಕೊಂಡಿದೆ. ಆಲ್ ಇಂಡಿಯಾ ಪ್ರೊಫೆಶನಲ್ ಕಾಂಗ್ರೆಸ್(ಎಐಪಿಸಿ) ಘಟಕವು ಇತ್ತೀಚೆಗಷ್ಟೇ ನಿವೃತ್ತ ನ್ಯಾಯಮೂರ್ತಿ ಚಲಮೇಶ್ವರ್ ಅವರನ್ನು ಕರೆಸಿ, ಚರ್ಚೆ ನಡೆಸಿದೆ. ಅಷ್ಟೇ ಅಲ್ಲ, ನ.30 ರಂದು ರಾಷ್ಟ್ರೀಯ ಸೆಮಿನಾರ್ ವೋಂದನ್ನು ಈ ಘಟಕ ಆಯೋಜಿಸಿದ್ದು, ಈ ಕಾರ್ಯಕ್ರಮಕ್ಕೆ ಸಾಕಷ್ಟು ವೈದ್ಯರು, ಇಂಜಿನಿಯರ್ ಗಳು, ಕಾನೂನು ಮತ್ತು ಹಣಕಾಸು ತಜ್ಞರು ಭಾಗವಹಿಸಲಿದ್ದಾರೆ. ಕಾರ್ಯಕ್ರಮವು ಎಐಪಿಸಿ ಮುಖ್ಯಸ್ಥ ಶಶಿ ತರೂರ್ ಅವರ ನೇತೃತ್ವದಲ್ಲಿ ನಡೆಯಲಿದೆ. ಮಾಜಿ ವಿತ್ತ ಸಚಿವ ಪಿ ಚಿದಂಬರಂ, ಮುಖಂಡರಾದ ಅಭಿಷೇಕ್ ಮನು ಸಿಂಗ್ವಿ, ರಂದೀಪ್ ಸುರ್ಜೇವಾಲಾ ಮತ್ತು ಸಲ್ಮಾನ್ ಖುರ್ಷಿದ್, ಕಪಿಲ್ ಸಿಬಲ್ ಮುಂತಾದವರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಮ ವರ್ಗದ ಓಲೈಕೆಗೆ ಒತ್ತು!
ದೇಶದಲ್ಲಿ ಅತೀ ಹೆಚ್ಚಿನ ಸಂಖ್ಯೆಯ ಮತದಾರರು ಮಧ್ಯಮ ವರ್ಗದವರು ಎಂಬುದನ್ನು ಬಲ್ಲ ಕಾಂಗ್ರೆಸ್ ಅವರತ್ತಲೇ ಹೆಚ್ಚು ಒತ್ತು ನೀಡಲು ನಿರ್ಧರಿಸಿದೆ. ಅದಕ್ಕಾಗಿ ಮುಖಂಡ ಸಲ್ಮಾನ್ ಸೋಜ್ ಮತ್ತು ಅಮಿತ್ ಸಿಂಗ್ ಅವರನ್ನು ಉಸ್ತುವಾರಿಗಾಗಿ ನೇಮಿಸಲಾಗಿದೆ. ಬೆಂಗಳೂರು, ಚೆನ್ನೈ, ಲಕ್ನೋ, ಜೇಮ್ಶೆಡ್ಪುರ ಸೇರಿದಂತೆ ನಾನಾ ನಗರಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ ಮಧ್ಯಮ ವರ್ಗದ ಮತದಾರರನ್ನು ಸೆಳೆಯುವ ಇಂಗಿತ ಕಾಂಗ್ರೆಸ್ ನದ್ದು.

ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಬಿಜೆಪಿ ಮಾಜಿ ನಾಯಕ!
ಇತ್ತೀಚೆಗೆ ಮುಂಬೈಯಲ್ಲಿ ನಡೆದ ಎಐಪಿಸಿ ಕಾರ್ಯಕ್ರಮದಲ್ಲಿ ಬಿಜೆಪಿಯ ಮಾಜಿ ಮುಖಂಡ ಮತ್ತು ಕೇಂದ್ರದ ಮಾಜಿ ಸಚಿವ ಯಶವಂತ್ ಸಿನ್ಹಾ ಅವರು ಸಹ ಭಾಗವಹಿಸಿ ಅಚ್ಚರಿ ಮೂಡಿಸಿದ್ದರು. ಅಷ್ಟೇ ಅಲ್ಲ, ಸುಪ್ರೀಂ ಕೋರ್ಟ್ ವಕೀಲ ಪ್ರಶಾಂತ್ ಭೂಷಣ್ ಅವರೂ ಭಾಗವಹಿಸಿದ್ದರು. ಕೇವಲ ಇಷ್ಟೇ ಜನರಲ್ಲ, ಬೇರೆ ಬೇರೆ ಪಕ್ಷದ ಇನ್ನೂ ಹಲವು ಮುಖಂಡರು ಕಾಂಗ್ರೆಸ್ ನೊಂದಿಗೆ ಗುರುತಿಸಿಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications