ಕ್ರಿಕೆಟ್ಟಿಗ ಯುವರಾಜ್ ಸಿಂಗ್ ತಂದೆಗೂ ಕ್ಯಾನ್ಸರ್
ನವದೆಹಲಿ, ಜೂನ್ 5: ಮೊದಲು ಮಗನಿಗೆ ಈಗ ಅಪ್ಪನಿಗೂ ಕ್ಯಾನ್ಸರ್ ಕಾಣಿಸಿಕೊಂಡಿದೆ. ಯುವರಾಜ್ ಸಿಂಗ್ ಅವರು ಕ್ಯಾನ್ಸರ್ ಪೀಡಿತರಾಗಿ ತದನಂತರ ಅಮೆರಿಕದಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ ಈಗ ಆವರ ತಂದೆ ಯೋಗರಾಜ್ ಸಿಂಗ್ ಅವರಿಗೂ ಕ್ಯಾನ್ಸರ್ ಕಾಣಿಸಿಕೊಂಡಿದೆ.
ಗಂಟಲು ಕ್ಯಾನ್ಸರ್ (vocal chords cancer) ನಿಂದ ಬಳಲುತ್ತಿರುವ ಯೋಗರಾಜ್ ಸಿಂಗ್ ಅವರು ಅಮೆರಿಕದಲ್ಲಿ ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯಲ್ಲಿ ಪ್ರಕಟವಾಗಿರುವ ವರದಿಯ ಪ್ರಕಾರ 56 ವರ್ಷದ ಯೋಗರಾಜ್ ಸಿಂಗ್ ಅವರು ಅಮೆರಿಕದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗಂಟಲಿನಲ್ಲಿ ಕಾಣಿಸಿಡೊಂಡಿದ್ದ ಗಡ್ಡೆಯನ್ನು ತೆಗೆಸಿ ಹಾಕಿಕೊಂಡಿದ್ದಾರೆ. ಕೆಲ ತಿಂಗಳುಗಳ ಹಿಂದೆಯೇ ಯೋಗರಾಜ್ ಸಿಂಗ್ ಅವರಿಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಸ್ವತಃ ಯುವರಾಜ್ ಸಿಂಗ್ ಅವರೇ ಬಲವಂತಪಡಿಸಿ ಅಮೆರಿಕದಲ್ಲಿ (ನ್ಯೂಯಾರ್ಕ್) ಟ್ರೀಟ್ಮೆಂಟ್ ತೆಗೆದುಕೊಳ್ಳುವಂತೆ ಅಪ್ಪನಿಗೆ ಸಲಹೆ ನೀಡಿದ್ದರು ಎನ್ನಲಾಗಿದೆ. (ಪುಸ್ತಕ ರೂಪದಲ್ಲಿ ಯುವರಾಜ್ ಕ್ಯಾನ್ಸರ್ ಗೆದ್ದ ಕತೆ)
'ಅವರು (ಯೋಗರಾಜ್) ಆಗಾಗ ಗಂಟಲು ಬೇನೆ, ಕೆಮ್ಮು ಎಂದು ಹೇಳುತ್ತಿದ್ದರು. ಆದರೆ ಅವರಿಗೆ ನಿಜವಾಗಿಯೂ ಏನಾಗುತ್ತಿದೆ ಎಂಬುದು ಗೊತ್ತಾಗಲಿಲ್ಲ. ಒಂದಷ್ಟು ಔಷಧ ತೆಗೆದುಕೊಂಡು ವಾಸಿಯಾದ ನಂತರ ನಾನೀಗ ಆರಾಮವಾಗಿದ್ದೇನೆ ಅನ್ನುತ್ತಿದ್ದರು. ಆದರೆ ಸಮಸ್ಯೆ ಉಲ್ಬಣಿಸಿದಾಗ ವಿಷಯ ಬಹಿರಂಗವಾಯಿತು' ಎಂದು ಯುವರಾಜ್ ಸಿಂಗ್ ಅವರ ತಾಯಿ ಸತ್ವೀರ್ ಅವರು ತಮ್ಮ ಪತಿಯ ಬಗ್ಗೆ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ತಿಳಿಸಿದ್ದಾರೆ. (ದಿಲ್ಲಿ ಗ್ಯಾಂಗ್ ರೇಪ್: ಮಾನವೀಯತೆ ಮೆರೆದ ಯುವರಾಜ)
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications