Video: ಸಂಸತ್ತಿಗೆ ಸೈಕಲ್ನಲ್ಲಿ ತೆರಳಿದ ಕಾಂಗ್ರೆಸ್ ಸಂಸದ ಡಿಕೆ ಸುರೇಶ್
ನವದೆಹಲಿ, ಜುಲೈ 20: ಭಾರತದಲ್ಲಿ ಪ್ರತಿನಿತ್ಯ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗುತ್ತಿರುವುದನ್ನು ಖಂಡಿಸಿ ಕರ್ನಾಟಕದ ಕಾಂಗ್ರೆಸ್ ಸಂಸದ ಡಿ ಕೆ ಸುರೇಶ್ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ.
ಮಳೆಗಾಲ ಅಧಿವೇಶನದ ಎರಡನೇ ದಿನವಾದ ಮಂಗಳವಾರ ಕಾಂಗ್ರೆಸ್ ಸಂಸದ ಡಿ ಕೆ ಸುರೇಶ್ ಸೈಕಲ್ನಲ್ಲಿ ಸಂಸತ್ತಿಗೆ ಆಗಮಿಸುವ ಮೂಲಕ ಪ್ರತಿಭಟನೆ ತೋರಿದ್ದಾರೆ. ತಮ್ಮ ಬೆಂಬಲಿಗರ ಜೊತೆಗೆ ಸಂಸದರು ಸಂಸತ್ತಿನತ್ತ ಸೈಕಲ್ ಏರಿ ಹೊರಟಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

ಮುಂಗಾರು ಅಧಿವೇಶನ ಆರಂಭವಾದ ಮೊದಲ ದಿನವೇ ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸದರು ಸಂಸತ್ತಿಗೆ ಸೈಕಲ್ ತೆಗೆದುಕೊಂಡು ಹೋಗಿದ್ದರು. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಗೆ ಕಡಿವಾಣ ಹಾಕುವಂತೆ ಆ ಮೂಲಕ ಸರ್ಕಾರವನ್ನು ಎಚ್ಚರಿಸುವ ಕೆಲಸವನ್ನು ಮಾಡಿದ್ದರು.
#WATCH | Congress MP DK Suresh and others cycle to the Parliament in protest against fuel price hike. "I am travelling via bicycle because petrol price is too much. It's difficult for common man to survive with 15-20% inflation," he says pic.twitter.com/OqfGluC6Ia
— ANI (@ANI) July 20, 2021
ದೇಶದಲ್ಲಿ ಮಂಗಳವಾರ ಬದಲಾಗಿಲ್ಲ ಇಂಧನ ಬೆಲೆ:
ಭಾರತದಲ್ಲಿ ಮೇ 4ರಿಂದ ಇತ್ತೀಚಿನವರೆಗೂ ಇಂಧನ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಕಳೆದ ಎರಡ್ಮೂರು ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರವಾಗಿದೆ. ಈವರೆಗೂ ಪೆಟ್ರೋಲ್ ದರ ಒಟ್ಟು 40 ಬಾರಿ ಹಾಗೂ ಡೀಸೆಲ್ ದರ 37 ಬಾರಿ ಏರಿಕೆಯಾಗಿದ್ದು, ಜೂನ್ ತಿಂಗಳಲ್ಲೇ 21 ಬಾರಿ ಬೆಲೆ ಏರಿಕೆಯಾಗಿದೆ. ಮೇ 4ರಿಂದ ಪೆಟ್ರೋಲ್ 11.15 ರು ಪ್ರತಿ ಲೀಟರ್ ಹಾಗೂ ಡೀಸೆಲ್ 10.80 ರು ಪ್ರತಿ ಲೀಟರ್ ಆಗಿದೆ. ಜುಲೈ 20ರಂದು ಇಂಧನ ದರ ಯಾವುದೇ ದರ ಬದಲಾವಣೆಯಾಗಿಲ್ಲ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications