Breaking: ದೆಹಲಿ ಕೆಂಪುಕೋಟೆ ಮೇಲೆ ಸಿಖ್ ಧ್ವಜ ಹಾರಿಸಿದ ದೀಪ್ ಸಿಧು ಬಂಧನ

ನವದೆಹಲಿ, ಫೆಬ್ರವರಿ.09: ನವದೆಹಲಿಯಲ್ಲಿ 72ನೇ ಗಣರಾಜ್ಯೋತ್ಸವದ ದಿನ ಕೆಂಪುಕೋಟೆ ಮೇಲೆ ಸಿಖ್ ಧ್ವಜ ಹಾರಿಸಿದ ಪ್ರಮುಖ ಆರೋಪಿ ದೀಪ್ ಸಿಧು ಅನ್ನು ದೆಹಲಿ ಪೊಲೀಸರ ವಿಶೇಷ ತಂಡವು ಮಂಗಳವಾರ ಬಂಧಿಸುವಲ್ಲಿ ಯಶಸ್ವಿಯಾಗಿದೆ.

Recommended Video

      ಸಿಖ್ ಧ್ವಜ ಹಾರಿಸಿದ ಸಿಧು ಬಂಧನ! | Oneindia Kannada

      ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಿತ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸಿದ ಟ್ರ್ಯಾಕ್ಟರ್ ಜಾಥಾ ಹಿಂಸಾಚಾರಕ್ಕೆ ತಿರುಗಿತ್ತು. ಕೈಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಒಂದು ಗುಂಪು ಓಡಾಡುತ್ತಿದ್ದರೆ, ಮತ್ತೊಂದು ತಂಡವು ಕೆಂಪುಕೋಟೆಗೆ ನುಗ್ಗಿ, ತ್ರಿವರ್ಣ ಧ್ವಜ ಎದುರಿನಲ್ಲಿ ಸಿಖ್ ಧ್ವಜವನ್ನು ಹಾರಿಸಿತ್ತು.

      ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇತ್ತೀಚಿಗಷ್ಟೇ ದೆಹಲಿ ಪೊಲೀಸರು 12 ಮಂದಿ ಪ್ರಮುಖ ಆರೋಪಿಗಳ ಭಾವಚಿತ್ರವನ್ನು ಬಿಡುಗಡೆಗೊಳಿಸಿದ್ದರು. ದೀಪ್ ಸಿಧು ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಲಾಗಿತ್ತು.

      Deep Sidhu, An Accused In Republic Day Violence Case Arrested: Delhi Police Special Cell

      ರೋಪಿಗಳ ಬಗ್ಗೆ ಮಾಹಿತಿ ನೀಡಿದರೆ ಬಹುಮಾನ:

      ದೆಹಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ಪ್ರಮುಖ ಪಾತ್ರ ವಹಿಸಿದ ಆರೋಪಿಗಳ ಬಗ್ಗೆ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿಕೊಂಡಿದ್ದರು. ಅಲ್ಲದೇ ಪ್ರಮುಖ ಆರೋಪಿಗಳಾದ ಜಜ್ಬೀರ್ ಸಿಂಗ್, ಬುಟಾ ಸಿಂಗ್, ಸುಖ್ ದೇವ್ ಸಿಂಗ್, ಇಕ್ಬಾಲ್ ಸಿಂಗ್ ಬಗ್ಗೆ ಮಾಹಿತಿ ನೀಡಿದರೆ 50,000 ರೂಪಾಯಿ ನಗದು ಬಹುಮಾನ ನೀಡುವುದಾಗಿ ಘೋಷಿಸಲಾಗಿತ್ತು.

      ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ಕಳೆದ ನವಂಬರ್.26 ರಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ನವದೆಹಲಿಯ ಮೂರು ಗಡಿಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಈಗಾಗಲೇ 77 ದಿನಗಳಿಂದಲೂ ರೈತರು ಹೋರಾಟ ನಡೆಸುತ್ತಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+