1 ರೂ ದಂಡ ಕಟ್ಟಿದ ಮಾತ್ರಕ್ಕೆ ಸುಪ್ರೀಂಕೋರ್ಟ್ ತೀರ್ಪು ಒಪ್ಪಿದ್ದೇನೆ ಎಂದಲ್ಲ: ಪ್ರಶಾಂತ್ ಭೂಷಣ್
ನವದೆಹಲಿ, ಸೆಪ್ಟೆಂಬರ್ 14: ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಸಾಂಕೇತಿಕವಾಗಿ ವಿಧಿಸಿದ 1 ರೂ. ದಂಡವನ್ನು ವಕೀಲ ಪ್ರಶಾಂತ್ ಭೂಷಣ್ ನ್ಯಾಯಾಲಯಕ್ಕೆ ಪಾವತಿಸಿದ್ದಾರೆ. ಆದರೆ ಈ ದಂಡ ಪಾವತಿಯು ತಾವು ಸುಪ್ರೀಂಕೋರ್ಟ್ ತೀರ್ಪನ್ನು ಒಪ್ಪಿಕೊಂಡಿದ್ದೇನೆ ಎಂಬ ಅರ್ಥವಲ್ಲ. ಈ ತೀರ್ಪಿನ ವಿರುದ್ಧ ಪರಾಮರ್ಶನಾ ಅರ್ಜಿ ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.
ಸುಪ್ರೀಂಕೋರ್ಟ್ ಹಾಗೂ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಅವರನ್ನು ಅಣಕಿಸಿ ಟ್ವೀಟ್ ಮಾಡಿದ್ದಕ್ಕಾಗಿ ಪ್ರಶಾಂತ್ ಭೂಷಣ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣಕ್ಕಾಗಿ ಸೆ. 15ರ ಒಳಗೆ 1 ರೂ ದಂಡವನ್ನು ಪಾವತಿಸಬೇಕು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು.
'ನಾನು ದಂಡ ಪಾವತಿಸುತ್ತಿದ್ದೇನೆ ಎಂಬ ಕಾರಣಕ್ಕೆ ನಾನು ತೀರ್ಪನ್ನು ಒಪ್ಪಿಕೊಂಡಿದ್ದೇನೆ ಎಂದು ಅರ್ಥೈಸಬಾರದು. ನಾವು ಇಂದು ಪರಾಮರ್ಶನಾ ಅರ್ಜಿ ಸಲ್ಲಿಸುತ್ತಿದ್ದೇವೆ. ನ್ಯಾಯಾಂಗ ನಿಂದನೆ ಪ್ರಕರಣದ ಅಡಿಯ ಶಿಕ್ಷೆಯನ್ನು ಪ್ರಶ್ನಿಸಲು ಸೃಷ್ಟಿಸಿರುವ ಪ್ರಕ್ರಿಯೆಯಂತೆ ನಾವು ರಿಟ್ ಅರ್ಜಿ ಸಲ್ಲಿಸಿದ್ದೇವೆ' ಎಂದು ಅವರು ತಿಳಿಸಿದ್ದಾರೆ.

'ಅಸಮ್ಮತಿಯ ಧ್ವನಿಗಳನ್ನು ಅಡಗಿಸಲು ವ್ಯವಸ್ಥೆ ಎಲ್ಲ ಅಧಿಕಾರಿಗಳನ್ನು ಬಳಸಿಕೊಳ್ಳುತ್ತಿದೆ. ಸರ್ಕಾರದ ವಿಚಾರಣೆಗೆ ಒಳಪಡುವ ವ್ಯಕ್ತಿಗಳ ವೈಯಕ್ತಿಕ ಸ್ವಾತಂತ್ರ್ಯವನ್ನು ರಕ್ಷಿಸಲು 'ಟ್ರುತ್ ಫಂಡ್'ಅನ್ನು ಬಳಸಿಕೊಳ್ಳಲಾಗುತ್ತದೆ' ಎಂದು ಹೇಳಿದ್ದಾರೆ.
ಸುಪ್ರೀಂಕೋರ್ಟ್ ಅಥವಾ ನ್ಯಾಯಾಂಗ ವ್ಯವಸ್ಥೆಯನ್ನು ಅಗೌರವಿಸುವ ಯಾವುದೇ ಉದ್ದೇಶ ತಮ್ಮ ಟ್ವೀಟ್ಗಳಲ್ಲಿ ಇರಲಿಲ್ಲ. ಆದರೆ ನ್ಯಾಯಾಲಯವು ತನ್ನ ಕಾರ್ಯದಿಂದ ದಿಕ್ಕು ಬದಲಿಸಿದ್ದರ ಕುರಿತು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾಗಿತ್ತು ಎಂದು ಪ್ರಶಾಂತ್ ಭೂಷಣ್ ಹೇಳಿದ್ದರು.
ಸೆ. 15ರ ಒಳಗೆ ದಂಡ ಠೇವಣಿ ಇರಿಸದೆ ಹೋದರೆ ಪ್ರಶಾಂತ್ ಭೂಷಣ್ ಅವರು ಮೂರು ತಿಂಗಳ ಜೈಲು ಶಿಕ್ಷೆ ಅಥವಾ ಮೂರು ವರ್ಷ ವಕೀಲಿಕೆಯಿಂದ ನಿರ್ಬಂಧ ಎದುರಿಸಬೇಕಾಗುತ್ತದೆ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications