ವಾದ್ರಾ ಭೂ ಹಗರಣದ ಎರಡು ಪುಟ ಮಾಯ
ಚಂದೀಗಢ, ಡಿ.19: ಎಐಸಿಸಿ ವರಿಷ್ಠೆ ಸೋನಿಯಾ ಗಾಂಧಿ ಅವರು ಅನಾರೋಗ್ಯ ಪೀಡಿತರಾಗಿ ಹಾಸಿಗೆ ಹಿಡಿದಿರುವ ಸಂದರ್ಭದಲ್ಲೇ ಅಳಿಯ ರಾಬರ್ಟ್ ವಾದ್ರಾಗೆ ಮತ್ತೆ ಸಂಕಷ್ಟ ಕಾಣಿಸಿಕೊಂಡಿದೆ. ಡಿಎಲ್ಎಫ್ ಹಗರಣಕ್ಕೆ ಸಂಬಂಧಿಸಿದ ದಾಖಲೆ ಪೈಕಿ ಎರಡು ಪುಟಗಳು ನಾಪತ್ತೆಯಾಗಿರುವುದನ್ನು ಹರ್ಯಾಣ ಸರ್ಕಾರ ಸ್ಪಷ್ಟಪಡಿಸಿದೆ.
ಗುರುಗಾಂವ್ ಲ್ಯಾಂಡ್ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತಹ ದಾಖಲೆಗಳು ಈಗ ಕಣ್ಮರೆಯಾಗಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡುವ ಸಾಧ್ಯತೆಯಿದೆ. ಐಎಎಸ್ ಅಧಿಕಾರಿ ಅಶೋಕ್ ಖೆಮ್ಕಾ ಅವರು ಆರ್ ಟಿಐ ಅರ್ಜಿ ಸಲ್ಲಿಸಿ ಈ ಮಾಹಿತಿ ಪಡೆದುಕೊಂಡಿದ್ದಾರೆ. ಖೆಮ್ಕಾ ಅವರು ಪ್ರಧಾನ ನಿರ್ದೇಶಕರಾಗಿದ್ದ ಕಾಲದಲ್ಲಿ ವಾದ್ರಾ ಹಾಗೂ ಡಿಎಲ್ ಎಫ್ ಹಗರಣವನ್ನು ರದ್ದುಗೊಳಿಸಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು. [ವಾದ್ರಾಗೆ ಕೋಪ ಬಂದಿದ್ದೇಕೆ?]

ಅದರೆ, ಖೆಮ್ಕಾ ಅವರಿಗೆ ವಾದ್ರಾ ಹಾಗೂ ಡಿಎಲ್ ಎಫ್ ನಡುವಿನ ಒಪ್ಪಂದ ರದ್ದುಗೊಳಿಸುವ ಅಧಿಕಾರ ಇದೆಯೆ? ಎಂದು ತನಿಖೆ ಮಾಡಲು ಭೂಪೇಂದ್ರ ಸಿಂಗ್ ಹೂಡಾ ನೇತೃತ್ವದ ಸರ್ಕಾರ ಹರ್ಯಾಣ ಸರ್ಕಾರ ಸಮಿತಿ ನೇಮಿಸಿತ್ತು. ಮೂವರು ಸದಸ್ಯರ ತನಿಖಾ ಸಮಿತಿ ವಿರುದ್ಧ ವರದಿ ನೀಡಿತ್ತು. ಖೆಮ್ಕಾ ಅವರಿಗೆ ಚಾರ್ಚ್ ಶೀಟ್ ಹಾಕಿ ಒಪ್ಪಂದಕ್ಕೆ ಗ್ರೀನ್ ಸಿಗ್ನಲ್ ನೀಡಿತ್ತು. ಒಪ್ಪಂದ ರದ್ದು ಮಾಡಿದ್ದ ಅಶೋಕ್ ಖೇಮ್ಕಾ ವಿನಾಕಾರಣ ದೂರುತಿದ್ದಾರೆ ಎಂದು ಸಮಿತಿ ಹೇಳಿತ್ತು.
ರಾಬರ್ಟ್ ವಾದ್ರಾ ಅವರು ಹೊಂದಿರುವ ಎಲ್ಲ ಆಸ್ತಿ ಹಾಗೂ ಅವರ ಒಡೆತನದ ಎಲ್ಲ ಕಂಪನಿಗಳ ವಿವರಗಳನ್ನು ನೀಡುವಂತೆ ನೂತನ ಸರ್ಕಾರ ಗುಡಗಾಂವ್ ಜಿಲ್ಲಾಡಳಿತಕ್ಕೆ ಆದೇಶಿಸಿದೆ. ಒಂದು ವಾರದೊಳಗೆ ವಿವರ ನೀಡಬೇಕೆಂದು ಭೂ ದಾಖಲೆಗಳ ನಿರ್ದೇಶಕರು ಗುಡಗಾಂವ್ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದರು. [ರಾಬರ್ಟ್ ವಾದ್ರಾ ಹಿನ್ನೆಲೆ ಗೊತ್ತೇ?]
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications