ವಿವೇಕ್ ದೋವಲ್ ಕ್ಷಮೆ ಕೇಳಿದ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್
ನವದೆಹಲಿ, ಡಿಸೆಂಬರ್ 19: 2019ರಲ್ಲಿನ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಪುತ್ರ ವಿವೇಕ್ ದೇವಲ್ ಅವರ ಬಳಿ ಕ್ಷಮೆ ಕೇಳಿದ್ದಾರೆ.
2019ರಲ್ಲಿ ಚುನಾವಣೆ ಸಂದರ್ಭ ಜೈರಾಮ್ ರಮೇಶ್ ಅವರು ವಿವೇಕ್ ದೋವಲ್ ವಿರುದ್ಧ ಕೆಲವು ಆರೋಪಗಳನ್ನು ಮಾಡಿದ್ದರು. ಕ್ಯಾರವಾನ್ ಮಾಸಿಕದಲ್ಲಿ ಆ ಆರೋಪ ಪ್ರಕಟವಾಗಿದ್ದು, ವಿವೇಕ್ ಅವರು ಜೈರಾಮ್ ರಮೇಶ್ ಹಾಗೂ ಮಾಸಿಕದ ಮೇಲೆ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಶನಿವಾರ ನ್ಯಾಯಾಲಯಕ್ಕೆ ಹಾಜರಾದ ಜೈರಾಮ್ ರಮೇಶ್, ನ್ಯಾಯಾಧೀಶ ಸಚಿನ್ ಗುಪ್ತಾ, ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎದುರು ವಿವೇಕ್ ಅವರಿಗೆ ಕ್ಷಮೆ ಯಾಚಿಸಿದ್ದು, "ಚುನಾವಣಾ ಪ್ರಚಾರದ ಭರದಲ್ಲಿದ್ದ ನಾನು ಕೆಲವು ಆರೋಪಗಳನ್ನು ಮಾಡಿದ್ದೇನೆ. ಆರೋಪ ಮಾಡುವ ಮುನ್ನ ಪರಿಶೀಲಿಸಬೇಕಿತ್ತು" ಎಂದಿದ್ದಾರೆ.

"ನನ್ನ ಹೇಳಿಕೆಗಳಿಂದ ವಿವೇಕ್ ಅವರಿಗೆ, ಅವರ ಕುಟುಂಬದ ಭಾವನೆಗೆ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ" ಎಂದು ಹೇಳಿದ್ದಾರೆ.
ಜೈರಾಮ್ ಅವರ ಕ್ಷಮೆಯನ್ನು ಒಪ್ಪಿಕೊಂಡಿರುವ ವಿವೇಕ್ ದೋವಲ್, "ಜೈರಾಮ್ ಅವರ ಕ್ಷಮೆಯನ್ನು ಸ್ವೀಕರಿಸಿದ್ದೇವೆ. ಅವರ ವಿರುದ್ಧದ ಮಾನನಷ್ಟ ಮೊಕದ್ದಮೆಯನ್ನು ಹಿಂಪಡೆಯುತ್ತೇವೆ. ಆದರೆ ಪತ್ರಿಕೆ ವಿರುದ್ಧ ಮೊಕದ್ದಮೆ ಮುಂದುವರೆಸುತ್ತೇವೆ" ಎಂದು ತಿಳಿಸಿದ್ದಾರೆ.
ಜೈರಾಮ್ ರಮೇಶ್ ಅವರ ಮೇಲಿದ್ದ ಪ್ರಕರಣ ಅಧೀಕೃತವಾಗಿ ಕೊನೆಯಾಗಿದ್ದು, ನಿಯತಕಾಲಿಕೆಯ ಮೇಲಿನ ಪ್ರಕರಣವನ್ನು ಬೇರೆ ನ್ಯಾಯಾಧೀಶರು ಮುಂದುವರೆಸುವುದಾಗಿ ತಿಳಿದುಬಂದಿದೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications