ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಪುನರ್ ಪರಿಶೀಲನೆಗೆ ಸಿಬಿಐ ಮನವಿ
ಬಾಬ್ರಿ ಮಸೀದಿ ಧ್ವಂಸಕ್ಕೆ ಸಂಚು ರೂಪಿಸಿದ ಆರೋಪದಿಂದ ಖುಲಾಸೆಯಾಗಿದ್ದ ಬಿಜೆಪಿ ಎಲ್ ಕೆ ಅಡ್ವಾಣಿ ಸೇರಿದಂತೆ ಇತರರ ವಿರುದ್ಧ ಪ್ರಕರಣವನ್ನು ಪುನರ್ ಪರಿಶೀಲಿಸಬೇಕು ಎಂದು ಸಿಬಿಐ ಸುಪ್ರೀಂ ಕೋರ್ಟ್ ಗೆ ಗುರುವಾರ ಮನವಿ ಮಾಡಿದೆ
ನವದೆಹಲಿ, ಏಪ್ರಿಲ್ 6: ಬಿಜೆಪಿ ಮುಖಂಡ ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ ಜೋಶಿ ಮತ್ತಿತರರ ವಿರುದ್ಧದ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಸಂಚು ಆರೋಪವನ್ನು ಪುನರ್ ಪರಿಶೀಲಿಸಬೇಕು ಎಂದು ಸುಪ್ರೀಂ ಕೋರ್ಟ್ ಗೆ ಗುರುವಾರ ಸಿಬಿಐ ಹೇಳಿದೆ.
ಕೆಳಹಂತದ ನ್ಯಾಯಾಲಯವು ಬಿಜೆಪಿಯ ನಾಯಕರ ವಿರುದ್ಧದ ಸಂಚು ಆರೋಪವನ್ನು ಕೈ ಬಿಡುವಂತೆ ಆದೇಶ ನೀಡಿತ್ತು. ಆ ಆದೇಶವನ್ನೇ ಅಲಹಾಬಾದ್ ಹೈ ಕೋರ್ಟ್ 2010ರಲ್ಲಿ ಖಾತ್ರಿ ಪಡಿಸಿತ್ತು. ಇದೀಗ ಕೋರ್ಟ್ ನ ತೀರ್ಮಾನದ ವಿರುದ್ಧ ಸಿಬಿಐ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.[ಬಾಬರಿ ಮಸೀದಿ ಧ್ವಂಸ: ವಿಚಾರಣೆಯನ್ನು 2 ವಾರ ಮುಂದೂಡಿದ ಸುಪ್ರೀಂ]

ಕಳೆದ ತಿಂಗಳು ಸುಪ್ರೀಂ ಕೋರ್ಟ್ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ವಿಚಾರಣೆಯನ್ನು ಎರಡು ವಾರ ಕಾಲ ಮುಂದೂಡಿತ್ತು. ಲಿಖಿತ ಅಭಿಪ್ರಾಯವನ್ನು ಸಲ್ಲಿಸುವಂತೆ ಬಿಜೆಪಿ ಮುಖಂಡರಾದ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ ಜೋಶಿ ಮತ್ತಿತರ ಆರೋಪಿಗಳಿಗೆ ಎರಡು ವಾರ ಅವಕಾಶ ನೀಡಿತ್ತು.

" ಅಡ್ವಾಣಿ ಮತ್ತಿತರ ಆರೋಪಿಗಳ ವಿರುದ್ಧ ತಾಂತ್ರಿಕ ಕಾರಣಗಳಿಗಾಗಿ ಆರೋಪ ಕೈಬಿಡುವುದನ್ನು ಒಪ್ಪಲು ಸಾಧ್ಯವಿಲ್ಲ. ನಿಮಗೆ (ಸಿಬಿಐ) ಹದಿಮೂರು ಮಂದಿ ವಿರುದ್ಧ ಸಂಉ ಸೇರಿದಂತೆ ಹೆಚ್ಚುವರಿ ಆರೋಪಪಟ್ಟಿ ಸಲ್ಲಿಸಲು ಅವಕಾಶ ನೀಡುತ್ತೇವೆ. ವಿಚಾರ್ಣೆ ಕೋರ್ಟ್ ಗೆ ಜಂಟಿ ವಿಚಾರಣೆ ನಡೆಸುವಂತೆ ತಿಳಿಸಲಾಗುವುದು" ಎಂದು ಮಾರ್ಚ್ 6ರಂದು ಸುಪ್ರೀಂ ಕೋರ್ಟ್ ತಿಳಿಸಿತ್ತು.

"ಒಂದು ವೇಳೆ ಅಡ್ವಾಣಿ ವಿರುದ್ಧ ಸಂಚು ಆರೋಪವನ್ನು ಸೇರಿಸುವುದಾದರೆ ಕೆಳ ಹಂತದ ಕೋರ್ಟ್ ನಲ್ಲಿ ಪರೀಕ್ಷೆ ಮಾಡಿದ 183 ಸಾಕ್ಷಿಗಳನ್ನು ಮತ್ತೆ ಕೋರ್ಟ್ ಗೆ ಕರೆಯಬೇಕು" ಎಂದು ಅಡ್ವಾಣಿ ಪರ ವಕೀಲರು ಸುಪ್ರೀಂ ಕೋರ್ಟ್ ಗ್ ಹೇಳಿದ್ದಾರೆ.[25 ವರ್ಷ ಕಳೆದರೂ ಅಡ್ವಾಣಿಯನ್ನು ಬೆಂಬಿಡದ 'ಬಾಬ್ರಿ ಮಸೀದಿ' ಭೂತ]
1992ರಲ್ಲಿ ಅಯೋಧ್ಯೆಯಲ್ಲಿದ್ದ 16ನೇ ಶತಮಾನದ ಬಾಬ್ರಿ ಮಸೀದಿ ಕೆಡವಿದ ಪ್ರಕರಣದಲ್ಲಿ ಅಡ್ವಾಣಿ, ಮುರಳಿ ಮನೋಹರ ಜೋಶಿ ಇತರ ಹನ್ನೆರಡು ಮಂದಿ ವಿರುದ್ಧದ ಸಂಚು ರೂಪಿಸಿದ ಆರೋಪವನ್ನು ರಾಯ್ ಬರೇಲಿ ಕೋರ್ಟ್ ಕೈಬಿಟ್ಟು, ಖುಲಾಸೆ ಮಾಡಿತ್ತು. 2010ರಲ್ಲಿ ಅಲಹಾಬಾದ್ ಹೈ ಕೋರ್ಟ್ ಕೆಳಹಂತದ ನ್ಯಾಯಾಲಯದ ತೀರ್ಪನ್ನೇ ಎತ್ತಿ ಹಿಡಿದಿತ್ತು.ಇದೀಗ ಸಿಬಿಐ ಹೈಕೋರ್ಟ್ ಆದೇಶ ಪ್ರಶ್ನಿಸಿ, ಸುಪ್ರೀ ಕೋರ್ಟ್ ಗೆ ಮನವಿ ಸಲ್ಲಿಸಿದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications