ಪ್ರತ್ಯೇಕ ಬಸ್ ಪಥ; ನಿಯಮ ಉಲ್ಲಂಘನೆಗೆ 10 ಸಾವಿರ ದಂಡ
ನವದೆಹಲಿ, ಮಾರ್ಚ್ 23; ನವದೆಹಲಿಯ ಸಾರಿಗೆ ಇಲಾಖೆ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ನಗರದ ಆಯ್ದ 15 ರಸ್ತೆಗಳಲ್ಲಿ ಬಸ್ ಮತ್ತು ಸರಕು ಸಾಗಣೆ ವಾಹನಗಳಿಗೆ ಪ್ರತ್ಯೇಕ ಪಥ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿದೆ.
ಪ್ರತ್ಯೇಕ ಪಥ ನಿಯಮವನ್ನು ಉಲ್ಲಂಘನೆ ಮಾಡುವ ಚಾಲಕರಿಗೆ 10,000 ರೂ. ತನಕ ದಂಡ ಹಾಗೂ ಆರು ತಿಂಗಳ ಜೈಲು ಶಿಕ್ಷೆ ವಿಧಿಸಲು ಅಧಿಕಾರವಿದೆ. 1988ರ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 192-A ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.
ಸಂಚಾರಿ ಪೊಲೀಸರು, ಸಾರಿಗೆ ಇಲಾಖೆಯು ಬಸ್ಸುಗಳು ಮತ್ತು ಸರಕು ಸಾಗಣೆದಾರರು ಮಾತ್ರ ಬಳಸಲು ಮೀಸಲಿಡುವ ಮಾರ್ಗಗಳು ಬೆಳಗ್ಗೆ 8 ರಿಂದ ರಾತ್ರಿ 10 ರ ತನಕ ಜಾರಿಯಲ್ಲಿರುತ್ತದೆ ಎಂದು ಸಾರಿಗೆ ಇಲಾಖೆ ಹೇಳಿದೆ. ಉಳಿದ ಸಮಯದಲ್ಲಿ ಈ ಪಥದಲ್ಲಿ ಇತರ ವಾಹನಗಳು ಸಂಚಾರ ನಡೆಸಬಹುದಾಗಿದೆ.

ಬಸ್ ಮತ್ತು ಸರಕು ಸಾಗಣೆ ವಾಹನಗಳು ತಮಗೆ ಮೀಸಲಿಟ್ಟ ಮಾರ್ಗಗಳಲ್ಲಿ ಮಾತ್ರ ಸಂಚಾರ ನಡೆಸಬೇಕು. ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸಂಚಾರಿ ಪೊಲೀಸರು ಸಹ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ಸಹ ನೀಡಲಾಗಿದೆ.
ಮೊದಲ ಹಂತದಲ್ಲಿ ಈ ನಿಯಮಗಳನ್ನು ನಗರದ ಆಯ್ದ 46 ಕಾರಿಡಾರ್ಗಳಲ್ಲಿ 15 ಕಾರಿಡಾರ್ಗಳಲ್ಲಿ ಜಾರಿಗೊಳಿಸಲಾಗುತ್ತಿದೆ. ಈ ಕಾರಿಡಾರ್ಗಳಲ್ಲಿ ನಿಯಮಗಳು ಹೇಗೆ ಜಾರಿಯಾಗಲಿವೆ? ಎಂಬುದನ್ನು ತಿಳಿದು ಮುಂದಿನ ಹಂತಕ್ಕೆ ಮುಂದುವರೆಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಅನುವ್ರತ್ ಮಾರ್ಗ ಟಿ-ಪಾಯಿಂಟ್, ಮೆಹ್ರೌಲಿ-ಬಾದರ್ಪುರ್ ರಸ್ತೆ, ಆಶ್ರಮ ಚೌಕ್ನಿಂದ ಬಾದರ್ಪುರ ಬಾರ್ಡರ್, ಜನಕ್ಪುರಿಯಿಂದ ಮಧುಬನ್ ಚೌಕ್, ಮೋತಿ ನಗರದಿಂದ ದ್ವಾರಕಾ ಮೋರ್, ಬ್ರಿಟಾನಿಯಾ ಚೌಕ್ನಿಂದ ಧೌಲಾ ಕ್ವಾನ್ ಸೇರಿದಂತೆ 15 ಮಾರ್ಗದಲ್ಲಿ ಈ ವ್ಯವಸ್ಥೆ ಜಾರಿಗೆ ಬರಲಿದೆ.
ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಈ ಕುರಿತು ಟ್ವೀಟ್ ಮಾಡಿದ್ದು, 'ದೆಹಲಿ ಸರ್ಕಾರವು ರಸ್ತೆಗಳಲ್ಲಿ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿದೆ. ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಬಸ್ ಪಥ ನಿಯಮ ಜಾರಿಗೊಳಿಸಲಾಗುತ್ತಿದೆ" ಎಂದು ಟ್ವೀಟ್ ಮಾಡಿದ್ದಾರೆ.
ಸಂಚಾರ ದಟ್ಟಣೆ ಸವಾಲು; ರಾಜಧಾನಿ ದೆಹಲಿ ಹಳೆಯ ನಗರವಾಗಿರುವುದರಿಂದ ಹಲವು ಸವಾಲುಗಳಿವೆ. ಅವುಗಳಲ್ಲಿ ಸಂಚಾರ ದಟ್ಟಣೆ ಸಹ ಸೇರಿದೆ. ಮೆಟ್ರೋ ಸೇರಿದಂತೆ ಅನೇಕ ಆಧುನಿಕ ತಂತ್ರಜ್ಞಾನದ ಮೂಲಕ ನಗರದ ಸಂಚಾರ ದಟ್ಟಣೆ ಕಡಿಮೆ ಮಾಡುವ ಪ್ರಯತ್ನ ನಡೆದಿದೆ.
Recommended Video
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications