ಅಚ್ಚರಿಯ ಸುದ್ದಿ: ಮೋದಿ ಪರ ನಿಂತ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್!
ನವದೆಹಲಿ, ಆಗಸ್ಟ್ 22: ಅತ್ಯಂತ ಅಚ್ಚರಿ ಎನ್ನಿಸುವಂಥ ಬೆಳವಣಿಗೆಯಲ್ಲಿ ಕಾಂಗ್ರೆಸ್ ನ ಹಿರಿಯ ನಾಯಕರ ಜೈರಾಮ್ ರಮೇಶ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಬೆಂಬಲಕ್ಕೆ ನಿಂತಿದ್ದಾರೆ!
2014 ರಿಂದ 2019 ರವರೆಗೆ ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ ಎಲ್ಲಾ ಕೆಲಸಗಳನ್ನೂ ತೆಗಳುವುದಕ್ಕೆ ಬರುವುದಿಲ್ಲ. ಹಾಗೊಮ್ಮೆ ಅವರು ಯಾವ ಉತ್ತಮ ಕೆಲಸವನ್ನೂ ಮಾಡಿಲ್ಲ ಎಂದಾಗಿದ್ದರೆ ಮತದಾರರು ಈ ಪ್ರಮಾಣದಲ್ಲಿ ಅವರ ಕೈ ಹಿಡಿಯುತ್ತಿರಲಿಲ್ಲ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಎಲ್ಲಾ ಬಾರಿಯೂ ಋಣಾತ್ಮಕವಾಗಿಯೇ ನೋಡುವುದಕ್ಕೆ ಬರುವುದಿಲ್ಲ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಮೋದಿಯವರು ಜನರಿಗೆ ಅರ್ಥವಾಗುವ ಭಾಷೆಯಲ್ಲಿ ಮಾತನಾಡುತ್ತಾರೆ. ಅದು ಜನರನ್ನು ಅರೊಂದಿಗೆ ಸಂಪರ್ಕಿಸುತ್ತಿದೆ. ಜೊತೆಗೆ ಏನೇ ಮಾಡಿದರೂ ಅದನ್ನು ಗುರುತಿಸುವಂತೆ ಮಾಡುತ್ತಿದ್ದಾರೆ. ಇದನ್ನು ಅರ್ಥಮಾಡೀಕೊಂಡು, ಪ್ರತಿತಂತ್ರ ಹಣಿಯದಿದ್ದರೆ ಮುಂದೆ ಕಷ್ಟವಾಗುತ್ತದೆ ಎಂದು ಕಾಂಗ್ರೆಸ್ ನಾಯರಿಗೆ ಕಿವಿಮಾತು ಹೇಳುವ ಧಾಟಿಯಲ್ಲಿ ಹೇಳಿದ್ದಾರೆ.
"ನಾನೇನು ಯಾರೋ ಮೋದಿಯನ್ನು ಹೊಗಳಬೇಕು ಎಂದು ಹೇಳುತ್ತಿಲ್ಲ. ಆದರೆ ಅವರು ಸರ್ಕಾರದಲ್ಲಿತಂದಿರುವ ಕೆಲವು ಬದಲಾವಣೆಯನ್ನು ಗಮನಿಸಬೇಕು" ಎಮದು ಹೇಳುತ್ತಿದ್ದೇನೆ ಎಂದು ಮಾಜಿ ಕೇಂದ್ರ ಸಚಿವ ಜೈರಾಮ್ ರಮೇಶ್ ಹೇಳಿದರು.
"ಮೋದಿಯವರು ಮಾಡಿದ್ದೆಲ್ಲವನ್ನೂ ಋಣಾತ್ಮಕವಾಗಿಯೇ ನೋಡುವ ಅಗತ್ಯವಿಲ್ಲ. ಅವರ ಆಡಳಿತ ಸಂಪೂರ್ಣ ವಿಭಿನ್ನ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನೇ ನೋಡಿ. ಅದು ಎಷ್ಟು ಯಶಸ್ವಿಯಾಗಿದೆ!" ಎಂದು ಜೈರಾಮ್ ರಮೇಶ್ ಶ್ಲಾಘಿಸಿದರು.
ನಾವು ಮೋದಿ ಸರ್ಕಅರದ ಎಲ್ಲಾ ಕಾರ್ಯಗಳನ್ನೂ ತೆಗಳುತ್ತಲೇ ಸಮಯ ಕಳೆದರೆ ಅದರಿಂದ ನಮಗೇ ಹಾನಿ. ಕೆಲವನ್ನು ನೋಡಿ ಕಲಿಯಬೇಕಾಗುತ್ತದೆ ಎಂದು ಕಾಂಗ್ರೆಸ್ ಮುಖಂಡರಿಗೆ ಕಿವಿಮಾತು ಹೇಳಿದರು.
"ನಾವು ಈ ಬಾರಿ ಚುನಾವಣೆಯ ಪ್ರಚಾರದಲ್ಲಿ ರೈತರ ಸಮಸ್ಯೆಯ ಬಗ್ಗೆ ಮಾತನಾಡಿದೆವು. ಅವಕ್ಕೆಲ್ಲ ಮೋದಿಯೇ ಕಾರಣ ಎಂದೆವು. ಆದರೆ ರೈತರ್ಯಾರೂ ಅದಕ್ಕೆ ಮೋದಿಯೇ ಜವಾಬ್ದಾರಿ ಎಂದುಕೊಳ್ಳಲಿಲ್ಲ. ಅದಕ್ಕೆ ಸಾಕ್ಷಿ ಫಲಿತಾಂಶ!" ಎಂದು ಜೈರಾಮ್ ರಮೇಶ್ ಮೋದಿ ಅವರನ್ನು ಹೊಗಳಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications