ಜಾಮೀನು ಸಿಕ್ಕ ಕೆಲವೇ ಗಂಟೆಗಳ ನಂತರ ಮತ್ತೆ ದೀಪ್ ಸಿಧು ಬಂಧನ
ನವದೆಹಲಿ, ಏಪ್ರಿಲ್ 17: ಗಣರಾಜ್ಯೋತ್ಸವದ ದಿನ ದೆಹಲಿಯಲ್ಲಿ ರೈತರ ಟ್ರ್ಯಾಕ್ಟರ್ ಜಾಥಾ ವೇಳೆ ನಡೆದ ಗಲಭೆ ಪ್ರಕರಣದ ಆರೋಪಿ ನಟ ದೀಪ್ ಸಿಧುಗೆ ಜಾಮೀನು ದೊರೆತ ಕೆಲವೇ ಗಂಟೆಗಳಲ್ಲಿ ದೆಹಲಿ ಅಪರಾಧ ದಳದ ಪೊಲೀಸರು ಶನಿವಾರ ಮತ್ತೆ ಬಂಧಿಸಿದ್ದಾರೆ.
ಶನಿವಾರ ಬೆಳಿಗ್ಗೆ ದೆಹಲಿ ನ್ಯಾಯಾಲಯ ದೀಪ್ ಸಿಧುಗೆ ಜಾಮೀನು ನೀಡಿತ್ತು. ಜನವರಿ 26ರಂದು ಕೆಂಪುಕೋಟೆಯಲ್ಲಿ ನಡೆದ ಗಲಭೆ ಸಂಬಂಧ ದೀಪ್ ಸಿಧು ಅವರನ್ನು ಪ್ರಮುಖ ಆರೋಪಿ ಎಂದು ಗುರುತಿಸಲಾಗಿತ್ತು. ಆದರೆ ಕೆಂಪುಕೋಟೆಗೆ ತೆರಳುವಂತೆ ಪ್ರತಿಭಟನಾ ನಿರತ ರೈತರಿಗೆ ತಾವು ಯಾವುದೇ ಕರೆ ನೀಡಿರಲಿಲ್ಲ ಎಂದು ಕಳೆದ ವಿಚಾರಣೆ ವೇಳೆ ದೀಪ್ ಸಿಧು ನ್ಯಾಯಾಲಯಕ್ಕೆ ಹೇಳಿಕೆ ನೀಡಿದ್ದರು. ತಾವು ಯಾವುದೇ ರೈತ ಸಂಘಟನೆಯ ಸದಸ್ಯರಲ್ಲ ಎಂದು ಹೇಳಿದ್ದರು.
ಶನಿವಾರ ಬೆಳಿಗ್ಗೆ ಜಾಮೀನು ದೊರೆತಿದ್ದು, ಭಾರತೀಯ ಪುರಾತತ್ವ ಇಲಾಖೆ ದಾಖಲಿಸಿದ್ದ ಪ್ರಕರಣದ ಆಧಾರದಲ್ಲಿ ದೀಪ್ ಸಿಧು ಅವರನ್ನು ಮತ್ತೆ ಬಂಧಿಸಲಾಗಿದೆ.

ದೆಹಲಿಯ ಕೆಂಪು ಕೋಟೆಯ ಉಸ್ತುವಾರಿಯನ್ನು ಭಾರತೀಯ ಪುರಾತತ್ವ ಇಲಾಖೆ ವಹಿಸಿಕೊಂಡಿದ್ದು, ಗಣರಾಜ್ಯೋತ್ಸವದಂದು ನಡೆದ ಗಲಭೆಯಲ್ಲಿ ಕೆಂಪುಕೋಟೆಗೆ ಹಾನಿಯಾಗಿದೆ. ಕೆಂಪು ಕೋಟೆ ಗೋಡೆಗಳು ಹಾಗೂ ಅದರಲ್ಲಿನ ಕಚೇರಿಗಳಿಗೆ ಹಾನಿಯಾಗಿದೆ ಎಂದು ಪ್ರತ್ಯೇಕ ಪ್ರಕರಣ ದಾಖಲಿಸಿತ್ತು.
ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ದೆಹಲಿ ಗಡಿಗಳಲ್ಲಿ ನವೆಂಬರ್ 26ರಿಂದಲೂ ರೈತರು ಪ್ರತಿಭಟನೆ ನಡೆಸುತ್ತಿದ್ದರು. ದೀಪ್ ಸಿಧು ರೈತರನ್ನು ಪ್ರಚೋದಿಸಿ ಕೆಂಪು ಕೋಟೆಗೆ ತೆರಳಲು ಪ್ರಚೋದನೆ ನೀಡಿದ್ದರು ಎಂಬ ಆರೋಪ ಕೇಳಿಬಂದಿತ್ತು.
'ನಾನು ವಿಡಿಯೋವನ್ನು ಪೋಸ್ಟ್ ಮಾಡಿದ್ದೆ ಅಷ್ಟೇ, ಅದು ನನ್ನ ತಪ್ಪು. ಎಲ್ಲ ತಪ್ಪುಗಳೂ ಅಪರಾಧವಲ್ಲ. ನಾನು ವಿಡಿಯೋ ಹಂಚಿಕೊಂಡಿದ್ದೇನೆ ಎಂಬ ಕಾರಣಕ್ಕಾಗಿಯೇ ಮಾಧ್ಯಮಗಳು ನನ್ನನ್ನು ಮುಖ್ಯ ಆರೋಪಿ ಎಂದು ಬಿಂಬಿಸಿವೆ. ಮುಖ್ಯ ಸಂಚುಕೋರ ಎಂದು ನನ್ನನ್ನು ತೋರಿಸಿವೆ. ಇದು ಯಾಕೆಂದು ನನಗೆ ಗೊತ್ತಿಲ್ಲ' ಎಂದು ಜಾಮೀನು ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಅವರು ಹೇಳಿದ್ದರು.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications