ದೆಹಲಿ ಚುನಾವಣೆ; ಅಚ್ಚರಿಗೆ ಕಾರಣವಾದ 'ನೋಟಾ' ಮತಗಳ ಸಂಖ್ಯೆ
ನವದೆಹಲಿ, ಫೆಬ್ರವರಿ 13: ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ. ಆಮ್ ಆದ್ಮಿ ಪಕ್ಷ ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಮತ್ತೆ ಅಧಿಕಾರಕ್ಕೆ ಬಂದಿದೆ. ವಿವಿಧ ರಾಜಕೀಯ ಪಕ್ಷಗಳು ಪಡೆದ ಮತಕ್ಕಿಂತ ಹೆಚ್ಚು ನೋಟಾ ಚಲಾವಣೆಯಾಗಿದೆ.
ದೆಹಲಿಯಲ್ಲಿ ವಿವಿಧ ಪಕ್ಷಗಳು ಪಡೆದ ಮತಗಳಿಕೆಯ ಪ್ರಮಾಣವನ್ನು ಗಮನಿಸಿದರೆ ನೋಟಾ 6ನೇ ಸ್ಥಾನದಲ್ಲಿ ನಿಲ್ಲುತ್ತದೆ. ಇದು ಸಿಪಿಐ, ಸಿಪಿಐ(ಎಂ), ಎಲ್ಜೆಪಿ ಮತ್ತು ಎನ್ಸಿಪಿ ಪಕ್ಷಗಳು ಪಡೆದ ಮತಗಳಿಗಿಂತ ಹೆಚ್ಚಾಗಿದೆ.
ವಿವಿಧ ಚುನಾವಣೆಗಳಲ್ಲಿ ಮತದಾರರು ' ನೋಟಾ' ಬಳಕೆ ಮಾಡಲು ಅವಕಾಶವನ್ನು ನೀಡಲಾಗಿದೆ. ಚುನಾವಣೆಯಲ್ಲಿ ಕಣಕ್ಕಿಳಿದಿರುವ ಯಾವ ಅಭ್ಯರ್ಥಿಯೂ ಅರ್ಹ ಎಂದು ಅನ್ನಿಸದಿದ್ದಲ್ಲಿ ಜನರು ನೋಟಾ ಬಟನ್ ಒತ್ತಬಹುದು.
ಶೇ 50ಕ್ಕಿಂತ ಹೆಚ್ಚು ನೋಟಾ ಮತಗಳು ಚಲಾವಣೆಯಾಗಿದ್ದರೂ ಅಭ್ಯರ್ಥಿಗಳು ಪಡೆದಿರುವ ಮತಗಳ ಆಧಾರದ ಮೇಲೆ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಮತ್ತೊಮ್ಮೆ ಮತದಾನವನ್ನು ನಡೆಸುವುದಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.

ಎಷ್ಟು ಮತಗಳ ಚಲಾವಣೆಯಾಗಿದೆ
ದೆಹಲಿ ಚುನಾವಣೆಯಲ್ಲಿ ಶೇ 0.46ರಷ್ಟು ನೋಟಾ ಮತಗಳು ಚಲಾವಣೆಗೊಂಡಿವೆ. ಒಟ್ಟು 70 ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 42,406 ಮತಗಳು ಚಲಾವಣೆಗೊಂಡಿವೆ. ಮತಗಳಿಕೆ ಪ್ರಮಾಣದಲ್ಲಿ ನೋಟಾ 6ನೇ ಸ್ಥಾನದಲ್ಲಿದೆ.

ಪಡೆದ ಮತಗಳ ವಿವರ
ಸಿಪಿಐ(ಎಂ) ಪಕ್ಷಕ್ಕೆ 1236, ಸಿಪಿಐ 1954 ಮತ, ಎಲ್ಜೆಪಿ 32760 ಮತ, ಆರ್ಜೆಡಿ 3452 ಮತಗಳನ್ನು ಚುನಾವಣೆಯಲ್ಲಿ ಪಡೆದಿವೆ. ಚುನಾವಣಾ ಕಣದಲ್ಲಿದ್ದ ಪಕ್ಷೇತರ ಅಭ್ಯರ್ಥಿಗಳು 35365 ಮತಗಳನ್ನು ಪಡೆದಿದ್ದಾರೆ.

ಎಎಪಿ ಪಡೆದ ಮತಗಳು
ದೆಹಲಿ ಚುನಾವಣೆಯಲ್ಲಿ 62 ಸ್ಥಾನಗಳಲ್ಲಿ ಜಯಗಳಿಸಿ ಅಧಿಕಾರವನ್ನು ಪಡೆದ ಆಮ್ ಆದ್ಮಿ ಪಕ್ಷ 48,98,816 ಮತಗಳನ್ನು ಪಡೆದಿದೆ. ಬಿಜೆಪಿ 35,20,339 ಮತಗಳು ಮತ್ತು ಕಾಂಗ್ರೆಸ್ 3,91,757 ಮತಗಳನ್ನು ಪಡೆದಿದೆ.

ವೋಟ್ ಶೇರ್ನಲ್ಲಿ ಎಎಪಿ ಮುಂದೆ
ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ 53.57ರಷ್ಟು ಮತಗಳನ್ನು ಪಡೆದು ಮತಗಳಿಕೆ ಪ್ರಮಾಣದಲ್ಲಿ ಮೊದಲ ಸ್ಥಾನದಲ್ಲಿದೆ. ಬಿಜೆಪಿ 38.51ರಷ್ಟು ಮತ, ಯಾವುದೇ ಸ್ಥಾನದಲ್ಲಿ ಜಯಗಳಿಸದಿದ್ದರೂ ಕಾಂಗ್ರೆಸ್ 4.26ರಷ್ಟು ಮತಗಳನ್ನು ಪಡೆದಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications