ಮನುಕುಲದ ಇತಿಹಾಸದಲ್ಲಿ ಕೊರೊನಾ ಅತ್ಯಂತ ಕೆಟ್ಟ ಸನ್ನಿವೇಶ ಸೃಷ್ಟಿಸಿದೆ: ಜೋಶಿ
ನವದೆಹಲಿ, ಮೇ 31 : ''ಕೋವಿಡ್ 19 ದೇಶಕ್ಕೆ ಅತ್ಯಂತ ಕೆಟ್ಟ ಪರಿಸ್ಥಿತಿ ತಂದೊಡ್ಡಿದೆ. ಇತಹ ಕಠಿಣ ಸವಾಲನ್ನು ಭಾರತ ಸರ್ಕಾರ ಸಮರ್ಥವಾಗಿ ನಿಭಾಯಿಸಿದೆ'' ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಭಾನುವಾರ ನವದೆಹಲಿಯಲ್ಲಿ ಎಎನ್ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ''ಮನುಕುಲದ ಇತಿಹಾಸದಲ್ಲಿ ಕೊರೊನಾವೈರಸ್ ಅತ್ಯಂತ ಕೆಟ್ಟ ಸನ್ನಿವೇಶವಾಗಿದೆ. ಇದು ಕಂಡೂ ಕೇಳರಿಯದ ದುರಂತ. ಇಂತಹ ಕಠಿಣ ಸವಾಲನ್ನು ಎದುರಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಫಲರಾಗಿದ್ದಾರೆ'' ಎಂದು ಹೇಳಿದರು.
''ನರೇಂದ್ರ ಮೋದಿ ಅವರ ಎರಡನೇ ಅವಧಿಯ ಸರ್ಕಾರ ಜನರಿಗೆ ನೀಡಿರುವ ಆಶ್ವಾಸನೆಗಳನ್ನು ಈಡೇರಿಸುತ್ತಾ ಬಂದಿದೆ. ಅಭಿವೃದ್ಧಿಯ ಪಥದತ್ತ ದೇಶವನ್ನು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕರೆದೊಯ್ಯುತ್ತಿದೆ. ಕೋವಿಡ್ನಿಂದ ಸಂಭವಿಸಿರುವ ಬಿಕ್ಕಟ್ಟನ್ನು ಎದುರಿಸುವಲ್ಲಿ ಕೇಂದ್ರ ಸರ್ಕಾರ ಸಮರ್ಥವಾಗಿದೆ'' ಎಂದು ಜೋಶಿ ಹೇಳಿದರು.

''ಕಳೆದ 70 ವರ್ಷದಲ್ಲಿ ದೇಶದಲ್ಲಿ ಆಗಿದ್ದ ಗಂಭೀರ ಸಮಸ್ಯೆಗಳನ್ನು ಮೋದಿ ಸರ್ಕಾರ ಕಳೆದ 6 ವರ್ಷಗಳ ಅವಧಿಯಲ್ಲಿ ಸರಿಪಡಿಸಿದೆ. ಭಯೋತ್ಪಾದನೆ, ಬೆಲೆ ಏರಿಕೆಯಂತಹ ಗಂಭೀರ ಸಮಸ್ಯೆಗಳನ್ನು ತಹಬದಿಗೆ ತಂದಿದ್ದೇವೆ. ಈಗ ಕೋವಿಡ್ನಿಂದ ಉಂಟಾಗಿರುವ ಬಿಕ್ಕಟ್ಟನ್ನೂ ನಿಭಾಯಿಸುತ್ತೇವೆ'' ಎಂದು ಜೋಶಿ ಹೇಳಿದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ









Click it and Unblock the Notifications