ಕೋವಿಡ್ 19: ಮುಂದಿನ 3 ತಿಂಗಳು ಎಚ್ಚರಿಕೆಯಿಂದಿರಿ, ನೀತಿ ಆಯೋಗ ಸಲಹೆ
ನವದೆಹಲಿ, ಜುಲೈ 23: ಕೊರೊನಾ ಸೋಂಕು ಹೆಚ್ಚಳವಾಗುವ ಸಾಧ್ಯತೆ ಇರುವ ಕಾರಣ ಮುಂದಿನ 3 ತಿಂಗಳು ಎಚ್ಚರಿಕೆಯಿಂದಿರುವಂತೆ ನೀತಿ ಆಯೋಗ ದೆಹಲಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
ಲಾಕ್ಡೌನ್ ಸಡಿಲಿಕೆ ಮಾಡಿರುವ ಕಾರಣ ಸೋಂಕು ಹೆಚ್ಚಳವಾಗುವ ಸಾಧ್ಯತೆ ಕೂಡ ಹೆಚ್ಚಿದೆ, ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ನೀತಿ ಆಯೋಗದ ಸದಸ್ಯ ವಿಕೆ ಪೌಲ್ ಮಾತನಾಡಿದ್ದಾರೆ.
''ದೆಹಲಿಯು ದೇಶದ ರಾಜಧಾನಿಯಾಗಿರುವ ಕಾರಣ ಅಂತಾರಾಜ್ಯ ಪ್ರಯಾಣಕ್ಕೆ ಸಂಬಂಧಿಸಿದಂತೆ ಯಾವುದೇ ನಿರ್ಬಂಧ ವಿಧಿಸುವ ಮುನ್ನ ಕೇಂದ್ರ ಸರ್ಕಾರದ ಸಲಹೆ ಪಡೆಯಬೇಕು'' ಎಂದು ಸೂಚಿಸಿದ್ದಾರೆ.

ದೆಹಲಿಯಲ್ಲಿ ಕೊರೊನಾ ಸೋಂಕು ಪ್ರಮಾಣ ಪ್ರಸ್ತುತ ಕಡಿಮೆ ಇದೆ, ಆದರೆ ಮೈಮರೆಯುವಹಾಗಿಲ್ಲ, ಅನ್ಲಾಕ್ ಪ್ರಕ್ರಿಯೆ ಇರುವುದರಿಂದ ಯಾವಾಗ ಬೇಕಾದರೂ ಸೋಂಕು ಹೆಚ್ಚಳವಾಗಬಹುದು. ಹಾಗಾಗಿ ಮುಂದಿನ ಮೂರು ತಿಂಗಳ ಕಾಲ ಮಹತ್ವದ್ದಾಗಿದ್ದು, ನಾವು ಜಾಗರೂಕರಾಗಿರುವುದು ಅಗತ್ಯ ಎಂದಿದ್ದಾರೆ.
12 ರಾಜ್ಯಗಳಲ್ಲಿರುವ ಕೊರೊನಾ ವೈರಸ್ನ ರೂಪಾಂತರಿ ಡೆಲ್ಟಾ ಪ್ಲಸ್ ಬಗ್ಗೆ ದೆಹಲಿಯ ಮುಖ್ಯ ಕಾರ್ಯದರ್ಶಿ ವಿಜಯ್ ದೇವ್ ಮಾಹಿತಿ ನೀಡಿದ್ದಾರೆ. ಈಶಾನ್ಯ ಭಾರತದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಹಾಗೆಯೇ ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರದಿಂದ ಬರುವವರಿಗೆ ಈ ಹಿಂದೆ ಆರ್ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯಗೊಳಿಸಿದ್ದನ್ನು ಉಲ್ಲೇಖಿಸಿದ್ದಾರೆ.
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಡಾ. ಸಮ್ರಿಯಾನ್ ಪಾಂಡಾ ಅವರು ಮಾತನಾಡಿ, ''ಮೂರನೇ ಅಲೆಯು ಎರಡನೇ ಅಲೆಯಷ್ಟು ತೀವ್ರವಾಗಿರುವ ಸಾಧ್ಯತೆ ಇಲ್ಲ'' ಎಂದು ಹೇಳಿದ್ದಾರೆ.
ಕೊರೊನಾ ಎರಡನೇ ಅಲೆಯಲ್ಲಿ ದೆಹಲಿಯಲ್ಲಿ ಅಪಾರ ಪ್ರಮಾಣದಲ್ಲಿ ಜನರು ಮೃತಪಟ್ಟಿದ್ದರು, ಏಪ್ರಿಲ್ 20ರಂದು ಒಂದೇ ದಿನ ದೆಹಲಿಯಲ್ಲಿ 28,395 ಕೋವಿಡ್ ಪ್ರಕರಣಗಳು ವರದಿಯಾಗಿದ್ದವು, ಮೇ 3ರಂದು ಅತಿ ಹೆಚ್ಚು ಪ್ರಮಾಣದಲ್ಲಿ ಅಂದರೆ 448 ಮಂದಿ ಸಾವಿಗೀಡಾಗಿದ್ದಾರೆ.
ಸಭೆಯ ಅಧ್ಯಕ್ಷತೆವಹಿಸಿದ್ದ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಮಾತನಾಡಿ, ಆರ್ಟಿಪಿಸಿಆರ್ ನೆಗೆಟಿವ್ ವರದಿಯ ಬದಲು ಲಸಿಕೆ ಪ್ರಮಾಣಪತ್ರವನ್ನು ಮಾನದಂಡವಾಗಿಸಿಕೊಳ್ಳಬೇಕು, ಏಕೆಂದರೆ ಇದು ಲಸಿಕೆ ಹಾಕಿಸಿಕೊಳ್ಳುವ ಪ್ರಮಾಣವನ್ನು ಉತ್ತೇಜಿಸುತ್ತದೆ ಎಂದು ಹೇಳಿದರು.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications