ಹೊಟ್ಟೆಯೊಳಗೆ ಹತ್ತು ಕೋಟಿ ಮಾಲು ಹೊತ್ತಿದ್ದ ವ್ಯಕ್ತಿ ದೆಹಲಿಯಲ್ಲಿ ಬಂಧನ
ನವದೆಹಲಿ, ಜನವರಿ 13: ಹೊಟ್ಟೆಯೊಳಗೆ ಬರೋಬ್ಬರಿ ಹತ್ತು ಕೋಟಿ ಮೌಲ್ಯದ ಮಾದಕ ದ್ರವ್ಯವನ್ನು ಸಾಗಿಸುತ್ತಿದ್ದ ಗುಂಪನ್ನು ದೆಹಲಿ ವಿಮಾನ ನಿಲ್ದಾಣ ಅಧಿಕಾರಿಗಳು ಬಂಧಿಸಿದ್ದಾರೆ.
ಏಳು ಮಂದಿ ಅಫ್ಗಾನಿಸ್ತಾನ ಯುವಕರು ಹೆರಾಯಿನ್ ತುಂಬಿದ ಮಾತ್ರೆಗಳನ್ನು ಹೊಟ್ಟೆಯಲ್ಲಿಟ್ಟುಕೊಂಡು ಭಾರತಕ್ಕೆ ಬಂದಿದ್ದರು. ಅನುಮಾನದ ಮೇಲೆ ವಿಚಾರಣೆ ನಡೆಸಿದ ವಿಮಾನ ನಿಲ್ದಾಣ ಸಿಬ್ಬಂದಿ ಬಂಧಿಸಿದ್ದಾರೆ.
ಹತ್ತು ದಿನದ ಹಿಂದೆ ಈ ಗುಂಪು ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿತ್ತು. ಇವರಲ್ಲಿ ಕೆಲವರು ಹೆರಾಯಿನ್ ತುಂಬಿದ ಮಾತ್ರೆಗಳನ್ನು ನುಂಗಿದ್ದರು. ಅವರ ಹೊಟ್ಟೆಯಲ್ಲಿದ್ದ ಹೆರಾಯಿನ್ ಮಾದಕ ದ್ರವ್ಯದ ಮಾರುಕಟ್ಟೆ ಮೌಲ್ಯ ಬರೋಬ್ಬರಿ ಹತ್ತು ಕೋಟಿ ರೂಪಾಯಿ.

ಏಳು ಮಂದಿಯ ಹೊಟ್ಟೆಯೊಳಗಿನಿಂದ 177 ಹೆರಾಯಿನ್ ತುಂಬಿದ ಮಾತ್ರೆಗಳನ್ನು ಹೊರಕ್ಕೆ ತೆಗೆಯಲಾಗಿದೆ. ಈ ಮಾತ್ರೆಗಳನ್ನು ಹೊರಕ್ಕೆ ತೆಗೆಯಲು ವಿಮಾನ ನಿಲ್ದಾಣ ಸಿಬ್ಬಂದಿ 10 ಡಜನ್ ಬಾಳೆಹಣ್ಣು ಖರ್ಚು ಮಾಡಿದ್ದಾರಂತೆ.
ಈ ಏಳು ಯುವಕರು ಅಫ್ಗಾನಿಸ್ತಾನದಿಂದ ದೆಹಲಿಗೆ ಬರುವ ಹಾದಿಯಲ್ಲಿ ಏನೂ ತಿನ್ನದೆ, ಕುಡಿಯದೇ ಬಂದಿದ್ದಾರೆ. ವಿಮಾನ ನಿಲ್ದಾಣದಲ್ಲಿ ಸಹ ಅನುಮಾನಾಸ್ಪದವಾಗಿ ನಡೆದುಕೊಂಡಿದ್ದಾರೆ ಹಾಗಾಗಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ನಂತರ ಸ್ಕ್ಯಾನಿಂಗ್ ಮಾಡಿಸಿದಾಗ ನಿಜ ಸಂಗತಿ ಗೊತ್ತಾಗಿದೆ.
ಈ ಏಳು ಮಂದಿಯನ್ನು ಕರೆದುಕೊಂಡು ಹೋಗಲು ಬಂದಿದ್ದ ಇಬ್ಬರನ್ನು ವಿಮಾನ ನಿಲ್ದಾಣ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ದೆಹಲಿಯ ಹೊಟೆಲ್ ಗೆ ತೆರಳಿ ಅಲ್ಲಿ ಕ್ಯಾಪ್ಸೂಲ್ ಅನ್ನು ಹೊರಕ್ಕೆ ತೆಗೆಯುವ ಯೋಜನೆ ರೂಪಿಸಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications