ನ್ಯಾಯಾಂಗ ನಿಂದನೆ ಪ್ರಕರಣ: ವಕೀಲ ಪ್ರಶಾಂತ್ ಭೂಷಣ್ಗೆ 1 ರೂ ದಂಡ!
ನವದೆಹಲಿ, ಆಗಸ್ಟ್ 31: ನ್ಯಾಯಾಂಗವನ್ನು ಟೀಕಿಸಿ ಟ್ವೀಟ್ ಮಾಡಿದ್ದಕ್ಕೆ ನ್ಯಾಯಾಂಗ ನಿಂದನೆ ಪ್ರಕರಣ ಎದುರಿಸುತ್ತಿದ್ದ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಸುಪ್ರೀಂಕೋರ್ಟ್ 1 ರೂಪಾಯಿ ದಂಡ ವಿಧಿಸಿದೆ.
ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ, ಬಿಆರ್ ಗವಾಯಿ ಮತ್ತು ಕೃಷ್ಣ ಮುರಾರಿ ಅವರನ್ನು ಒಳಗೊಂಡ ನ್ಯಾಯಪೀಠ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಪ್ರಶಾಂತ್ ಭೂಷಣ್ ತಪ್ಪಿತಸ್ಥ ಎಂದು ತೀರ್ಪು ನೀಡಿತ್ತು. ಪ್ರಶಾಂತ್ ಭೂಷಣ್ ಅವರಿಗೆ ಕ್ಷಮೆ ಕೋರಲು ಕಾಲಾವಕಾಶ ನೀಡಿದ್ದ ನ್ಯಾಯಪೀಠ, ಆಗಸ್ಟ್ 25ರಂದು ತೀರ್ಪು ಕಾಯ್ದಿರಿಸಿತ್ತು.
ಭೂಷಣ್ ವಿರುದ್ಧ ಪ್ರಕರಣದ ತೀರ್ಪಿನ ಶಿಕ್ಷೆ ಪ್ರಕಟಿಸುವ ಸಂದರ್ಭದಲ್ಲಿ ನ್ಯಾ. ಅರುಣ್ ಮಿಶ್ರಾ, ನ್ಯಾಯಮೂರ್ತಿಗಳು ಮಾಧ್ಯಮಗಳ ಮುಂದೆ ಹೋಗಬಾರದು. ನ್ಯಾಯಾಲಯದ ಹೊರಗಿನ ಅವರ ಹೇಳಿಕೆಗಳು ಮುಖ್ಯವಾಗಬಾರದು. ನ್ಯಾಯಾಲಯದ ನಿರ್ಧಾರವು ಮಾಧ್ಯಮಗಳಲ್ಲಿ ಅಭಿಪ್ರಾಯಗಳನ್ನು ಪ್ರಕಟಿಸುವುದಕ್ಕೆ ನೀಡುವ ಹಕ್ಕು ಎಂದು ಬಳಸಿಕೊಳ್ಳಬಾರದು ಎಂದರು.

ನ್ಯಾಯಾಂಗವನ್ನು ನಿಂದಿಸುವಂತಹ ಹೇಳಿಕೆ ನೀಡಿರುವುದಕ್ಕೆ ಪಶ್ಚಾತ್ತಾಪ ವ್ಯಕ್ತಪಡಿಸಲು ಪ್ರಶಾಂತ್ ಭೂಷಣ್ ಅವರಿಗೆ ಅನೇಕ ಅವಕಾಶಗಳನ್ನು ನೀಡಲಾಗಿತ್ತು. ಮಾಧ್ಯಮಗಳಿಗೆ ಹೋಗುವ ಮೂಲಕ ಪ್ರಶಾಂತ್ ಭೂಷಣ್ ತಮ್ಮ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ಸುತ್ತಲಿನ ಘಟನೆಗಳಿಗೆ ಪ್ರಚಾರ ನೀಡಿದರು ಎಂದು ನ್ಯಾಯಪೀಠ ಹೇಳಿತು.
ನ್ಯಾಯಾಂಗ ನಿಂದನೆಯ ಆರೋಪಕ್ಕಾಗಿ ಪ್ರಶಾಂತ್ ಭೂಷಣ್ ಅವರಿಗೆ ಸಾಂಕೇತಿಕವಾಗಿ 1 ರೂ ದಂಡ ವಿಧಿಸಲಾಗುವುದು ಎಂದು ತಿಳಿಸಿದ ಪೀಠ, ಸೆ. 15ರ ಗಡುವಿನ ಒಳಗೆ ಈ ದಂಡ ಪಾವತಿಸಲು ಭೂಷಣ್ ವಿಫಲರಾದರೆ ಅವರನ್ನು ಮೂರು ತಿಂಗಳು ಜೈಲು ಶಿಕ್ಷೆಗೆ ಗುರಿಪಡಿಸಬಹುದು ಅಥವಾ ಮೂರು ವರ್ಷ ವಕೀಲಿಕೆ ವೃತ್ತಿಯಿಂದ ನಿರ್ಬಂಧಿಸಬಹುದು ಎಂದು ಹೇಳಿತು.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications