ವಾಯು ಮಾಲಿನ್ಯಕ್ಕೆ ತತ್ತರಿಸಿದ ದೆಹಲಿ, ಭಾನುವಾರದವರೆಗೆ ಶಾಲೆಗಳು ಬಂದ್
ನವದೆಹಲಿ, ನವೆಂಬರ್ 8: ರಾಷ್ಟ್ರ ರಾಜಧಾನಿಯ ಮಾಲಿನ್ಯ ಮತ್ತಷ್ಟು ಹದಗೆಟ್ಟಿದೆ. ಜನರಿಗೆ ಉಸಿರಾಟದ ಸಮಸ್ಯೆ ಮತ್ತು ಕಣ್ಣು ಉರಿ ಕಾಣಿಸಿಕೊಂಡಿದ್ದು ಮತ್ತಷ್ಟು ನಿರ್ಬಂಧ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಇಂದು ದೆಹಲಿಯ ಎಲ್ಲಾ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಹೀಗಿದ್ದೂ ವಾಯು ಮಾಲಿನ್ಯ ಕಡಿಮೆಯಾಗುವ ಬದಲು ಮತ್ತಷ್ಟು ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಎಲ್ಲಾ ಶಾಲೆಗಳಿಗೆ ಭಾನುವಾರದವರೆಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಹೇಳಿದ್ದಾರೆ.

ಗ್ಯಾಸ್ ಚೇಂಬರ್
ದೆಹಲಿಯಲ್ಲಿ ಮಾರಣಾಂತಿಕ ಮಂಜು ಆವರಿಸಿದ್ದು ತೀರಾ ಕೆಳ ಮಟ್ಟದಲ್ಲಿ ನೆಲೆ ನಿಂತಿದೆ. ಈ ಹಿನ್ನಲೆಯಲ್ಲಿ ರಾಜಧಾನಿ ಗ್ಯಾಸ್ ಚೇಂಬರ್ ಆಗಿದೆ ಎಂದು ಮನೀಷ್ ಸಿಸೋಡಿಯಾ ಆತಂಕ ವ್ಯಕ್ತಪಡಿಸಿದ್ದಾರೆ. ಜತೆಗೆ ಸಮ ಬೆಸ ಯೋಜನೆ ಮತ್ತೆ ಜಾರಿಗೆ ತರುವ ಬಗ್ಗೆಯೂ ಚಿಂತಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಆರೋಗ್ಯ ಸಮಸ್ಯೆ
ವಾಯು ಮಾಲಿನ್ಯ ಸಮಸ್ಯೆ ಕಾಣಿಸಿಕೊಂಡ ನಂತರ ಬುಧವಾರ ಎರಡನೇ ದಿನವೂ ಜನರು ತೀವ್ರ ಕಿರಿಕಿರಿ ಅನುಭವಿಸುತ್ತಿದ್ದಾರೆ. ಜನರಿಗೆ ಕಣ್ಣು ಉರಿ ಕಾಣಿಸಿಕೊಂಡಿದೆ ಜತೆಗೆ ಮೂಗು ಮತ್ತು ಗಂಟಲಿನಲ್ಲಿ ಜನರು ಕಿರಿಕಿರಿ ಅನುಭವಿಸುತ್ತಿದ್ದಾರೆ.

ಮೇರೆ ಮೀರಿದ ಮಾಲಿನ್ಯ
ಗಾಳಿಯ ಗುಣಮಟ್ಟವನ್ನು ಅಳೆಯುವ ವಾಯು ಗುಣಮಟ್ಟದ ಸೂಚ್ಯಂಕ ಸದ್ಯ ದೆಹಲಿಯ ಸದ್ಯ 448ನ್ನು ಮುಟ್ಟಿದೆ. ಈ ಮಾಪಕದಲ್ಲಿ 100 ಕ್ಕಿಂತ ಹೆಚ್ಚು ಅಂಕಿ ತೋರಿಸಿದರೆ ಅದನ್ನು ಆರೋಗ್ಯಕ್ಕೆ ಹಾನಿಕರ ಎನ್ನಲಾಗುತ್ತದೆ. ಹೀಗಿರುವಾಗ ಸದ್ಯ ದೆಹಲಿಯ ವಾಯ ಮಾಲಿನ್ಯದ ಮಟ್ಟ 448ನ್ನು ತಲುಪಿದೆ.

ಸಾರ್ವಜನಿಕ ಆರೋಗ್ಯದ ತುರ್ತು ಪರಿಸ್ಥಿತಿ
ದಟ್ಟವಾದ ಕಂದು ಬಣ್ಣದ ಮಂಜು ದೆಹಲಿಯನ್ನು ಆವರಿಸಿಕೊಂಡಿದ್ದು ಉಡಿರಾಡುವುದೇ ದುಸ್ತರವಾಗಿದೆ. ಈ ಹಿನ್ನಲೆಯಲ್ಲಿ ಉನ್ನತ ವೈದ್ಯಕೀಯ ಸಂಸ್ಥೆ ಐಎಂಎ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿದೆ. ಜತೆಗೆ ಸುಪ್ರಿಂ ಕೋರ್ಟ್ ನೇಮಿಸಿದ ಸಮಿತಿ ಪಾರ್ಕಿಂಗ್ ಶುಲ್ಕಗಳನ್ನು ನಾಲ್ಕು ಪಟ್ಟು ಏರಿಸಲು, ಮೆಟ್ರೋ ರೈಲಿನ ಪ್ರಯಾಣ ದರಗಳನ್ನು ಇಳಿಸಲು ಶಿಫಾರಸ್ಸು ಮಾಡಿದೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications