ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್ ಮುಖಂಡ ಶಶಿ ತರೂರಗೆ ಪ್ರತಿಷ್ಠಿತ ಪ್ರಶಸ್ತಿ

|
Google Oneindia Kannada News

ನವದೆಹಲಿ, ಡಿಸೆಂಬರ್ 18: ಕಾಂಗ್ರೆಸ್ ಮುಖಂಡ, ಕೇರಳದ ತಿರುವನಂತಪುರದ ಸಂಸದ ಶಶಿ ತರೂರ್ ಅವರು 2019 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಅವರು 2016 ರಲ್ಲಿ ಪ್ರಕಟಿಸಿದ್ದ An Era of Darkness: The British Empire in India ಪುಸ್ತಕಕ್ಕೆ ಪ್ರಶಸ್ತಿ ದೊರಕಿದ್ದು, ಇಂಗ್ಲೀಷ್ ಭಾಷೆಯ ನಾನ್ ಪಿಕ್ಸನ್ ವಿಭಾಗದಲ್ಲಿ ತರೂರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸಾಹಿತ್ಯ ಅಕಾಡೆಮಿಯು ತನ್ನ ಪತ್ರಿಕಾ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದೆ. ಇವರ ಜೊತೆ ದೇಶದ 21 ಭಾಷೆಯ 23 ಲೇಖಕರು, ಸಾಹಿತಿಗಳು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಸಂಸದ ಶಶಿ ತರೂರ್ ಗೆ ನ್ಯಾಯಾಲಯದಿಂದ ಶುಭಸುದ್ದಿ ಸಂಸದ ಶಶಿ ತರೂರ್ ಗೆ ನ್ಯಾಯಾಲಯದಿಂದ ಶುಭಸುದ್ದಿ

Congress Leader And MP Shashi Tharoor Selected For Sahitya Academy Prize

ನಾನ್ ಪಿಕ್ಸನ್ ವಿಭಾಗದಲ್ಲಿ ಕನ್ನಡಕ್ಕೆ ಲೇಖಕಿ ವಿಜಯಮ್ಮ ಅವರಿಗೆ 2019 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿದೆ. ಪ್ರಶಸ್ತಿಯೂ 1 ಲಕ್ಷ ರುಪಾಯಿ ನಗದು ಹಾಗೂ ಸ್ಮರಣಿಕೆ ಒಳಗೊಂಡಿರುತ್ತದೆ. ಫೆಬ್ರುವರಿ 25, 2020 ರಂದು ನವದೆಹಲಿಯಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ. ಸದ್ಯ ಕನ್ನಡಿಗ, ಹಿರಿಯ ಸಾಹಿತಿ ಚಂದ್ರಶೇಖರ ಕಂಬಾರ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

English summary
Congress Leader And MP Shashi Tharoor Selected For Central Sahitya Academy Prize. this prize for Tharoor's An Era of Darkness: The British Empire in India book. it was published in 2016.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X