ಮುಂಬರುವ ದಿನಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಳ: ಎನ್ಟಿಜಿಐ ಮುಖ್ಯಸ್ಥ
ನವದೆಹಲಿ ಜನವರಿ 10: ದೇಶದಲ್ಲಿ ದಿನ ಕಳೆದಂತೆ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಸೋಂಕು ವೇಗವಾಗಿ ಹರಡುತ್ತಿದೆ. ಈ ಮಧ್ಯೆ ಎನ್ಟಿಜಿಐ ಮುಖ್ಯಸ್ಥರು ಆತಂಕಕಾರಿ ಹೇಳಿಕೆಯನ್ನು ನೀಡಿದ್ದಾರೆ. 'ಓಮಿಕ್ರಾನ್ ರೂಪಾಂತರದಲ್ಲಿ 3-4 ಉಪ-ವಂಶಾವಳಿಗಳಿವೆ. ಹೀಗಾಗಿ ಮುಂಬರುವ ದಿನಗಳಲ್ಲಿ ಕೋವಿಡ್-19 ಪ್ರಕರಣಗಳು ವೇಗವಾಗಿ ಹೆಚ್ಚಾಗಲಿವೆ ಎಂದು ಎನ್ಟಿಜಿಐ ಮುಖ್ಯಸ್ಥ ಎನ್ಕೆ ಅರೋರಾ ಮಂಗಳವಾರ ಹೇಳಿದರು.
ದೇಶದ ಕೊರೋನವೈರಸ್ ಸಲಹಾ ಸಮಿತಿಯನ್ನು ಮೇಲ್ವಿಚಾರಣೆ ಮಾಡುವ ಸರ್ಕಾರಿ ಸಮಿತಿಯಾದ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪಿನ (ಎನ್ಟಿಜಿಐ) ಅಧ್ಯಕ್ಷ ಡಾ ಎನ್ಕೆ ಅರೋರಾ ಅವರು ಓಮಿಕ್ರಾನ್ ರೂಪಾಂತರದಲ್ಲಿ 3-4 ಉಪ-ವಂಶಾವಳಿಗಳಿವೆ ಎಂದು ಮಂಗಳವಾರ ಹೇಳಿದ್ದಾರೆ.
"ಕೊರೊನಾವೈರಸ್ನ ಓಮಿಕ್ರಾನ್ ರೂಪಾಂತರದಲ್ಲಿ 3-4 ಉಪ-ವಂಶಗಳಿವೆ. ರೋಗನಿರ್ಣಯಕ್ಕೆ ಬಂದಾಗ ಈ ಉಪ-ವಂಶಾವಳಿಗಳು ವಿಭಿನ್ನವಾಗಿರಬಹುದು. ಆದರೆ ಅದರ ಸೋಂಕು ನಡವಳಿಕೆಯು ಒಂದೇ ಆಗಿರುತ್ತದೆ" ಎಂದು ಅರೋರಾ ಹೇಳಿದರು.

ದೇಶದಲ್ಲಿ ಕೊರೊನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 1,68,063 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,58,75,790ಕ್ಕೆ ಏರಿಕೆಯಾಗಿದೆ.69,959 ಸೋಂಕಿತರು ಗುಣಮಮುಖರಾಗಿದ್ದಾರೆ. 277 ಮಂದಿ ಸಾವನ್ನಪ್ಪಿದ್ದಾರೆ. ದೈನಂದಿನ ಪಾಸಿಟಿವಿಟಿ ದರ ಶೇ. 10. 64 ರಷ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8,21,446ಕ್ಕೆ ಏರಿಕೆಯಾಗಿದೆ. ಜನವರಿ 10 ರಂದು ಒಟ್ಟು 15,79,928 ಪರೀಕ್ಷೆ ನಡೆಸಲಾಗಿದ್ದು, ಈವರೆಗೂ 69,31,55,280 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ದೆಹಲಿಯಾದ್ಯಂತ ಇರುವ ಕಾರಾಗೃಹಗಳಲ್ಲಿ ಈವರೆಗೂ 66 ಕೈದಿಗಳು ಮತ್ತು 46 ಜೈಲು ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ದೇಶದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 4,461ಕ್ಕೆ ಏರಿಕೆಯಾಗಿದೆ. ಇದರಲ್ಲಿ ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿಯೇ ಅತಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ವರದಿಯಾಗಿದೆ. ಪಂಚ ರಾಜ್ಯ ಚುನಾವಣೆ ನಡೆಯಲಿರುವ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಮತ್ತು ಗೋವಾದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾದ ಸಿಬ್ಬಂದಿಯನ್ನು ಮುಂಚೂಣಿ ಕಾರ್ಯಕರ್ತರನ್ನಾಗಿ ಪರಿಗಣಿಸಿರುವುದರಿಂದ ಅವರು ಬೂಸ್ಟರ್ ಡೋಸ್ ಪಡೆಯಲು ಅರ್ಹರಾಗಿರುತ್ತಾರೆ.
ದೇಶಾದ್ಯಂತ ಬೆಚ್ಚುಬೀಳಿಸಿರುವ ಕೊರೊನಾ ರೂಪಾಂತರಿ ಓಮಿಕ್ರಾನ್ ಸೌಮ್ಯ ಸೋಂಕು ಎಂದು ಪರಿಗಣಿಸಲ್ಪಟ್ಟರೂ ಕೂಡ ಇದು ದೇಹದ ಕೆಲವು ಅಂಗಗಳಿಗೆ ಹಾನಿಯನ್ನುಂಟುಮಾಡುತ್ತದೆ ಎಂದು ಹೊಸ ಅಧ್ಯಯನದ ಮೂಲಕ ತಿಳಿದುಬಂದಿದೆ. ಯುರೋಪಿಯನ್ ಹಾರ್ಟ್ ಜರ್ನಲ್ನಲ್ಲಿ ಪ್ರಕಟವಾದ ಹೊಸ ಅಧ್ಯಯನವು ಕೊರೊನಾ ವೈರಸ್ ಸೋಂಕು ರೋಗಿಗಳು ಅದರ ರೋಗಲಕ್ಷಣಗಳನ್ನು ತೋರಿಸದಿದ್ದರೂ ಸಹ ಅದರ ಪರಿಣಾಮವನ್ನು ಉಂಟುಮಾಡುತ್ತದೆ ಎಂದು ಹೇಳಿದೆ. ಓಮಿಕ್ರಾನ್ ಸೋಂಕಿಗೆ ಒಳಗಾಗದ ಜನರಿಗೆ ಹೋಲಿಸಿದರೆ, ಓಮಿಕ್ರಾನ್ ಸೋಂಕಿತರಿಗೆ ಮಧ್ಯಮ ಅವಧಿಯ ಅಂಗ ಹಾನಿ ಕಂಡುಬಂದಿದೆ ಎಂದು ಅದರ ಫಲಿತಾಂಶವು ತೋರಿಸಿದೆ. ಕೊರೊನಾ ಹೊಸ ರೂಪಾಂತರಿ ಸೋಂಕಿತರಿಗೆ "ಶ್ವಾಸಕೋಶದ ಕಾರ್ಯ ಪರೀಕ್ಷೆಗಳು ಶ್ವಾಸಕೋಶದ ಕಾರ್ಯನಿರ್ವಹಣೆ ಪ್ರಮಾಣದಲ್ಲಿ ಮೂರು ಪ್ರತಿಶತದಷ್ಟು ಕಡಿತವನ್ನು ತೋರಿಸಿದೆ"ಎಂದು ಅಧ್ಯಯನದ ಸಂಶೋಧಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications