ಕೇಜ್ರಿ ಮೇಲೆ ಜೇಟ್ಲಿ 10 ಕೋಟಿಗೆ ಮತ್ತೊಂದು ಮಾನನಷ್ಟ ಮೊಕದ್ದಮೆ
ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಹತ್ತು ಕೋಟಿ ರುಪಾಯಿಗೆ ಮತ್ತೊಂದು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಏನಿದು ಪ್ರಕರಣ ಎಂಬುದನ್ನು ತಿಳಿಯಲು ಈ ವರದಿ ಓದಿ
ನವದೆಹಲಿ, ಮೇ 22 : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಗ್ರಹಚಾರವೇ ನೆಟ್ಟಗಿಲ್ಲವೇನೋ ಎನಿಸುವಂಥ ಘಟನೆಗಳು ನಡೆಯುತ್ತಲೇ ಇವೆ. ಒಂದು ಕಡೆ ಆಪ್ ನಿಂದ ಅಮಾನತಾಗಿರುವ ಕಪಿಲ್ ಮಿಶ್ರಾ ದಿನಕ್ಕೊಂದು ಆರೋಪ ಮಾಡಿ ಕೇಜ್ರಿವಾಲ್ ನಿದ್ದೆ ಕೆಡಿಸಿದರೆ, ಕೇಂದ್ರ ಸಚಿವ ಅರುಣ್ ಜೇಟ್ಲಿ ಇದೀಗ ಹತ್ತು ಕೋಟಿ ರುಪಾಯಿಗೆ ಮತ್ತೊಂದು ಮಾನನಷ್ಟ್ ಮೊಕದ್ದಮೆ ಹಾಕಿದ್ದಾರೆ.
ಇದಕ್ಕೂ ಮುಂಚೆ ಜೇಟ್ಲಿ ಹಾಕಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಕೇಜ್ರಿವಾಲ್ ಪರವಾಗಿ ಖ್ಯಾತ ವಕೀಲ ರಾಮ್ ಜೇಠ್ಮಲಾನಿ ಬಡಿದಾಡುತ್ತಿದ್ದಾರೆ. ಅದೇನು ಸಿಟ್ಟಿತ್ತೋ ಜೇಠ್ಮಲಾನಿ ಅವರು ಜೇಟ್ಲಿಯನ್ನು ವಂಚಕ ಎಂದು ಕರೆದಿದ್ದಾರೆ. ಆ ಹೇಳಿಕೆ ಬೆನ್ನಿಗೆ ಮತ್ತೊಂದು ಮಾನನಷ್ಟ ಮೊಕದ್ದಮೆ ಹಾಕಿರುವ ಜೇಟ್ಲಿ, ಹತ್ತು ಕೋಟಿ ರುಪಾಯಿ ಪರಿಹಾರ ಕೇಳಿದ್ದಾರೆ.['ಕೇಜ್ರಿವಾಲ್ ಬಡ ಕಕ್ಷೀದಾರ ಅಂದುಕೊಂಡು ಪುಕ್ಕಟೆ ವಾದ ಮಾಡ್ತೀನಿ']

ಅರುಣ್ ಜೇಟ್ಲಿ ಪರವಾಗಿ ವಕೀಲ ಮಾಣಿಕ್ ದೋಗ್ರ ವಾದ ಮಂಡನೆ ಮಾಡುತ್ತಿದ್ದಾರೆ. ಕೇಜ್ರಿವಾಲ್ ನ ವಕೀಲ ರಾಮ್ ಜೇಠ್ಮಲಾನಿ ತಮ್ಮ ಕಕ್ಷೀದಾರರನ್ನು ವಂಚಕ ಎಂದು ಕೋರ್ಟ್ ನಲ್ಲಿ ಕರೆದು ಅವಮಾನಿಸಿದ್ದಾರೆ. ಆದ್ದರಿಂದ ಹತ್ತು ಕೋಟಿ ಪರಿಹಾರ ನೀಡಬೇಕು ಎಂದು ಮತ್ತೊಂದು ಕೇಸು ಜಡಿದಿದ್ದಾರೆ.[ಕೇಜ್ರಿವಾಲ್ ಕೇಸು ಬಡಿದಾಡಲು ದೆಹಲಿ ಸರಕಾರದ ಕಾಸು!]
ಹಳೆಯದೇ ಇನ್ನೂ ಫೈಸಲ್ ಆಗದೆ ಹೊಸದೊಂದು ಕಲ್ಲು ಬೇರೆ ಕೇಜ್ರಿವಾಲ್ ತಲೆ ಮೇಲೆ ಕೂತಂತಾಗಿದೆ.
{promotion-urls}
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications