ದೆಹಲಿ ಚುನಾವಣೆ ಪ್ರಚಾರಕ್ಕೆ ತೆರೆ; ಶನಿವಾರ ಮತದಾನ
ನವದೆಹಲಿ, ಫೆಬ್ರವರಿ 07 : ದೆಹಲಿ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. 70 ವಿಧಾನಸಭಾ ಕ್ಷೇತ್ರಕ್ಕೆ ಫೆಬ್ರವರಿ 8ರ ಶನಿವಾರ ಮತದಾನ ನಡೆಯಲಿದ್ದು, ಫೆಬ್ರವರಿ 11ರಂದು ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ.
ದೇಶಾದ್ಯಂತ ದೆಹಲಿ ವಿಧಾನಸಭಾ ಕ್ಷೇತ್ರದ ಚುನಾವಣೆ ಕುತೂಹಲಕ್ಕೆ ಕಾರಣವಾಗಿದೆ. ವಿವಿಧ ರಾಜಕೀಯ ಪಕ್ಷಗಳ ಪ್ರಚಾರಗಳೂ ಸಹ ತಾರಕ್ಕೇರಿತ್ತು. ಅದರಲ್ಲೂ ಬಿಜೆಪಿ ಅಧಿಕಾರ ಹಿಡಿಯಬೇಕು ಎಂದು ಪಣತೊಟ್ಟು ಬಿರುಸಿನಿಂದ ಪ್ರಚಾರ ನಡೆಸಿತ್ತು.
ಗುರುವಾರ ಸಂಜೆ ಬಹಿರಂಗ ಚುನಾವಣಾ ಪ್ರಚಾರಕ್ಕೆ ತೆರೆ ಬಿದ್ದಿದೆ. ಅಭ್ಯರ್ಥಿಗಳು ಇಂದು ಮನೆ-ಮನೆ ಪ್ರಚಾರ ಕೈಗೊಂಡು ಅಂತಿಮ ಸುತ್ತಿನ ಮತಬೇಟೆಯನ್ನು ನಡೆಸಲಿದ್ದಾರೆ. ಶನಿವಾರ ಮತದಾನ ನಡೆಯಲಿದ್ದು, ಮಂಗಳವಾರ ಫಲಿತಾಂಶ ಪ್ರಕಟವಾಗಲಿದೆ.

ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಅಧಿಕಾರದಲ್ಲಿದೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಪುನಃ ಅಧಿಕಾರಕ್ಕೆ ಬರಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ. ಬಿಜೆಪಿ ಈ ಬಾರಿ ಅಧಿಕಾರ ಪಡೆಯಲೇಬೇಕು ಎಂದು ಪಣ ತೊಟ್ಟಿದೆ.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, 200ಕ್ಕೂ ಅಧಿಕ ಸಂಸದರು ಬಿಜೆಪಿ ಪರವಾಗಿ ದೆಹಲಿಯಲ್ಲಿ ಮತಯಾಚನೆ ಮಾಡಿದ್ದಾರೆ. ಎಎಪಿ ನಿಮ್ಮ ಮುಖ್ಯಮಂತ್ರಿ ಅಭ್ಯರ್ಥಿ ಯಾರು? ಎಂದು ಕೇಳಿ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು.
ಅರವಿಂದ್ ಕೇಜ್ರಿವಾಲ್ ಐದು ವರ್ಷಗಳ ಸಾಧನೆಯನ್ನು ಮುಂದಿಟ್ಟುಕೊಂಡು ಜನರ ಮುಂದೆ ಹೋಗಿದ್ದಾರೆ. ಮುಂದಿನ ಐದು ವರ್ಷಗಳ ಮಾಡುವ ಕೆಲಸಗಳ ಬಗ್ಗೆ ಜನರಿಗೆ ಹಲವಾರು ಭರವಸೆಗಳನ್ನು ಕೊಟ್ಟು, ಮತ ನೀಡುವಂತೆ ಮನವಿ ಮಾಡಿದ್ದಾರೆ.
ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ಸ್ವಲ್ಪ ಹಿಂದೆ ಬಿದ್ದಿತ್ತು. ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ ಕೆಲವು ದಿನ ಪ್ರಚಾರವನ್ನು ಕೈಗೊಂಡರು. ಬಿಜೆಪಿ ಮತ್ತು ಎಎಪಿ ಪ್ರಚಾರದ ಅಬ್ಬರಕ್ಕೆ ಹೋಲಿಕೆ ಮಾಡಿದರೆ ಕಾಂಗ್ರೆಸ್ ಹಿನ್ನಡೆ ಅನುಭವಿಸಿದೆ.
-
Dhurandhar-2: ಸಕ್ಸಸ್ ಅಲೆಯಲ್ಲಿ ಧುರಂಧರ್ 2: ಫ್ಯಾನ್ಸ್ ಕುರಿತು ಸಾರಾ ಅರ್ಜುನ್ ಪೋಸ್ಟ್ -
Gold Price Update: ಆಭರಣಪ್ರಿಯರೇ ಗಮನಿಸಿ, ಇಂದು ಚಿನ್ನದ ಬೆಲೆ ಏರಿಕೆ- ಬೆಳ್ಳಿ ಸ್ಥಿರ, ಮಾರುಕಟ್ಟೆ ದರ ವಿವರ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ












Click it and Unblock the Notifications