ಅಯ್ಯರ್ಗೆ ಕಾಂಗ್ರೆಸ್ ನಾಯಕರಿಂದಲೇ ಚಾಟಿ ಏಟು
ನವದೆಹಲಿ, ಜ. 18 : ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರನ್ನು 'ಚಹಾ ಮಾರುವವ' ಎಂದು ಜರಿದಿದ್ದ ಕಾಂಗ್ರೆಸ್ ನಾಯಕ ಮಣಿ ಶಂಕರ್ ಅಯ್ಯರ್ ಅವರ ವಿರುದ್ಧ ಕಾಂಗ್ರೆಸ್ ನಾಯಕರೇ ಹರಿಹಾಯ್ದಿದ್ದಾರೆ. ವೈಯಕ್ತಿಕ ದಾಳಿಯನ್ನು, ಕೀಳುಮಟ್ಟದ ಟೀಕೆಯನ್ನು ಕಾಂಗ್ರೆಸ್ ಎಂದೂ ಅನುಮೋದಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ಅಜಯ್ ಮೇಕನ್ ಅವರು ಅಯ್ಯರ್ ಅವರನ್ನು ಶನಿವಾರ ತರಾಟೆಗೆ ತೆಗೆದುಕೊಂಡಿದ್ದಾರೆ.
ಬುಧವಾರ ನಡೆದ ಎಐಸಿಸಿ ಸಭೆಯಲ್ಲಿ ಮಣಿ ಶಂಕರ್ ಅಯ್ಯರ್ ಅವರು, "21ನೇ ಶತಮಾನದಲ್ಲಿ ನರೇಂದ್ರ ಮೋದಿ ಭಾರತದ ಪ್ರಧಾನಿ ಎಂದೂ ಆಗುವುದಿಲ್ಲ. ಆದರೆ ಅವರು ಚಹಾ ಮಾರುವವರಿದ್ದರೆ ಅವರಿಗೆ ನಾವು ಸ್ಥಳ ಕಲ್ಪಿಸಿಕೊಡುತ್ತೇವೆ" ಎಂದು ವ್ಯಂಗ್ಯವಾಗಿ ಹೇಳಿಕೆ ನೀಡಿದ್ದರು. ಅವರ ಈ ಹೇಳಿಕೆಯನ್ನು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲ ಕೂಡ ಕಟುವಾಗಿ ಟೀಕಿಸಿದ್ದರು.
ನರೇಂದ್ರ ಮೋದಿ ಅವರು ತಾವು ಬಾಲ್ಯದಿಂದ ಸಂಘರ್ಷಕರ ಹಾದಿಯಲ್ಲಿ ಸಾಗಿಬಂದ ಹಿನ್ನೆಲೆಯನ್ನು ಪ್ರಸ್ತಾಪಿಸುತ್ತ, ನೆಹರೂ-ಗಾಂಧಿ ಮನೆತನವನ್ನು ತಮ್ಮ ಭಾಷಣದಲ್ಲಿ ಜರಿದಿದ್ದಕ್ಕೆ ಪ್ರತಿಯಾಗಿ ಕಾಂಗ್ರೆಸ್ ನಾಯಕ ಮಣಿ ಶಂಕರ್ ಅಯ್ಯರ್ ಅವರು ನಿಂದನಾತ್ಮಕ ಮತ್ತು ಹಾಸ್ಯಾಸ್ಪದ ಹೇಳಿಕೆ ನೀಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದರು. [ಚಹಾ ಮಾರೋಕೆ ಲಾಯಕ್ಕು]

ನರೇಂದ್ರ ಮೋದಿ ಅವರು, "ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವವರಿಗೆ ಬಡತನವೇನು ಎಂಬುದೇ ಗೊತ್ತಿಲ್ಲ, ಆದರೆ ನನಗೆ ಗೊತ್ತು. ನಾನು ಬಡತನದಲ್ಲಿ ಬಾಲ್ಯ ಕಳೆದಿದ್ದೇನೆ. ರೈಲು ನಿಲ್ದಾಣದಲ್ಲಿ, ಓಡುತ್ತಿರುವ ರೈಲುಗಳಲ್ಲಿ ಚಹಾ ಮಾರಿದ್ದೇನೆ. ರೈಲಿನಲ್ಲಿ ಚಹಾ ಮಾರುವವನಿಗೆ ರೈಲುಗಳ ಬಗ್ಗೆ ಮಂತ್ರಿಗಿಂತ ಚೆನ್ನಾಗಿ ಗೊತ್ತು" ಎಂದು ಮಾರ್ಮಿಕವಾಗಿ ನುಡಿದಿದ್ದರು.
ಆರು ವರ್ಷದವರಿದ್ದಾಗ ನರೇಂದ್ರ ಮೋದಿಯವರು ಗುಜರಾತ್ನ ವಾಡನಗರದಲ್ಲಿ ರೈಲುಗಳಲ್ಲಿ ಚಹಾ ಮಾರುತ್ತ ತಮ್ಮ ತಂದೆಗೆ ಬೆಂಬಲವಾಗಿ ನಿಲುತ್ತಿದ್ದರು ಎಂದು ನೀಲಂಜನ್ ಮುಖ್ಯೋಪಾಧ್ಯಾಯ್ ಎಂಬುವವರು ಬರೆದಿರುವ 'ದಿ ಅನಾಟಮಿ ಆಫ್ ನರೇಂದ್ರ ಮೋದಿ - ದಿ ಮ್ಯಾನ್ ಅಂಡ್ ಹೀಸ್ ಪಾಲಿಟಿಕ್ಸ್' ಪುಸ್ತಕದಲ್ಲಿ ಮೋದಿ ಅವರ ಬಾಲ್ಯ ಜೀವನದ ಬಗ್ಗೆ, ಅವರು ಎದುರಿಸಿದ ಕಷ್ಟಗಳ ಬಗ್ಗೆ ವಿಸ್ತೃತವಾಗಿ ವರ್ಣಿಸಲಾಗಿದೆ.
ಕೆಲ ದಿನಗಳ ಹಿಂದೆ ಸಮಾಜವಾದಿ ಪಕ್ಷದ ನಾಯಕ ನರೇಶ್ ಅಗರವಾಲ್ ಕೂಡ ಮೋದಿ ವಿರುದ್ಧ ಇದೇ ರೀತಿಯ ವಾಗ್ದಾಳಿ ನಡೆಸಿದ್ದರು. ಚಹಾ ಮಾರುತ್ತಿದ್ದ ವ್ಯಕ್ತಿಗೆ ರಾಷ್ಟ್ರೀಯ ಪರಿಕಲ್ಪನೆ ಇರಲು ಸಾಧ್ಯವಿಲ್ಲ. ಒಬ್ಬ ಪೇದೆಯನ್ನು ಸುಪರಿಂಟೆಂಡೆಂಟ್ ಆಫ್ ಪೊಲೀಸ್ ಮಾಡಿದರೆ ಆತ ಕಾನ್ಸ್ಟೇಬಲ್ ರೀತಿಯೇ ಚಿಂತಿಸುತ್ತಾನೆ ಹೊರತು ಪೊಲೀಸ್ ಅಧಿಕಾರಿಯಂತೆ ಅಲ್ಲ ಎಂದು ಹೇಳಿಕೆ ನೀಡಿದ್ದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications