ವಿವಾದ ಸೃಷ್ಟಿಸಿರುವ ಪ್ರತಾಪ್, ಉಗ್ರ ಹಫೀಜ್ ಭೇಟಿ
ನವದೆಹಲಿ, ಜು. 14 : ಯೋಗಗುರು ಬಾಬಾ ರಾಮದೇವ್ ಅವರ ನಿಕಟವರ್ತಿ, ಹವ್ಯಾಸಿ ಪತ್ರಕರ್ತ ವೇದ್ ಪ್ರತಾಪ್ ವೈದಿಕ್ ಅವರು 2008 ನವೆಂಬರ್ 11ರಂದು ನಡೆದ ಮುಂಬೈ ದಾಳಿಯ ರೂವಾರಿ, ಜಮಾತ್-ಉದ್-ದವಾ ಉಗ್ರ ಸಂಘಟನೆಯ ನಾಯಕ ಹಫೀಜ್ ಮೊಹಮ್ಮದ್ ಸಯೀದ್ ಅವರನ್ನು ಭೇಟಿಯಾಗಿರುವುದು ಭಾರೀ ವಿವಾದ ಸೃಷ್ಟಿಸಿದೆ.
ವೇದ್ ಪ್ರತಾಪ್ ವೈದಿಕ್ ಅವರೇ ತಾವು ಹಫೀಜ್ ಅವರನ್ನು ಜುಲೈ 2ರಂದು ಪಾಕಿಸ್ತಾನದ ಲಾಹೋರ್ ನಲ್ಲಿ ಭೇಟಿಯಾಗಿರುವುದಾಗಿ ಹೇಳಿದ್ದು, ಇಬ್ಬರೂ ಮಾತುಕತೆ ನಡೆಸುತ್ತಿರುವ ಚಿತ್ರವನ್ನು ಬಿಡುಗಡೆ ಮಾಡಿದ್ದಾರೆ. ಇನ್ನೂ ಆಘಾತಕಾರಿ ಸಂಗತಿಯೆಂದರೆ, ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅತಿ ಅಪಾಯಕಾರಿ ಮನುಷ್ಯ ಎಂದು ಹಫೀಜ್ ಹೇಳಿಕೆ ನೀಡಿದ್ದಾನೆ.
ಶಾಂತಿ ಸಂಶೋಧನಾ ಸಂಸ್ಥೆ ಆಹ್ವಾನದ ಮೇರೆಗೆ ನಿಯೋಗದೊಂದಿಗೆ ಪಾಕಿಸ್ತಾನಕ್ಕೆ ತೆರಳಿದ್ದ ವೇದ್ ಪ್ರತಾಪ್ ವೈದಿಕ್ ಅವರು ಹಫೀಜ್ ನನ್ನು ಭೇಟಿಯಾಗಿರುವುದು ಬಾಬಾ ರಾಮದೇವ್ ಅವರನ್ನು ಮಾತ್ರವಲ್ಲ, ಬಿಜೆಪಿ ಸರಕಾರವನ್ನೂ ಮುಜುಗರಕ್ಕೆ ಸಿಲುಕಿಸಿದೆ. ಪ್ರತಾಪ್ ಅವರು ಓರ್ವ ಪತ್ರಕರ್ತನಾಗಿ ಹಫೀಜ್ ಅವರನ್ನು ಭೇಟಿಯಾಗಿದ್ದಾರೆ ಎಂದು ಬಾಬಾ ರಾಮದೇವ್ ಈ ಭೇಟಿಯನ್ನು ಸಮರ್ಥಿಸಿಕೊಂಡಿದ್ದಾರೆ.

ಭಾರತ, ಅಮೆರಿಕ, ಯುನೈಟೆಡ್ ಕಿಂಗಡಂ, ಯುರೋಪ್ ಯೂನಿಯನ್, ರಷ್ಯಾ, ಆಸ್ಟ್ರೇಲಿಯಾ ಮುಂತಾದ ರಾಷ್ಟ್ರಗಳಿಂದ ನಿಷೇಧಕ್ಕೊಳಗಾಗಿರುವ, ಲಷ್ಕರ್-ಇ-ತೊಯ್ಬಾ ಭಯೋತ್ಪಾದಕ ಸಂಘಟನೆಯೊಡನೆ ಸಂಪರ್ಕ ಹೊಂದಿರುವ ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆಯ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದಾನೆ ಹಫೀಜ್ ಸಯೀದ್. ಈತನ ತಲೆಗೆ 10 ಮಿಲಿಯನ್ ಡಾಲರ್ ಬಹುಮಾನವನ್ನು ಅಮೆರಿಕ ಕಟ್ಟಿದೆ.
ಇಂಥ ಉಗ್ರನನ್ನು ವೇದ್ ಪ್ರತಾಪ್ ವೈದಿಕ್ ಅವರು ಭೇಟಿಯಾಗಿರುವುದು ತೀವ್ರ ಟೀಕೆಗೊಳಗಾಗಿದೆ. ಭಾರತದ ವಿರುದ್ಧ ಯುದ್ಧ ಸಾರಿರುವ ಇಂಥ ಉಗ್ರನನ್ನು ಭೇಟಿಯಾಗುವ ಅಗತ್ಯವಾದರೂ ಏನಿತ್ತು ಎಂದು ಪ್ರಶ್ನಿಸಲಾಗುತ್ತಿದೆ. ಕಾಂಗ್ರೆಸ್ ಪಕ್ಷ ಈ ಭೇಟಿಯ ಕುರಿತು ಭಾರತೀಯ ಜನತಾ ಪಕ್ಷ ತನ್ನ ಸ್ಪಷ್ಟನೆ ನೀಡಬೇಕೆಂದು ದುಂಬಾಲು ಬಿದ್ದಿದೆ.
|
ವೈದಿಕ್, ಬಾಬಾ ರಾಮದೇವ್ ಇಬ್ಬರನ್ನೂ ಬಂಧಿಸಿ
ಪಾಕ್ ಉಗ್ರ ಹಫೀಜ್ ಸಯೀದ್ ನನ್ನು ಭೇಟಿಯಾದ ವೇದ್ ಪ್ರತಾಪ್ ವೈದಿಕ್ ಮತ್ತು ಅವರನ್ನು ಬೆಂಬಲಿಸಿದ ಬಾಬಾ ರಾಮದೇವ್ ಇಬ್ಬರನ್ನೂ ಬಂಧಿಸಿ.
|
ಉಮಾ ಭಾರತಿ ನೋ ಕಾಮೆಂಟ್ಸ್
ನಾನು ಬಿಜೆಪಿಯ ವಕ್ತಾರೆ ಅಲ್ಲದ್ದರಿಂದ ಈ ಭೇಟಿಯ ಕುರಿತು ನಾನೇನೂ ಕಾಮೆಂಟ್ ಮಾಡಲಾರೆ ಎಂದಿದ್ದಾರೆ ಬಿಜೆಪಿ ನಾಯಕಿ ಉಮಾ ಭಾರತಿ.
|
ಇಂಥ ವಿದ್ಯಮಾನ ಹಿಂದೆಂದೂ ನಡೆದಿಲ್ಲ
ಸರಕಾರಕ್ಕೆ ಹತ್ತಿರವಾಗಿರುವ ವ್ಯಕ್ತಿ ಭಯೋತ್ಪಾದಕನನ್ನು ಭೇಟಿಯಾದ ವಿದ್ಯಮಾನ ಹಿಂದೆಂದೂ ನಡೆದಿಲ್ಲ ಎಂದು ಕಾಂಗ್ರೆಸ್ ನಾಯಕ ಮನೀಷ್ ತಿವಾರಿ ಕಿಡಿಕಾರಿದ್ದಾರೆ.
|
ಇದರ ಹಿಂದಿರುವ ಉದ್ದೇಶವೇನು ಅರ್ಥವಾಗುತ್ತಿಲ್ಲ
ಹಫೀಜ್ ನಂಥ ಉಗ್ರನನ್ನು ವೇದ್ ಪ್ರತಾಪ್ ವೈದಿಕ್ ಭೇಟಿಯಾಗಿದ್ದರ ಹಿಂದಿರುವ ಉದ್ದೇಶವೇನು ಅರ್ಥವಾಗುತ್ತಿಲ್ಲ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications