ದೆಹಲಿಯಲ್ಲಿ ಮೈತ್ರಿ ಬಗ್ಗೆ ಮಾತಿಲ್ಲ, ಸಂಭಾವ್ಯ ಪಟ್ಟಿಯಲ್ಲಿ ಶೀಲಾ, ಸುಶೀಲ್
ನವದೆಹಲಿ, ಏಪ್ರಿಲ್ 21: ದೆಹಲಿ ಹಾಗೂ ಹರ್ಯಾಣದಲ್ಲಿ ಆಮ್ ಆದ್ಮಿ ಪಕ್ಷದ ಜತೆಗಿನ ಮೈತ್ರಿ ಬಗ್ಗೆ ಅಂತಿಮ ರೂಪ ನೀಡಲಾಗಿದ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಹೆಸರಿಸಲು ಮುಂದಾಗಿದೆ. ಇನ್ನೆರಡು ದಿನಗಳಲ್ಲಿ ಎಲ್ಲಾ ಅಭ್ಯರ್ಥಿಗಳನ್ನು ಹೆಸರಿಸುವುದಾಗಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಹೇಳಿದ್ದಾರೆ.
ದೆಹಲಿಯ 7 ಲೋಕಸಭಾ ಕ್ಷೇತ್ರಗಳಿಗೆ ಸಂಭಾವ್ಯ ಪಟ್ಟಿಯನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಕಳುಹಿಸಲಾಗಿದೆ. ಆಮ್ ಅದ್ಮಿ ಪಕ್ಷದಿಂದ ಎಲ್ಲಾ ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.
ಈ ನಡುವೆ ಕಾಂಗ್ರೆಸ್ ಕಳಿಸಿರುವ ಸಂಭಾವ್ಯ ಪಟ್ಟಿಯಂತೆ ಚಾಂದನಿ ಚೌಕ್ನಿಂದ ಮೂರು ಬಾರಿ ದೆಹಲಿ ಸಿಎಂ ಆಗಿದ್ದ, ಹಾಲಿ ದೆಹಲಿ ರಾಜ್ಯ ಘಟಕ ಅಧ್ಯಕ್ಷ ಶೀಲಾ ದೀಕ್ಷಿತ್ ಸ್ಪರ್ಧಿಸುವ ಸಾಧ್ಯತೆಯಿದೆ. ಕಳೆದ ಬಾರಿ ಈ ಕ್ಷೇತ್ರದಿಂದ ಕಪಿಲ್ ಸಿಬಲ್ ನಿಂತು ಸೋಲು ಕಂಡಿದ್ದರು. ನವದೆಹಲಿ ಕ್ಷೇತ್ರದಿಂದ ಮಾಜಿ ಕೇಂದ್ರ ಸಚಿವ ಅಜಯ್ ಮಾಕೇನ್ ಸ್ಪರ್ಧಿಸುವ ಸಾಧ್ಯತೆಯಿದೆ.

ಒಲಿಂಪಿಕ್ ಪದಕ ವಿಜೇತ ಖ್ಯಾತ ಕುಸ್ತಿಪಟು ಸುಶೀಲ್ಕುಮಾರ್ಅವರಿಗೆ ಪಶ್ಚಿಮ ದೆಹಲಿಯಿಂದ ಟಿಕೆಟ್ ಸಿಗಬಹುದು. ಪೂರ್ವ ದೆಹಲಿಯಿಂದ ಅರವಿಂದರ್ ಸಿಂಗ್ ಲವ್ಲಿ, ದಕ್ಷಿಣ ದೆಹಲಿಯಿಂದ ರಮೇಶ್ಕುಮಾರ್, ಈಶಾನ್ಯ ದೆಹಲಿಯಿಂದ ಜೆ.ಪಿ.ಅಗರ್ವಾಲ್, ವಾಯುವ್ಯ ದೆಹಲಿಯಿಂದ ರಾಜ್ ಕುಮಾರ್ ಚೌಹಾಣ್ ಅವರಿಗೆ ಟಿಕೆಟ್ ನೀಡುವಂತೆ ಶಿಫಾರಸು ಮಾಡಲಾಗಿದೆ.
ಹಿರಿಯ ಮುಖಂಡ ಸಜ್ಜನ್ ಕುಮಾರ್ ಅವರ ಸೋದರ ರಮೇಶ್ ಕುಮಾರ್, ಜೈ ಪ್ರಕಾಶ್ ಅಗರವಾಲ್, ರಾಜೇಶ್ ಲಿಲೋಥಿಯಾ ಹೆಸರುಗಳು ಕೇಳಿ ಬಂದಿವೆ. ದೆಹಲಿ ಹಾಗೂ ಹರ್ಯಾಣದಲ್ಲಿ ಎಎಪಿ ಮೈತ್ರಿ ಬಗ್ಗೆ ಯಾವುದೇ ಅಂತಿಮ ತೀರ್ಮಾನವಾಗಿಲ್ಲ ಎಂದು ದೆಹಲಿ ಕಾಂಗ್ರೆಸ್ ಉಸ್ತುವಾರಿ ಪಿ.ಸಿ.ಚಾಕೋ ಸ್ಪಷ್ಟಪಡಿಸಿದ್ದಾರೆ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications