ಗೇಟ್ ತೆರೆಯಲು ವಿಳಂಬ: ಭದ್ರತಾ ಸಿಬ್ಬಂದಿಗೆ ಅಸಭ್ಯ ಸನ್ನೆ ಮಾಡಿ ನಿಂದಿಸಿದ ಮಹಿಳೆ
ನವದೆಹಲಿ ಆಗಸ್ಟ್ 22: ಇತ್ತೀಚೆಗೆ ವಸತಿ ಕಟ್ಟಡಗಳ ಭದ್ರತಾ ಸಿಬ್ಬಂದಿಗಳ ಮೇಲೆ ದೌರ್ಜನ್ಯ ಮತ್ತು ನಿಂದನೆಯಂತಹ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿವೆ. ದೆಹಲಿಯಲ್ಲಿ ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿದೆ. ದೆಹಲಿ ಸಮೀಪದ ಗೌತಮ್ ಬುದ್ಧ ನಗರದಲ್ಲಿ ಮಹಿಳೆಯೊಬ್ಬರನ್ನು ತಮ್ಮ ವಸತಿ ಕೊಠಡಿಗಳ ಭದ್ರತಾ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದ್ದರಿಂದ ಬಂಧಿಸಲಾಗಿದೆ.
ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಡಿದ ವಿಡಿಯೊದಲ್ಲಿ ಭವ್ಯಾ ರೈ ಎಂಬ ಮಹಿಳೆ ಭದ್ರತಾ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ಬೈಯುವುದು, ಅಸಭ್ಯ ಸನ್ನೆಗಳನ್ನು ಮಾಡುವುದು ಮತ್ತು ಸಿಬ್ಬಂದಿಗೆ ಬೆದರಿಕೆ ಹಾಕುವುದನ್ನು ಕಾಣಬಹುದು. ವಿಡಿಯೋ ವೈರಲ್ ಆದ ಬಳಿಕ ಆಕೆಯ ವಿರುದ್ಧ ಕ್ರಮಕ್ಕೆ ಒತ್ತಡ ಹೆಚ್ಚಾಗಿದ್ದು ಆಕೆಯನ್ನು ಬಂಧಿಸಲಾಗಿದೆ. ಆಕೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮಹಿಳೆ ನಿನ್ನೆ ಭಾನುವಾರ ನೋಯ್ಡಾದ ಸೆಕ್ಟರ್ 126 ರಲ್ಲಿ ಜೇಪೀ ವಿಶ್ಟೌನ್ ಸೊಸೈಟಿಯಿಂದ ನಿರ್ಗಮಿಸಲು ಪ್ರಯತ್ನಿಸುತ್ತಿದ್ದಾಗ, ಗೇಟ್ ತೆರೆಯಲು ವಿಳಂಬವಾಯಿತು. "ಗೇಟ್ ತೆರೆಯಲು ಸ್ವಲ್ಪ ಸಮಯ ಹಿಡಿಯಿತು ಮತ್ತು ಮೇಡಂ ಕಾಯುತ್ತಿದ್ದರು. ಬೇರೇನೂ ಇರಲಿಲ್ಲ. ಹಾಗಾಗಿ ಅವರು ಕಿರುಚಲು ಮತ್ತು ನಿಂದನೆಗಳನ್ನು ಪ್ರಾರಂಭಿಸಿದರು," ಎಂದು ಭದ್ರತಾ ಸಿಬ್ಬಂದಿ ಕರಣ್ ಚೌಧರಿ ಸುದ್ದಿಗಾರರಿಗೆ ತಿಳಿಸಿದರು.
बदतमीजी और गुंडागर्दी का अंत कुछ ऐसे हुआ... pic.twitter.com/fPoqkOiXVk
— Swati Maliwal (@SwatiJaiHind) August 21, 2022
ಮಹಿಳೆ ಪಾನಮತ್ತಳಾಗಿದ್ದಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆಕೆಗೆ ಇನ್ನೂ ಪರೀಕ್ಷೆ ನಡೆಯಬೇಕಿದೆ. "ಭವ್ಯ ರೈ ಎಂಬ ಮಹಿಳೆಯು ವಸತಿ ಕೊಠಡಿಯ ಭದ್ರತಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸುವ ವಿಡಿಯೊದಲ್ಲಿ ಸಿಕ್ಕಿಬಿದ್ದಿದ್ದಾಳೆ" ಎಂದು ಪೊಲೀಸ್ ಹಿರಿಯ ಅಧಿಕಾರಿ ಭಾರ್ತಿ ಸಿಂಗ್ ಹೇಳಿದ್ದಾರೆ. "ಸೆಕ್ಯುರಿಟಿ ಗಾರ್ಡ್ನ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆಕೆಯ ವಾಹನವನ್ನು ಪೊಲೀಸ್ ಠಾಣೆಗೆ ತರಲಾಗಿದೆ ಮತ್ತು ಆಕೆಯನ್ನು ಬಂಧಿಸಲಾಗಿದೆ" ಎಂದು ಅವರು ಹೇಳಿದರು.

ಭಾರತೀಯ ದಂಡ ಸಂಹಿತೆ 153ಎ (ಸಾಮರಸ್ಯಕ್ಕೆ ಧಕ್ಕೆ ತರುವಂತಹ ಕೃತ್ಯಗಳು), 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು), 504 (ಸಾರ್ವಜನಿಕ ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶಪೂರ್ವಕ ಅವಮಾನ), 506 (ಅಪರಾಧ ಬೆದರಿಕೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
Recommended Video
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications