ದೆಹಲಿ ಅಸೆಂಬ್ಲಿ ಚುನಾವಣಾ ವೇಳಾಪಟ್ಟಿ ಘೋಷಣೆ
ನವದೆಹಲಿ, ಜ.12: ದೆಹಲಿ ವಿಧಾನಸಭಾ ಚುನಾವಣೆ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗದ ಅಧ್ಯಕ್ಷ ವಿಎಸ್ ಸಂಪತ್ ಅವರು ಸೋಮವಾರ ಸಂಜೆ ಪ್ರಕಟಿಸಿದ್ದಾರೆ. 70 ಅಸೆಂಬ್ಲಿ ಸೀಟುಗಳಿಗೆ ಫೆ.7ರಂದು ಮತದಾನ ನಡೆಯಲಿದೆ. ಫೆ.1೦ರಂದು ಫಲಿತಾಂಶ ಹೊರಬೀಳಲಿದೆ.
ದೆಹಲಿ ವಿಧಾನಸಭಾ ಚುನಾವಣೆ ಪ್ರಮುಖ ದಿನಾಂಕ:
ನಾಮಪತ್ರ ಸಲ್ಲಿಕೆ ಅರಂಭ: 14/01/2015
ನಾಮಪತ್ರ ಸಲ್ಲಿಸಲು ಕೊನೆ ದಿನಾಂಕ: 21/01/2015
ನಾಮಪತ್ರ ಹಿಂಪಡೆಯಲು ಕೊನೆ ದಿನಾಂಕ : 24/01/2015
ಮತದಾನ: 07/02/2015
ಮತ ಎಣಿಕೆ: 10/02/2015
ಮತದಾರರ ಸಂಖ್ಯೆ: 1.30 ಕೋಟಿ ಜನ.

ಆಯೋಗದ ಪ್ರಕಟಣೆ ಪ್ರಕಾರ ಪಶ್ಚಿಮ ದೆಹಲಿಯ ಮತಿಯಾಲಾ ಅಸೆಂಬ್ಲಿ ಕ್ಷೇತ್ರ ಹೆಚ್ಚು ಮತದಾರರನ್ನು(3,39,686) ಹೊಂದಿದ್ದರೆ, ಚಾಂದಿನಿ ಚೌಕ್ ಕ್ಷೇತ್ರ 1,12,739 ಕಡಿಮೆ ಮತದಾರರನ್ನು ಹೊಂದಿರುವ ಕ್ಷೇತ್ರವಾಗಿದೆ.
ದೆಹಲಿಯಲ್ಲಿ ಸುಮಾರು 2,527 ಮತಕೇಂದ್ರಗಳಿದ್ದು 11,763ಕ್ಕೂ ಅಧಿಕ ಮತಗಟ್ಟೆಗಳಿವೆ. ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಶೇ 65.6ರಷ್ಟು ಮತದಾನವಾಗಿತ್ತು. ಏಪ್ರಿಲ್ ನಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಶೇ 65.07ರಷ್ಟು ಮತದಾನ ದಾಖಲಾಗಿದೆ.
ಈ ಹಿಂದಿನ ಫಲಿತಾಂಶ: ಬಿಜೆಪಿ 31 ಸ್ಥಾನ ಗಳಿಸಿದ್ದರೂ ಸರ್ಕಾರ ರಚಿಸಲು ಆಸಕ್ತಿ ತೋರಲಿಲ್ಲ. ಕಾಂಗ್ರೆಸ್ ಕೇವಲ 8 ಸ್ಥಾನ ಗಳಿಸಿತ್ತು. ಆಮ್ ಆದ್ಮಿ ಪಕ್ಷ 28 ಸ್ಥಾನಗಳಿಸಿದ್ದರೂ ಅಲ್ಪ ಸಂಖ್ಯಾತ ಸರ್ಕಾರ ರಚಿಸಿತ್ತು. ಆರವಿಂದ್ ಕೇಜ್ರಿವಾಲ್ ಅವರು ದೆಹಲಿ ಮುಖ್ಯಮಂತ್ರಿಯಾಗಿ 49 ದಿನಗಳ ಕಾಲ ಆಡಳಿತ ನಡೆಸಿದ್ದರು.
ಜನ ಲೋಕಪಾಲ ಮಸೂದೆ ಮಂಡನೆಗೆ ವಿಪಕ್ಷಗಳು ಸಹಕಾರ ನೀಡುತ್ತಿಲ್ಲ ಎಂದು ಕಾರಣ ನೀಡಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ಅಸೆಂಬ್ಲಿ ವಿಸರ್ಜನೆಯಾಗಿತ್ತು. ಫೆಬ್ರವರಿ 2014ರಿಂದ ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಲ್ಲಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications