ಮಗು ಮೇಲೆ ಅತ್ಯಾಚಾರ ಮಾಡಿದ ಕೇರ್ ಟೇಕರ್ ಬಂಧನ
ದೆಹಲಿ, ನವೆಂಬರ್ 14 ; ಮಕ್ಕಳ ದಿನದಂದೇ ದೆಹಲಿಯಲ್ಲಿ ಮಗುವಿನ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಮಕ್ಕಳನ್ನು ನೋಡಿಕೊಳ್ಳಲು ಪೋಷಕರು ನೇಮಿಸಿದ್ದ ಮಕ್ಕಳ ಪಾಲಕನೇ ಮಗುವಿನ ಮೇಲೆ ಅತ್ಯಾಚಾರ ನಡೆಸಿದ್ದಾನೆ.
ಈ ಹೇಯ ಘಟನೆಯು ದಕ್ಷಿಣ ದೆಹಲಿಯ ಶಾಹಪುರ್ ಘಾಟ್ ಎಂಬಲ್ಲಿ ಸೋಮವಾರ (ನವೆಂಬರ್ 13) ರಾತ್ರಿ ನಡೆದಿದೆ. ತಮ್ಮ ಒಂದೂವರೆ ವರ್ಷದ ಹೆಣ್ಣು ಮಗುವನ್ನು ನೋಡಿಕೊಳ್ಳಲೆಂದು ದಂಪತಿಗಳು ಖ್ಯಾತ ಸಂಸ್ಥೆಯಿಂದ ಕೇರ್ ಟೇಕರ್ ಒಬ್ಬನನ್ನು ನೇಮಿಸಿಕೊಂಡಿದ್ದರು. ಮಗಳ ರಕ್ಷಣೆಗೆಂದು ನೇಮಿಸಿಕೊಂಡವನೇ ಭಕ್ಷಕನಾಗಿ ಸಣ್ಣ ಮಗುವಿನ ಮೇಲೆ ಅತ್ಯಾಚಾರ ಮಾಡಿದ್ದಾನೆ.

ಗೊತ್ತಾದದ್ದು ಹೀಗೆ?
ಮಗುವಿನ ತಾಯಿ ಕೆಲಸ ಮುಗಿಸಿ ಮನೆಗೆ ಬಂದಾಗ ಮಗು ವಿಪರೀತ ಅಳುತಿತ್ತು. ತಾಯಿ ಸಮಾಧಾನ ಪಡಿಸಲು ನೋಡಿದಾಗ ಮಗುವಿನ ಗುಪ್ತಾಂಗದಿಂದ ರಕ್ತಸ್ರಾವವಾಗುತ್ತಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಕೇರ್ ಟೇಕರ್ ನನ್ನು ಪ್ರಶ್ನಿಸಿದಾಗ ತನಗೆ ಗೊತ್ತಿಲ್ಲವೆಂದು ಆತ ಹೇಳಿದ್ದಾನೆ. ಅನುಮಾನಗೊಂಡ ತಾಯಿ ಕೂಡಲೇ ಆಕೆ ಆತನನ್ನು ಕೋಣೆಯಲ್ಲಿ ಕೂಡಿ ಹಾಕಿ ಮಗುವನ್ನು ಆಸ್ಪತ್ರೆಗೆ ಸೇರಿಸಿದ್ದಾಳೆ. ಮಗುವಿನ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ಹೇಳಿದ್ದಾರೆ.
ವಿಷಯ ತಿಳಿದೊಡನೆ ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಆರೋಪಿ ವಿರುದ್ಧ ಹಾಜ್ ಖಾಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಂಪತಿಗಳಿಬ್ಬರೂ ಕೆಲಸಕ್ಕೆ ಹೋಗುವವರಾದರೆ ಮಕ್ಕಳನ್ನು ನೋಡಿಕೊಳ್ಳಲು ಕೇರ್ ಟೇಕರ್ ಗಳನ್ನು ನೇಮಿಸಿಕೊಳ್ಳುವ ಪದ್ಧತಿ ಕೆಲ ವರ್ಷದಿಂದ ಪ್ರಚಲಿತದಲ್ಲಿದೆ. ಮಕ್ಕಳ ಆಹಾರ, ಉಡುಪುಗಳನ್ನು ನೋಡಿಕೊಳ್ಳುವ ಜೊತೆಗೆ ಅವರನ್ನು ಆಟ ಆಡಿಸುವ ಕೆಲಸಗಳನ್ನು ಈ ಕೇರ್ ಟೇಕರ್ ಗಳು ಮಾಡುತ್ತಾರೆ. ಆದರೆ ದೆಹಲಿಯಲ್ಲಿ ಈಗ ನಡೆದಿರುವ ಘಟನೆ ದೇಶದೆಲ್ಲೆಡೆ ಕೇರ್ ಟೇಕರ್ ಗಳನ್ನು ಪೋಷಕರು ಅನುಮಾನದಿಂದ ನೋಡುವಂತೆ ಮಾಡಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications