ಸೆಪ್ಟೆಂಬರ್ ವೇಳೆಗೆ 10 ಪಟ್ಟು ಕೋವ್ಯಾಕ್ಸಿನ್ ಲಸಿಕೆ ಉತ್ಪಾದನೆ: ಹರ್ಷವರ್ಧನ್
ನವದೆಹಲಿ, ಏಪ್ರಿಲ್ 19: ಸೆಪ್ಟೆಂಬರ್ ವೇಳೆಗೆ ಕೋವ್ಯಾಕ್ಸಿನ್ ಕೊರೊನಾ ಲಸಿಕೆ ಉತ್ಪಾದನೆ ಪ್ರಮಾಣ 10 ಪಟ್ಟು ಹೆಚ್ಚಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಮಾಹಿತಿ ನೀಡಿದ್ದಾರೆ.
ಭಾರತದಲ್ಲಿ ಸೆಪ್ಟೆಂಬರ್ ಒಳಗೆ ಪ್ರತಿ ತಿಂಗಳು 100 ಮಿಲಿಯನ್ ಕೋವ್ಯಾಕ್ಸಿನ್ ಲಸಿಕೆ ಉತ್ಪಾದಿಸಲಾಗುತ್ತದೆ. ಭಾರತ್ ಬಯೋಟೆಕ್ಗೆ ಸರ್ಕಾರವು 65 ಕೋಟಿ ರೂವನ್ನು ನೀಡುತ್ತಿದೆ.
ಕೋವಿಡ್ 19 ವಿರುದ್ಧದ ಔಷಧ ರೆಮ್ಡೆಸಿವಿರ್ ತಯಾರಿಕೆಯನ್ನು ಮೇ ವೇಳೆಗೆ ಪ್ರತಿ ತಿಂಗಳಿಗೆ 74.1 ಲಕ್ಷಕ್ಕೆ ದ್ವಿಗುಣಗೊಳಿಸಲಾಗುತ್ತದೆ ಎಂದಿದ್ದಾರೆ.
ತಾತ್ಕಾಲಿಕ ಆಸ್ಪತ್ರೆಗಳನ್ನು ಸ್ಥಾಪಿಸುವ ಮೂಲಕ ಮತ್ತು ಕೇಂದ್ರ ಸಚಿವಾಲಯಗಳ ಅಡಿಯಲ್ಲಿರುವ ಆಸ್ಪತ್ರೆಗಳಲ್ಲಿ ವಾರ್ಡ್ಗಳನ್ನು ಮೀಸಲಿಡುವ ಮೂಲಕ ಕೋವಿಡ್ 19 ರೋಗಿಗಳ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು.

ಭಾರತ ಸರ್ಕಾರ ಮಹಾರಾಷ್ಟ್ರಕ್ಕೆ 1,121, ಉತ್ತರ ಪ್ರದೇಶಕ್ಕೆ 1,700, ಜಾರ್ಖಂಡ್ಗೆ 1,500, ಗುಜರಾತ್ಗೆ 1,600, ಮಧ್ಯಪ್ರದೇಶಕ್ಕೆ 152 ಮತ್ತು ಛತ್ತೀಸ್ಗಢಕ್ಕೆ 230 ವೆಂಟಿಲೇಟರ್ಗಳನ್ನು ಒದಗಿಸಿದೆ ಎಂದರು.
ಕೋವಿಡ್ ವಿರುದ್ಧ ಹೋರಾಡಲು ರಾಜ್ಯಗಳಿಗೆ ಎಲ್ಲಾ ರೀತಿಯ ಬೆಂಬಲವನ್ನು ನೀಡಲಾಗುತ್ತಿದೆ. ನಿರಂತರವಾಗಿ ಆಮ್ಲಜನಕದ ಪೂರೈಕೆ ಮತ್ತು ಆರೋಗ್ಯ ಮೂಲಸೌಕರ್ಯಗಳ ವರ್ಧನೆಯನ್ನು ಖಚಿತಪಡಿಸಲಾಗುತ್ತಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ರೆಮ್ಡೆಸಿವಿರ್ ಅಗತ್ಯವನ್ನು ಪೂರೈಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದ ಅವರು, ಮೇ ವೇಳೆಗೆ ಉತ್ಪಾದನೆಯನ್ನು ತಿಂಗಳಿಗೆ 74.1 ಲೀಗೆ ದ್ವಿಗುಣಗೊಳಿಸಲಾಗುತ್ತಿದೆ.
ಉತ್ಪಾದನೆಯನ್ನು ಹೆಚ್ಚಿಸಲು 20 ಉತ್ಪಾದನಾ ಘಟಕಗಳಿಗೆ ಅನುಮತಿ ನೀಡಲಾಗಿದೆ. ರಫ್ತು ನಿಷೇಧಿಸಲಾಗಿದ್ದು ಬೆಲೆ ಇಳಿಸಲಾಗಿದೆ. ಕೊರೊನಾ ನಿಗ್ರಹಿಸಲು ಕಟ್ಟುನಿಟ್ಟಿನ ಮೇಲ್ವಿಚಾರಣೆ ನಡೆಸಲಾಗುತ್ತಿದೆ ಎಂದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications