"ಕೊರೊನಾ ಲಸಿಕಾ ಅಭಿಯಾನಕ್ಕೆ ಪಿಎಂ ಪರಿಹಾರ ನಿಧಿ ಬಳಕೆ"
ನವದೆಹಲಿ, ಫೆಬ್ರುವರಿ 09: ದೇಶದಲ್ಲಿ ಕೊರೊನಾ ಸೋಂಕಿನ ನಿಗ್ರಹಕ್ಕೆ ಕೇಂದ್ರ ಸರ್ಕಾರ ಹಾಗೂ ಎಲ್ಲಾ ರಾಜ್ಯ ಸರ್ಕಾರಗಳು ಒಗ್ಗಟ್ಟಾಗಿ ಕಾರ್ಯನಿರ್ವಹಿಸಿವೆ ಹಾಗೂ ಪ್ರಧಾನ ಮಂತ್ರಿ ನಿಧಿಯನ್ನು ಕೊರೊನಾ ಲಸಿಕಾ ಅಭಿಯಾನಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ಮಂಗಳವಾರ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.
ಕೊರೊನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ಸೋಂಕಿನಿಂದ ಸಾವನ್ನಪ್ಪಿದ ಕೊರೊನಾ ವಾರಿಯರ್ ಗಳ ಕುಟುಂಬಗಳಿಗೆ ಇದುವರೆಗೂ ಐವತ್ತು ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡಲಾಗಿದೆ ಎಂದು ತಿಳಿಸಿದರು.
"ಸರ್ಕಾರವು ತನ್ನ ನಾಗರಿಕರಿಗೆ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ನೀಡಲು ಪ್ರಯತ್ನಿಸುತ್ತಿದೆ" ಎಂದು ಹೇಳಿರುವ ಹರ್ಷವರ್ಧನ್, ಜೀವನ ಹಕ್ಕು, ಆರೋಗ್ಯ ಹಕ್ಕುಗಳನ್ನು ಇದು ಒಳಗೊಳ್ಳುತ್ತದೆ, ಸಂಸತ್ತಿನ ಶಾಸನದಲ್ಲಿ ಇರಬೇಕಿಲ್ಲ ಎಂದು ಹೇಳಿದ್ದಾರೆ.

ಕೊರೊನಾ ಸೋಂಕಿನಿಂದಾಗಿ ಬಯೋ ಮೆಡಿಕಲ್ ತ್ಯಾಜ್ಯದ ಪ್ರಮಾಣ ಹೆಚ್ಚಾಗಿರುವ ಕುರಿತು ಪ್ರಸ್ತಾಪ ಮಾಡಿದ ಅವರು, "ವೈದ್ಯಕೀಯ ತ್ಯಾಜ್ಯ ಸಂಸ್ಕರಣೆಗೆ ಸಂಘಟಿತ ಕಾರ್ಯವಿಧಾನ ಜಾರಿಯಲ್ಲಿದೆ" ಎಂದು ತಿಳಿಸಿದ್ದಾರೆ.












Click it and Unblock the Notifications