ಅಸಭ್ಯವಾಗಿ ವರ್ತಿಸಿದ್ದ ಮುಖಂಡರಿಗೆ ಮನ್ನಣೆ: ಕಾಂಗ್ರೆಸ್ ವಿರುದ್ಧ ಪ್ರಿಯಾಂಕಾ ಆಕ್ರೋಶ
ನವದೆಹಲಿ, ಏಪ್ರಿಲ್ 17: ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆ ಪ್ರಿಯಾಂಕಾ ಚತುರ್ವೇದಿ ತಮ್ಮದೇ ಪಕ್ಷದ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ, ಕಾಂಗ್ರೆಸ್, ಸಿಪಿಎಂ ಪ್ರಣಾಳಿಕೆಯ ತುಲನೆ. ಯಾವ ಪಕ್ಷದ ಪ್ರಣಾಳಿಕೆ ಉತ್ತಮವಾಗಿದೆ?
ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ್ದ ಪಕ್ಷದ ಕೆಲವು ಮುಖಂಡರನ್ನು ಪಕ್ಷಕ್ಕೆ ಮತ್ತೆ ಸೇರ್ಪಡೆ ಮಾಡಿಕೊಂಡಿರುವುದು ಅವರ ಅಸಮಾಧಾನಕ್ಕೆ ಕಾರಣವಾಗಿದೆ.
ಕಾಂಗ್ರೆಸ್ ಗೆ ಬಹುಮತ ಬರೋಲ್ಲ ಎಂದು ತಾವೇ ಒಪ್ಪಿಕೊಂಡರು ಸಿದ್ದರಾಮಯ್ಯ!
'ಪಕ್ಷಕ್ಕಾಗಿ ತಮ್ಮ ಬೆವರು ಮತ್ತು ರಕ್ತ ಹರಿಸಿದವರಿಗಿಂತಲೂ ಕಾಂಗ್ರೆಸ್ನಲ್ಲಿ ಕೊಳಕು ಗೂಂಡಾಗಳು ಮನ್ನಣೆ ಪಡೆದುಕೊಳ್ಳುತ್ತಿರುವುದು ತೀವ್ರ ದುಃಖಕರ' ಎಂದು ಪ್ರಿಯಾಂಕಾ ಚತುರ್ವೇದಿ ಪಕ್ಷದ ವಿರುದ್ಧ ಟ್ವಿಟ್ಟರ್ನಲ್ಲಿ ಕಿಡಿಕಾರಿದ್ದಾರೆ.
ಉತ್ತರ ಪ್ರದೇಶದಲ್ಲಿ ಪಕ್ಷದ ಕೆಲವು ಮುಖಂಡರು ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಪ್ರಿಯಾಂಕಾ ಚತುರ್ವೇದಿ ನಾಯಕತ್ವಕ್ಕೆ ದೂರು ನೀಡಿದ್ದರು. ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿತ್ತು. ಆದರೆ, ಕೆಲವು ದಿನಗಳಲ್ಲಿಯೇ ಆ ಮುಖಂಡರನ್ನು ಮರಳಿ ಅದೇ ಹುದ್ದೆಗಳಿಗೆ ಮರುನೇಮಿಸಿಕೊಳ್ಳಲಾಗಿದೆ.
ರಾಜ್ಯದಲ್ಲಿ ಶೇ 80ರಷ್ಟು ಬ್ರಾಹ್ಮಣರ ಮತ ಮೈತ್ರಿ ಅಭ್ಯರ್ಥಿಗಳಿಗೆ: ದಿನೇಶ್ ಗುಂಡೂರಾವ್
ಉತ್ತರ ಪ್ರದೇಶ ಪೂರ್ವ ಭಾಗದ ಉಸ್ತುವಾರಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿರಾದಿತ್ಯ ಸಿಂಧಿಯಾ ಅವರ ಮಧ್ಯಪ್ರವೇಶದ ಬಳಿಕ ತಮ್ಮ ಮುಖಂಡರನ್ನು ಮರಳಿ ಸೇರ್ಪಡೆ ಮಾಡಲು ಉತ್ತರ ಪ್ರದೇಶ ಕಾಂಗ್ರೆಸ್ ನಿರ್ಧರಿಸಿತ್ತು.
Deeply saddened that lumpen goons get prefence in @incindia over those who have given their sweat&blood. Having faced brickbats&abuse across board for the party but yet those who threatened me within the party getting away with not even a rap on their knuckles is unfortunate. https://t.co/CrVo1NAvz2
— Priyanka Chaturvedi (@priyankac19) 17 April 2019
ಮಥುರಾದಲ್ಲಿ ಕಾಂಗ್ರೆಸ್ ವಕ್ತಾರೆ ಪ್ರಿಯಾಂಕಾ ಚತುರ್ವೇದಿ ಅವರೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಕೆಲವು ಮುಖಂಡರನ್ನು ಯುಪಿಸಿಸಿ ಮೊದಲು ಅಮಾನತು ಮಾಡಿತ್ತು. ಆದರೆ, ಕೆಲವು ದಿನಗಳಲ್ಲಿಯೇ ಮರಳಿ ಸೇರಿಸಿಕೊಂಡಿದೆ ಎಂದು ಪತ್ರಕರ್ತೆಯೊಬ್ಬರು ಟ್ವೀಟ್ ಮಾಡಿದ್ದರು. ಅದಕ್ಕೆ ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕಾ, ಪಕ್ಷದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.