ಫೋರ್ಜರಿ ಕೇಸ್ : ಜಗದೀಶ್ ಟೈಟ್ಲರ್ ಗೆ ಜಾಮೀನು

ಟೈಟ್ಲರ್ ಅವರು ವೈಯಕ್ತಿಕ ಬಾಂಡ್ 2 ಲಕ್ಷ ಹಾಗೂ ಇಬ್ಬರು ಶ್ಯೂರಿಟಿ ನೀಡಿ ಸಿಬಿಐ ವಿಶೇಷ ನ್ಯಾ. ವಿಕೆ ಗುಪ್ತ ಅವರು ಜಾಮೀನು ಮಂಜೂರು ಮಾಡಿದರು.
ಟೈಟ್ಲರ್ ಪರವಾಗಿ ಕೋರ್ಟ್ ನಲ್ಲಿ ಹಾಜರಾದ ಹಿರಿಯ ವಕೀಲ ದಿನೇಶ್ ಮಾಥುರ್, ಕೊನೆಕ್ಷಣದಲ್ಲಿ ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ ಹೆಸರನ್ನು ಪ್ರಕರಣದಲ್ಲಿ ಸೇರಿಸಲಾಗಿತ್ತು. ಕೋರ್ಟ್ ಗೆ ಅವರು ಸ್ವತಃ ಹಾಜರಾಗಿರುವ ಹಿನ್ನೆಲೆಯಲ್ಲಿ ಅವರನ್ನು ಬಂಧಿಸುವ ಅಗತ್ಯವಿಲ್ಲ ಎಂದು ವಾದ ಮಂಡಿಸಿದರು.
ಸಂವಿಧಾನದ 420ನೆ ವಿಧಿಯನ್ನು ಅವರ ವಿರುದ್ಧ ಪ್ರಯೋಗಿಸಲು ಬರುವುದಿಲ್ಲ ಎಂದು ಅವರು ಕೋರ್ಟ್ ನಲ್ಲಿ ಹೇಳಿದರು. ಜಾಮೀನು ಅರ್ಜಿಗೆ ವಿರೋಧ ವ್ಯಕ್ತಪಡಿಸಿದ ಸಿಬಿಐ ಪ್ರಾಸಿಕ್ಯೂಟರ್ ಅತುಲ್ ಶರ್ಮಾ, ಟೈಟ್ಲರ್ ಪ್ರಭಾವಿ ವ್ಯಕ್ತಿಯಾಗಿರುವ ಕಾರಣ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ. ಆದ್ದರಿಂದ ಅವರಿಗೆ ಜಾಮೀನು ನೀಡಬಾರದು ಎಂದು ವಾದಿಸಿದರು.
ಮತ್ತೊಂದು ಪ್ರಕರಣ: 1984ರಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆ ನಂತರ ನಡೆದ ಸಿಖ್ಖರ ನರಮೇಧ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನ ಹಿರಿಯ ನಾಯಕ ಜಗದೀಶ್ ಟೈಟ್ಲರ್ ವಿರುದ್ಧ ಸಿಬಿಐ ಮರು ತನಿಖೆ ನಡೆಸುವಂತೆ ದೆಹಲಿ ನ್ಯಾಯಾಲಯ ಏ.10, 2013 ರಂದು ಆದೇಶಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆ ನಂತರ ಉತ್ತರ ದೆಹಲಿಯ ಗುರ್ ದ್ವಾರ ಬಳಿ ನಡೆದಿದ್ದ ಸಿಖ್ ಹತ್ಯಾಕಾಂಡದ ಅರೋಪವನ್ನು ಟೈಟ್ಲರ್ ಮೇಲೆ ಹೊರೆಸಲಾಗಿತ್ತು. 1984ರಲ್ಲಿ ನಡೆದ ಸಿಖ್ ವಿರೋಧಿ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಗೆ ಕ್ಲೀನ್ ಚಿಟ್ ಕೊಟ್ಟ ಸಿಬಿಐ ವರದಿಗೆ ದೆಹಲಿ ಹೈಕೋರ್ಟ್ ಸಹಮತ ವ್ಯಕ್ತಪಡಿಸಿತ್ತು.
(ಪಿಟಿಐ)
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications