ಅರುಣ್ ಜೇಟ್ಲಿ ಜೊತೆ ಜಗಳಕ್ಕಾಗಿ ಕಾಯುತ್ತಿದ್ದೇನೆ: ಶಶಿ ತರೂರ್
Recommended Video
ನವದೆಹಲಿ, ಆಗಸ್ಟ್ 12: ಅನಾರೋಗ್ಯದಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಮುಖಂಡ, ಸಂಸದ ಅರುಣ್ ಜೇಟ್ಲಿ ಅವರು ಬಹುಬೇಗ ಗುಣಮುಖರಾಗಲಿ ಎಂದು ಹಾರೈಸಿರುವ ಕಾಂಗ್ರೆಸ್ ಮುಖಂಡ ಶಶಿ ತರೂರ್, "ಅವರೊಂದಿಗೆ ರಾಜಕೀಯ ವಿಷಯಕ್ಕೆ ಸಂಬಂಧಿಸಿದಂತೆ ಕಿತ್ತಾಡಲು ನಾನು ಕಾಯುತ್ತಿದ್ದೇನೆ" ಎಂದು ಟ್ವೀಟ್ ಮಾಡಿದ್ದಾರೆ.
"ನನ್ನ ವಿಶ್ವವಿದ್ಯಾಲಯದ ಸಮಕಾಲೀನ, ಗೆಳೆಯ ಅರುಣ್ ಜೇಟ್ಲಿ ಅವರ ಆರೋಗ್ಯ ಸ್ಥಿತಿ ಸದ್ಯಕ್ಕೆ ಸ್ಥಿರವಾಗಿದೆ ಎಂದು ಏಮ್ಸ್ ವರದಿ ತಿಳಿಸಿದೆ. ಅವರು ಬಹುಬೇಗನೇ ಮತ್ತು ಸಂಪೂರ್ಣವಾಗಿ ಗುಣಮುಖರಾಗಲಿ. ಅವರೊಂದಿಗೆ ಮತ್ತೆ ರಾಜಕೀಯ ಖಡ್ಗ ಬೀಸಲು ನಾನು ಕಾಯುತ್ತಿದ್ದೇನೆ" ಎಂದು ಶಶಿ ತರೂರ್ ಹೇಳಿದ್ದಾರೆ.
ಕೆಲವು ದಿನಗಳಿಂದ ಗಂಭೀರ ಆರೋಗ್ಯ ಸಮಸ್ಯೆಗೆ ತುತ್ತಾಗಿರುವ ಅರುಣ್ ಜೇಟ್ಲಅವರು ಈ ಬಾರಿ ಎನ್ ಡಿಎ ಸಂಪುಟಕ್ಕೂ ಅದೇ ಕಾರಣದಿಂದಲೇ ಸೇರಿರಲಿಲ್ಲ. ಶುಕ್ರವಾರ ರಾತ್ರಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಜೇಟ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಏಮ್ಸ್ ಆಸ್ಪತ್ರೆ ತಿಳಿಸಿದೆ.

ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಬಿಜೆಪಿಯ ಹಿರಿಯರು ಏಮ್ಸ್ ಗೆ ಭೇಟಿ ನೀಡಿ ಜೇಟ್ಲಿ ಅವರ ಆರೋಗ್ಯ ವಿಚಾರಿಸಿದ್ದಾರೆ.
ಕಳೆದ ವರ್ಷವಷ್ಟೇ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿರುವ ಅರುಣ್ ಜೇಟ್ಲಿ, ತಮಗೆ ವಿಶ್ರಾಂತಿಯ ಅಗತ್ಯವಿದೆ ಎಂಬ ಕಾರಣದಿಂದಲೇ ಮೋದಿ ಸಂಪುಟದಿಂದ ಆಚೆ ಉಳಿದಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications