ದಾವೂದ್ ಎಲ್ಲಿದ್ದಾನೋ ನಮಗೆ ಗೊತ್ತಿಲ್ಲ: ಮೋದಿ ಸರ್ಕಾರ್
ನವದೆಹಲಿ, ಮೇ.5: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಎಲ್ಲಿದ್ದಾನೋ ನಮಗೆ ಗೊತ್ತಿಲ್ಲ, ಎಲ್ಲಿದ್ದಾನೆ ಎಂದು ತಿಳಿದರೆ ಆತನನ್ನು ಬಂಧಿಸುವ ಪ್ರಕ್ರಿಯೆಗೆ ಚಾಲನೆ ನೀಡುತ್ತೇವೆ ಎಂದು ಮೋದಿ ಸರ್ಕಾರ ತನ್ನ ಅಧಿಕೃತ ಹೇಳಿಕೆಯನ್ನು ಲೋಕಸಭೆಯಲ್ಲಿ ಮಂಗಳವಾರ ನೀಡಿದೆ.
ಇತ್ತೀಚೆಗೆ ಸಿಬಿಐನ ನಿವೃತ್ತ ಡಿಐಜಿ ನೀರಜ್ ಕುಮಾರ್ ಅವರು ದಾವೂದ್ ಇಬ್ರಾಹಿಂ ಈ ಹಿಂದೆ ಶರಣಾಗತನಾಗಲು ಬಯಸಿದ್ದ ಆದರೆ, ಸಿಬಿಐ ಇದಕ್ಕೆ ಒಪ್ಪಲಿಲ್ಲ ಎಂದು ಹೇಳಿಕೆ ನೀಡಿ ಎಲ್ಲರ ಹುಬ್ಬೇರಿಸಿದ್ದರು. ಇದಾದ ಬಳಿಕ ದಾವೂದ್ ಬಂಧನ ಸುದ್ದಿ ಮಾಧ್ಯಮಗಳಿಗೆ ಮಾತ್ರ ದೊಡ್ಡ ಸುದ್ದಿ ಏನಲ್ಲ
ಬಿಜೆಪಿ ಸಂಸದ ನಿತ್ಯಾನಂದ ರಾಯ್ ಅವರು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕುರಿತು ಕೇಳಿದ್ದ ಪ್ರಶ್ನೆಗೆ ಗೃಹಖಾತೆ ರಾಜ್ಯ ಸಚಿವ ಹರಿಭಾಯ್ ಚೌಧುರಿ ಈ ಉತ್ತರ ನೀಡಿದ್ದಾರೆ.

1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಆರೋಪಿ ದಾವೂದ್ ಇಬ್ರಾಹಿಂ ಯಾವ ಸ್ಥಳದಲ್ಲಿ ಇದ್ದಾನೆ ಎಂಬುದು ತಿಳಿದಿಲ್ಲ. ಪಾತಕಿ ದಾವೂದ್ ಇಬ್ರಾಹಿಂ ಎಲ್ಲಿದ್ದಾನೆ ಎಂದು ತಿಳಿದರೆ ಮುಂದಿನ ಪ್ರಕ್ರಿಯೆ ಆರಂಭಿಸಲಾಗುವುದು ಎಂದಿದ್ದಾರೆ.
ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಬಗ್ಗೆ ಗೃಹ ಇಲಾಖೆ ಉತ್ತರ ಅನೇಕ ಮಂದಿ ಹುಬ್ಬೇರಿಸಿದೆ. ಪಾಕಿಸ್ತಾನ- ಅಫ್ಘಾನಿಸ್ತಾನದ ಬಾರ್ಡರ್ ನಲ್ಲಿ ದಾವೂದ್ ನೆಲೆಸಿದ್ದಾನೆ ಎಂದೇ ನಂಬಲಾಗಿತ್ತು. ಅದರೆ, ಈಗ ದಾವೂದ್ ಇರುವಿಕೆ ಬಗ್ಗೆ ಪ್ರಶ್ನೆಗಳು ಎದ್ದಿವೆ.
ಡಿಸೆಂಬರ್ 27, 2014ರಂದು ಗೃಹ ಸಚಿವ ರಾಜನಾಥ್ ಸಿಂಗ್ ಅವರು ಲಕ್ನೋದಲ್ಲಿ ಮಾತನಾಡುತ್ತಾ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿ ನೆಲೆಸಿದ್ದಾನೆ. ಆತನನ್ನು ಹಸ್ತಾಂತರಿಸುವಂತೆ ಪಾಕಿಸ್ತಾನಕ್ಕೆ ಮನವಿ ಮಾಡಲಾಗಿದೆ ಎಂದಿದ್ದರು.
ಮೋದಿ ಸರ್ಕಾರ ಬಂದ ಮೇಲೆ ದಾವೂದ್ ಇಬ್ರಾಹಿಂ ತನ್ನ ನೆಲೆಯಾದ ಕರಾಚಿ ತೊರೆದು ಅಫ್ಘಾನಿಸ್ತಾನದ ಗಡಿಭಾಗದಲ್ಲಿ ನೆಲೆಸಿದ್ದಾನೆ ಎನ್ನಲಾಗಿತ್ತು. ನಂತರ ದುಬೈ ಕಡೆ ತೆರಳಿದ ಸುದ್ದಿ ಬಂದಿತ್ತು. ಆದರೆ, ಖಚಿತ ಮಾಹಿತಿ ಯಾರಿಗೂ ಸಿಕ್ಕಿಲ್ಲ. (ಪಿಟಿಐ)
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications