ಇದು ಭದ್ರತಾ ವೈಫಲ್ಯವಲ್ಲದೇ ಮತ್ತೇನು?; ರಾಹುಲ್ ಪ್ರಶ್ನೆ
ನವದೆಹಲಿ, ಏಪ್ರಿಲ್ 5: ಛತ್ತೀಸ್ಗಡದ ಬಿಜಾಪುರದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ಸಂದರ್ಭ 22 ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ. ಸರ್ಕಾರದ ಈ ಕಾರ್ಯಾಚರಣೆ ಅಸಮರ್ಥವಾಗಿದೆ. ಇದರ ರೂಪುರೇಷೆಯೇ ಸೂಕ್ತವಾಗಿಲ್ಲ ಎಂದು ಟೀಕಿಸಿದ್ದಾರೆ.
ಸೋಮವಾರ ಈ ಕುರಿತು ಟ್ವೀಟ್ ಮಾಡಿರುವ ಅವರು, "ಈ ಕಾರ್ಯಾಚರಣೆ ಅಸಮರ್ಥವಾಗಿದೆ" ಎಂದು ದೂರಿದ್ದಾರೆ.
ಕಾರ್ಯಾಚರಣೆಯಲ್ಲಿ ಗುಪ್ತದಳದ ವೈಫಲ್ಯವಿಲ್ಲ. ಘಟನೆಯಲ್ಲಿ ಯೋಧರು ಸತ್ತಷ್ಟೇ ಸಂಖ್ಯೆಯಲ್ಲಿ ಮಾವೋವಾದಿ ಉಗ್ರರೂ ಸತ್ತಿದ್ದಾರೆ ಎಂಬ ಸಿಆರ್ಪಿಎಫ್ ಮಹಾನಿರ್ದೇಶಕ ಕುಲದೀಪ್ ಸಿಂಗ್ ಅವರ ಹೇಳಿಕೆಯನ್ನು ಉಲ್ಲೇಖಿಸಿರುವ ರಾಹುಲ್ ಗಾಂಧಿ, "ಗುಪ್ತದಳದ ವೈಫಲ್ಯವಿಲ್ಲ, ಸತ್ತವರ ಪ್ರಮಾಣ 1:1 ಅನುಪಾತದಂತಿದೆ ಎಂದಾದರೆ ಈ ಕಾರ್ಯಾಚರಣೆಯನ್ನು ಸರಿಯಾಗಿ ರೂಪಿಸಿಲ್ಲ ಎಂದೇ ಅರ್ಥವಲ್ಲವೇ? ಇದು ಅಸಮರ್ಥ ಕಾರ್ಯಾಚರಣೆಯಲ್ಲದೇ ಮತ್ತೇನು" ಎಂದು ಪ್ರಶ್ನಿಸಿದ್ದಾರೆ.

ನಕ್ಸಲರ ವಿರುದ್ಧ ಕಾರ್ಯಾಚರಣೆ ಅಥವಾ ಗುಪ್ತಚರ ವೈಫ್ಯಲ್ಯವಾಗಿಲ್ಲ, 25ರಿಂದ 30 ನಕ್ಸಲರನ್ನು ಹತ್ಯೆಗೈಯಲಾಗಿದೆ ಎಂದು ಕುಲದೀಪ್ ಸಿಂಗ್ ಹೇಳಿದ್ದರು.
ಛತ್ತೀಸ್ಗಡದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆದಿದ್ದು, ಕಾರ್ಯಾಚರಣೆಯಲ್ಲಿ ಭದ್ರತಾ ಸಿಬ್ಬಂದಿ ಹಾಗೂ ಯೋಧರ ಮೇಲೆ ನಕ್ಸಲರು ಗುಂಡಿನ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ 22 ಮಂದಿ ಭದ್ರತಾ ಸಿಬ್ಬಂದಿ ಹುತಾತ್ಮರಾಗಿ 31 ಸಿಬ್ಬಂದಿ ಗಾಯಗೊಂಡಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications