ಮೋದಿಯನ್ನು ಚೇಳು ಎಂದಿದ್ದ ತರೂರ್ ವಿರುದ್ಧ ಮಾನನಷ್ಟ ಮೊಕದ್ದಮೆ
ನವದೆಹಲಿ, ನವೆಂಬರ್ 03: 'ಪ್ರಧಾನಿ ನರೇಂದ್ರ ಮೋದಿ ಶಿವಲಿಂಗದ ಮೇಲಿನ ಚೇಳು' ಎಂದಿದ್ದ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಶಶಿ ತರೂರ್, 'ಪ್ರಧಾನಿ ನರೇಂದ್ರ ಮೋದಿ ಅವರು ಶಿವಲಿಂಗದ ಮೇಲಿರುವ ಚೇಳಿನ ಹಾಗೆ. ಬರಿ ಕೈಯಿಂದ ಅದನ್ನು ಸರಿಸುವುದಕ್ಕೂ ಆಗುವುದಿಲ್ಲ. ಚಪ್ಪಲಿಯಿಂದ ಹೊಡೆಯಲೂ ಸಾಧ್ಯವಿಲ್ಲ' ಎಂಬ ಹೇಳಿಕೆ ನೀಡಿದ್ದರು.
ಮೋದಿ ಅವರನ್ನು ನಿಯಂತ್ರಿಸಲಾಗದ ಆರೆಸ್ಸೆಸ್ ನಾಯಕರೇ ಒಬ್ಬರು ಇಂಥ ಹೇಳಿಕೆ ನೀಡಿದ್ದರು ಎಂದು ತರೂರ್ ಹೇಳಿದ್ದರು.

ಈ ವಿವಾದಾತ್ಮಕ ಹೇಳಿಕೆಯ ವಿರುದ್ಧ ಮೋದಿ ಅಭಿಮಾನಿಗಳು ಮತ್ತು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ನವದೆಹಲಿಯ ಪಟಿಯಾಲಾ ಹೌಸ್ ಕೋರ್ಟಿನಲ್ಲಿ ತರೂರ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ.












Click it and Unblock the Notifications