ಕಾಶ್ಮೀರದಲ್ಲಿ ಕಪ್ಪು ಹಿಮ ಬಿದ್ದಾಗ ಬಿಜೆಪಿ ಸೇರುತ್ತೇನೆ; ಗುಲಾಂ ನಬಿ
ನವದೆಹಲಿ, ಫೆಬ್ರುವರಿ 12: ರಾಜ್ಯಸಭೆಯಿಂದ ನಿವೃತ್ತಿಯಾಗುತ್ತಿರುವ ಕಾಂಗ್ರೆಸ್ ಮುಖಂಡ ಗುಲಾಬ್ ನಬಿ ಆಜಾದ್ ಅವರು ಬಿಜೆಪಿ ಸೇರುವರೆಂಬ ವದಂತಿ ಹರಡಿದ್ದು, ಈ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ.
ರಾಜ್ಯಸಭೆಯಲ್ಲಿ ನಿವೃತ್ತರಾಗುತ್ತಿರುವ ಸದಸ್ಯರಿಗೆ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ವಿದಾಯ ಭಾಷಣ ಮಾಡಿದ್ದು, ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಅವರ ಕಾರ್ಯವೈಖರಿ ಬಗ್ಗೆ ಶ್ಲಾಘಿಸಿದ್ದರು. "ಗುಲಾಂ ನಬಿ ನನ್ನ ನಿಜ ಸ್ನೇಹಿತ" ಎಂದು ಕಣ್ಣೀರು ಹಾಕಿದ್ದರು. ಪಕ್ಷದ ಬಗ್ಗೆ ಮಾತ್ರವಲ್ಲದೇ ದೇಶದ ಬಗ್ಗೆ ಅವರು ಚಿಂತಿಸುತ್ತಿದ್ದರು ಎಂದು ಹೊಗಳಿದ್ದರು. ಅವರಿಗೆ ಪ್ರತಿಯಾಗಿ, "ಮೋದಿಯವರು ತಮ್ಮ ವಿರುದ್ಧದ ಮಾತುಗಳನ್ನು ವೈಯಕ್ತಿಕವಾಗಿ ತೆಗೆದುಕೊಳ್ಳಲಿಲ್ಲ. ವೈಯಕ್ತಿಕ ಹಾಗೂ ರಾಜಕೀಯವನ್ನು ಅವರು ಬೇರೆ ಬೇರೆಯಾಗಿ ನೋಡುತ್ತಿದ್ದರು. ಎಷ್ಟೋ ಬಾರಿ ನಾವು ವಾಗ್ಯುದ್ಧ ನಡೆಸಿದ್ದೇವೆ. ಆದರೆ ಮೋದಿ ಅದನ್ನು ವೈಯಕ್ತಿಕವಾಗಿ ತೆಗೆದುಕೊಳ್ಳಲಿಲ್ಲ" ಎಂದು ಆಜಾದ್ ಧನ್ಯವಾದ ಸಲ್ಲಿಸಿದ್ದರು.
ಬಿಜೆಪಿ ನಾಯಕ ದಿ.ಅಟಲ್ ಬಿಹಾರಿ ವಾಜಪೇಯಿ ಅವರೊಂದಿಗಿನ ಒಡನಾಟದ ಕುರಿತು ರಾಜ್ಯ ಸಭೆಯಲ್ಲಿ ಮಾತನಾಡಿದ್ದರು. ಆನಂತರ ಗುಲಾಂ ನಬಿ ಆಜಾದ್ ಅವರು ಬಿಜೆಪಿ ಸೇರಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು.

ಈ ವದಂತಿ ಕುರಿತು ಪ್ರತಿಕ್ರಿಯೆ ನೀಡಿರುವ ಗುಲಾಂ ನಬಿ ಆಜಾದ್, "ಕಾಶ್ಮೀರದಲ್ಲಿ ಯಾವಾಗ ಕಪ್ಪು ಹಿಮ ಬೀಳುತ್ತದೋ ಆಗ ನಾನು ಬಿಜೆಪಿ ಸೇರುತ್ತೇನೆ" ಎಂದು ಹೇಳಿದ್ದಾರೆ.
ಮೋದಿ ಅವರು ನನಗೆ 90ರ ದಶಕದಿಂದಲೂ ತಿಳಿದಿದ್ದಾರೆ. ಕೆಲವು ಟಿವಿ ಚರ್ಚೆಗಳಲ್ಲೂ ನಾವು ಭಾಗವಹಿಸಿದ್ದೆವು. ಜಗಳ ಆಡುತ್ತಿದ್ದೆವು, ಒಟ್ಟಿಗೆ ಟೀ ಕುಡಿಯುತ್ತಿದ್ದೆವು. ಹಾಗೆಂದು ನಾನು ಬಿಜೆಪಿ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಆಜಾದ್ ಅವರಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪತ್ರ ಬರೆದಿದ್ದು, ಪಕ್ಷದ ಕಾರ್ಯದರ್ಶಿಯಾಗಿ ಆಜಾದ್ ಕಾರ್ಯವೈಖರಿಯನ್ನು ಶ್ಲಾಘಿಸಿದ್ದಾರೆ. ಈಚೆಗೆ ರಾಹುಲ್ ಗಾಂಧಿ ಅವರನ್ನು ಗುಲಾಂ ನಬಿ ಆಜಾದ್ ಅವರು ಭೇಟಿಯಾಗಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications