ಸೇನೆ ಬಗ್ಗೆ ಅವಹೇಳನಕಾರಿ ಟ್ವೀಟ್: ರಕ್ಷಣಾ ಸಚಿವಾಲಯದ ವಕ್ತಾರನಿಗೆ ರಜೆ ಶಿಕ್ಷೆ
ನವದೆಹಲಿ, ಅಕ್ಟೋಬರ್ 26: ಸೇನೆಯ ಅಧಿಕಾರಿಗಳ ಕುರಿತು ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ ರಕ್ಷಣಾ ಸಚಿವಾಲಯದ ವಕ್ತಾರರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿದೆ.
ವಕ್ತಾರರನ್ನು ರಜೆ ಮೇಲೆ ಕಳುಹಿಸಿರುವುದರಿಂದ ಕರ್ನಲ್ ಅಮನ್ ಆನಂದ್ ಅವರು ಅಧಿಕೃತ ಹಂಗಾಮಿ ವಕ್ತಾರರಾಗಿ ಅಧಿಕಾರ ಸ್ವೀಕರಿಸಿದ್ದಾರೆ ಎಂದು ರಕ್ಷಣಾ ಸಚಿವಾಲಯದ ಟ್ವೀಟ್ ಖಾತೆ ತಿಳಿಸಿದೆ.
ನೌಕಾಪಡೆದ ಮಾಜಿ ಮುಖ್ಯಸ್ಥ ಅಡ್ಮಿರಲ್ ಅರುಣ್ ಪ್ರಕಾಶ್ ಅವರ ಕುರಿತು ವಿವಾದಾತ್ಮಕ ಟ್ವೀಟ್ ಮಾಡಿದ್ದಕ್ಕೆ ಈ ಕ್ರಮ ತೆಗೆದುಕೊಳ್ಳಲಾಗಿದೆ.

ಅರುಣ್ ಪ್ರಕಾಶ್ ಅವರು ಹರಿಯಾಣದ ಪಂಚಕುಳ ಜಿಲ್ಲೆಯಲ್ಲಿ ಪಶ್ಚಿಮ ಸೇನಾ ಕಮಾಂಡ್ನ ಆಂತರಿಕ ಹಣಕಾಸು ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರ ಕಾರ್ನ ಬಾನೆಟ್ ಮೇಲೆ ಸೇನೆಯ ಬಾವು ಇರುವುದಕ್ಕೆ ಟ್ವಿಟ್ಟರ್ನಲ್ಲಿ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದರು.
ಅಧಿಕಾರಿಯು ಈಗ ಸಾಮಾನ್ಯ ನಾಗರಿಕರಾಗಿದ್ದು, ವಾಹನದಲ್ಲಿ ಸೇನಾ ಧ್ವಜ ಬಳಸಬಾರದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.
Rather than getting excited over indiscreet tweet of @SpokespersonMoD I would suggest sober reflection; (a) by MoD on state of civil-mil relations & (b) by Military Leadership on the aspersions cast by MoD (IDAS?) civil-servant on personal conduct of Service officers. https://t.co/PwyMzzotK4
— Adm. Arun Prakash (@arunp2810) 26 October 2018
ಇದಕ್ಕೆ ಅರುಣ್ ಪ್ರಕಾಶ್, ನಾಗರಿಕರೊಬ್ಬರು ಸೇನಾ ಕಮಾಂಡ್ನ ಲಾಂಛನವನ್ನು ದುರ್ಬಳಕೆ ಮಾಡಿಕೊಂಡರೂ ಅದು ಅಪರಾಧವಲ್ಲ. ಆ ವ್ಯಕ್ತಿಗೆ ವಾಗ್ದಂಡನೆ ವಿಧಿಸಬಹುದು ಎಂದು ಪ್ರತಿಕ್ರಿಯೆ ನೀಡಿದ್ದರು.

ಇದಕ್ಕೆ ರಕ್ಷಣಾ ಸಚಿವಾಲಯದ ಅಧಿಕೃತ ಖಾತೆ ಬಳಸಿ ಪ್ರತಿಕ್ರಿಯೆ ನೀಡಿದ್ದ ವಕ್ತಾರ, 'ನಿಮ್ಮ ಅಧಿಕಾರದ ಅವಧಿಯಲ್ಲಿ ಮನೆಯಲ್ಲಿ ಸೈನಿಕರನ್ನು ದುರ್ಬಳಕೆ ಮಾಡಿಕೊಳ್ಳುವುದರ ಬಗ್ಗೆ ಏನು ಸರ್? ಮಕ್ಕಳನ್ನು ಸೇನೆಯ ವಾಹನದಲ್ಲಿ ಶಾಲೆಗೆ ಕರೆದೊಯ್ಯುವ ಮತ್ತು ಮರಳಿ ತರುವ ಬಗ್ಗೆ ಏನು? ಸರ್ಕಾರಿ ವಾಹನಗಳಲ್ಲಿ ಮೇಡಂ (ಅಧಿಕಾರಿಯ ಪತ್ನಿ) ಅವರ ಶಾಪಿಂಗ್ ವೆಚ್ಚವಾಗುವುದನ್ನು ಮರೆಯುವಂತಿಲ್ಲ. ಮತ್ತು ಲೆಕ್ಕವಿಲ್ಲದಷ್ಟು ಪಾರ್ಟಿಗಳು... ಅವುಗಳಿಗೆ ಯಾರು ಹಣ ನೀಡುತ್ತಾರೆ?' ಎಂದು ಬರೆದಿದ್ದರು.
ಈ ಟ್ವೀಟ್, ಸೇನೆಯ ಅನೇಕ ನಿವೃತ್ತ ಯೋಧರ ಆಕ್ರೋಶ, ಪ್ರತಿಭಟನೆಗೆ ಕಾರಣವಾಗಿತ್ತು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications