ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಗತ್ ಸಿಂಗ್, ರಾಜಗುರು, ಸುಖದೇವ್ ಅವರಿಗೆ ಭಾರತ ರತ್ನ ನೀಡಿ: ಕಾಂಗ್ರೆಸ್

|
Google Oneindia Kannada News

ನವದೆಹಲಿ, ಅಕ್ಟೋಬರ್ 26: ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ರಾಜ್ ಗುರು ಮತ್ತು ಸುಖ್ ದೇವ್ ಅವರಿಗೆ ಭಾರತ ರತ್ನದ ಗೌರವ ನೀಡಬೇಕು ಎಂದ ಕಾಂಗ್ರೆಸ್ ಒತ್ತಾಯಿಸಿದೆ.

ಸಾವರ್ಕರ್‌ಗೆ ಭಾರತ ರತ್ನ: ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಣೆಸಾವರ್ಕರ್‌ಗೆ ಭಾರತ ರತ್ನ: ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಣೆ

ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಅವರು ಈ ಕುರಿತು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರವೊಂದನ್ನು ಬರೆದಿದ್ದು, 2020 ರ ಜನವರಿ 26, ಗಣರಾಜ್ಯೋತ್ಸವದಂದು ಕೊಡಮಾಡುವ ಭಾರತ ರತ್ನವನ್ನು ಭಗತ್ ಸಿಂಗ್, ರಾಜ್ ಗುರು, ಸುಖದೇವ್ ಅವರಿಗೆ ನೀಡಿ ಎಂದಿದ್ದಾರೆ.

Congress Urges Bharata ratna to Bhagat Singh, rajguru And Sukhdev

ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಈ ಮೂವರು ನೀಡುವ ಕೊಡುಗೆ ಅಪಾರ. ಅದನ್ನು ಪರಿಗಣಿಸಿ ಅವರಿಗೆ ರಾಷ್ಟ್ರದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

'ನಾವು ಸಾವರ್ಕರ್ ವಿರೋಧಿಯಲ್ಲ, ಆದರೆ...' ಮೌನ ಮುರಿದ ಮನಮೋಹನ್ ಸಿಂಗ್'ನಾವು ಸಾವರ್ಕರ್ ವಿರೋಧಿಯಲ್ಲ, ಆದರೆ...' ಮೌನ ಮುರಿದ ಮನಮೋಹನ್ ಸಿಂಗ್

ಇತ್ತೀಚೆಗಷ್ಟೇ ಬಿಜೆಪಿ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ತನ್ನ ಪ್ರಣಾಳಿಕೆಯಲ್ಲಿ ವಸ್ವಾತಂತ್ರ್ಯ ಹೋರಾಟಗಾರ ವಿನಾಯಕ್ ದಾಮೋದರ್ ಸಾವರ್ಕರ್ ಅವರಿಗೂ ಭಾರತ ರತ್ನ ನೀಡುವ ಭರವಸೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

English summary
Congress leader Manish Tiwari Urges PM Modi To confer Bharata ratna to Bhagat Singh, rajguru And Sukhdev.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X