ದಾವೂದ್ ಇಬ್ರಾಹಿಂಗೆ ಕೋವಿಡ್-19 : ಸುದ್ದಿ ಸುಳ್ಳು ಎಂದ ಸಹೋದರ ಅನೀಸ್!
ನವದೆಹಲಿ, ಜೂನ್ 6: ಭೂಗತ ಜಗತ್ತಿನ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಪತ್ನಿ ಮೆಹಜಬೀನ್ ಗೆ ಕೊರೊನಾ ವೈರಸ್ ಸೋಂಕು ತಗುಲಿದೆ ಎಂಬ ಸುದ್ದಿ ಶುಕ್ರವಾರ ಹರಿದಾಡಿತ್ತು.
Recommended Video
ಕೋವಿಡ್-19 ಪಾಸಿಟಿವ್ ಕಂಡುಬಂದ ಮೇಲೆ ಕರಾಚಿಯ ಆರ್ಮಿ ಆಸ್ಪತ್ರೆಯಲ್ಲಿ ದಾವೂದ್ ಇಬ್ರಾಹಿಂ ಮತ್ತು ಪತ್ನಿ ಮೆಹಜಬೀನ್ ದಾಖಲಾಗಿದ್ದಾರೆ ಎಂದು ಗುಪ್ತಚರ ಇಲಾಖೆಯ ಮೂಲಗಳು ತಿಳಿಸಿತ್ತು.
ಆದರೆ, ಈ ಸುದ್ದಿಯನ್ನ 'ಡಿ' ಕಂಪನಿಯ ಭೂಗತ ಕಾರ್ಯಾಚರಣೆ ಮತ್ತು ಹಣಕಾಸು ವ್ಯವಹಾರ ನಿಯಂತ್ರಿಸುವ ದಾವೂದ್ ಇಬ್ರಾಹಿಂ ಸಹೋದರ ಅನೀಸ್ ಇಬ್ರಾಹಿಂ ತಳ್ಳಿಹಾಕಿದ್ದಾರೆ.

ಕೊರೊನಾ ವೈರಸ್ ಸೋಂಕು ತಗುಲಿಲ್ಲ.!
''ದಾವೂದ್ ಇಬ್ರಾಹಿಂ ಮತ್ತು ಕುಟುಂಬಕ್ಕೆ ಕೊರೊನಾ ವೈರಸ್ ಸೋಂಕು ತಗುಲಿಲ್ಲ. ಎಲ್ಲರೂ ಮನೆಯಲ್ಲೇ ಇದ್ದಾರೆ'' ಎಂದು ಐಎಎನ್ಎಸ್ ಗೆ ಅನೀಸ್ ಇಬ್ರಾಹಿಂ ಸ್ಪಷ್ಟಪಡಿಸಿದ್ದಾರೆ.

ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಎಂದು ವರದಿ
ಪಾಕಿಸ್ತಾನದಲ್ಲಿ ನೆಲೆಸಿರುವ ದಾವೂದ್ ಇಬ್ರಾಹಿಂ ಮತ್ತು ಪತ್ನಿ ಮೆಹಜಬೀನ್ ಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಕರಾಚಿಯಲ್ಲಿರುವ ಮಿಲಿಟರಿ ಆಸ್ಪತ್ರೆಯಲ್ಲಿ ದಾವೂದ್ ಇಬ್ರಾಹಿಂ ಮತ್ತು ಪತ್ನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ದಾವೂದ್ ಇಬ್ರಾಹಿಂ ಜೊತೆಗಿರುವ ಸಿಬ್ಬಂದಿ ಮತ್ತು ಗಾರ್ಡ್ ಗಳನ್ನೂ ಕ್ವಾರಂಟೈನ್ ನಲ್ಲಿಡಲಾಗಿದೆ ಎಂದು ಗುಪ್ತಚರ ಇಲಾಖೆ ಶುಕ್ರವಾರ ಮಾಹಿತಿ ನೀಡಿತ್ತು.

ದಾವೂದ್ ಇಬ್ರಾಹಿಂಗೆ ಅನಾರೋಗ್ಯ.?
ಕಳೆದ ಹಲವು ದಿನಗಳಿಂದ ದಾವೂದ್ ಇಬ್ರಾಹಿಂಗೆ ತೀವ್ರ ಅನಾರೋಗ್ಯ ಸಮಸ್ಯೆ ಕಾಡುತ್ತಿದೆ ಎಂಬ ಸುದ್ದಿಯೂ ಇದೆ. ದಾವೂದ್ ಇಬ್ರಾಹಿಂ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ವದಂತಿಗಳೂ ಹರಿದಾಡುತ್ತಿವೆ.

ಕುಖ್ಯಾತ ಭೂಗತ ಪಾತಕಿ ದಾವೂದ್ ಇಬ್ರಾಹಿಂ
ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಈ ದಾವೂದ್ ಇಬ್ರಾಹಿಂ. ಮುಂಬೈ ಮೂಲದ ದಾವೂದ್ ಇಬ್ರಾಹಿಂ ಭೂಗತ ಪಾತಕಿ ಮತ್ತು ಡ್ರಗ್ ಡೀಲರ್. ಭಯೋತ್ಪಾದನೆ, ಕೊಲೆ, ಸುಲಿಗೆ, ಉದ್ದೇಶಿತ ಕೊಲೆ, ಮಾದಕ ವಸ್ತು ಕಳ್ಳಸಾಗಣೆ ಸೇರಿದಂತೆ ಹಲವಾರು ಪ್ರಕರಣಗಳು ದಾವೂದ್ ಇಬ್ರಾಹಿಂ ಮೇಲಿದೆ.
1993 ರಲ್ಲಿ ನಡೆದ ಮುಂಬೈ ಬಾಂಬ್ ಬ್ಲಾಸ್ಟ್ ಹಿಂದಿನ ಮಾಸ್ಟರ್ ಮೈಂಡ್ ಇದೇ ದಾವೂದ್ ಇಬ್ರಾಹಿಂ. ಭಾರತದಿಂದ ಎಸ್ಕೇಪ್ ಆಗಿರುವ ದಾವೂದ್ ಇಬ್ರಾಹಿಂಗೆ ಪಾಕಿಸ್ತಾನ ಆಶ್ರಯ ನೀಡಿದೆ ಎನ್ನಲಾಗಿದೆ.
ಅಂದ್ಹಾಗೆ, ದಾವೂದ್ ಇಬ್ರಾಹಿಂ ಮತ್ತು ಮೆಹಜಬೀನ್ ದಂಪತಿಗೆ ನಾಲ್ವರು ಮಕ್ಕಳು.
-
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications