ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತ ಹೇರಲು ಸೂಚನೆ
ನವದೆಹಲಿ, ಡಿ. 16 : ಯಾವ ಪಕ್ಷವೂ ಸರಕಾರ ರಚಿಸಲು ಮುಂದೆ ಬರದಿರುವ ಕಾರಣ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರು ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕೆಂದು ಶಿಫಾರಸು ಮಾಡಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಈ ಕುರಿತಾಗಿ ಕೇಂದ್ರ ಗೃಹ ಸಚಿವಾಲಯಕ್ಕೆ ನಜೀಬ್ ಜಂಗ್ ಅವರು ಪತ್ರ ಬರೆದಿದ್ದಾರೆ.
70 ಸ್ಥಾನಗಳಿರುವ ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಸತತ ಮೂರು ಅವಧಿಗೆ ಸರಕಾರ ರಚಿಸಿದ್ದ ಶೀಲಾ ದೀಕ್ಷಿತ್ ಸರಕಾರ ಕೇವಲ 8 ಸ್ಥಾನ ಗಳಿಸಿ ಹೀನಾಯವಾಗಿ ಸೋತಿದ್ದರೆ, ಭಾರತೀಯ ಜನತಾ ಪಕ್ಷ 32 ಸ್ಥಾನಗಳನ್ನು ಗೆದ್ದು ಅಗ್ರ ಸ್ಥಾನದಲ್ಲಿತ್ತು. ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಆಮ್ ಆದ್ಮಿ ಪಕ್ಷ 28 ಸೀಟುಗಳನ್ನು ಗೆದ್ದು ಕಾಂಗ್ರೆಸ್ಸಿಗೆ ಮಣ್ಣು ಮುಕ್ಕಿಸಿತ್ತು.
ಯಾವುದೇ ಪಕ್ಷಕ್ಕೂ ಬಹುಮತ ಸಿಕ್ಕಿಲ್ಲ. ಬಹುಮತ ಸಾಬೀತುಪಡಿಸಲು ಕನಿಷ್ಠ 36 ಸ್ಥಾನಗಳು ಬೇಕೇಬೇಕು. ಆದರೆ, ಅತಿದೊಡ್ಡ ಪಕ್ಷವಾದ ಭಾರತೀಯ ಜನತಾ ಪಕ್ಷ, ಕುದುರೆ ವ್ಯಾಪಾರ ನಡೆಸಲು ಯತ್ನಿಸದೆ ಸರಕಾರ ರಚಿಸುವುದಿಲ್ಲ ಎಂದು ಹಿಂದೆ ಸರಿದಿತ್ತು. ಎಎಪಿ ಕೂಡ ಕಾಲಾವಕಾಶ ಕೇಳಿದ್ದರೂ ಅದು ಸರಕಾರ ರಚಿಸುವ ಯಾವ ಲಕ್ಷಣಗಳೂ ಕಾಣಿಸುತ್ತಿಲ್ಲ. ಬಿಜೆಪಿ ಜೊತೆ ಸೇರಿ ಸರಕಾರ ರಚಿಸಿ ಎಂದು ಮಾಜಿ ಪೊಲೀಸ್ ಅಧಿಕಾರಿ ಕಿರಣ್ ಬೇಡಿ ಕಿವಿಮಾತು ಹೇಳಿದ್ದರೂ ಕೇಜ್ರಿವಾಲ್ ಕಿವಿಗೆ ಹಾಕಿಕೊಂಡಿರಲಿಲ್ಲ. [ಕೇಜ್ರಿವಾಲ್ ಗೆ ಕಿರಣ್ ಕಿವಿಮಾತು]

ಈ ಎಲ್ಲ ಕಾರಣಗಳಿಂದಾಗಿ ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವುದು ಅನಿವಾರ್ಯವಾಗಿದೆ. ಆದರೆ, ಇದೇ ಸಮಯದಲ್ಲಿ ಕಾಂಗ್ರೆಸ್ ಬೆಂಬಲ ಪಡೆದು ಆಮ್ ಆದ್ಮಿ ಪಕ್ಷ ಸರಕಾರ ರಚಿಸಲು ಮುಂದಾದರೆ ರಾಷ್ಟ್ರಪತಿ ಆಳ್ವಿಕೆ ಕೊನೆಗೊಳ್ಳಲಿದೆ. ಬಾಹ್ಯ ಮತ್ತು ಬೇಷರತ್ ಬೆಂಬಲ ನೀಡುವುದಾಗಿ ಕಾಂಗ್ರೆಸ್ ಹೇಳಿದ್ದರೂ ಆಮ್ ಆದ್ಮಿ ಪಕ್ಷ ಹಲವಾರು ಷರತ್ತುಗಳನ್ನು ಕಾಂಗ್ರೆಸ್ ಮತ್ತು ಬಿಜೆಪಿ ಮುಂದಿಟ್ಟಿದೆ. ಈ ಷರತ್ತುಗಳಿಗೆ ಪ್ರತಿಕ್ರಿಯಿಸಲು ಬಿಜೆಪಿ ನಿರಾಕರಿಸಿದೆ. [ಅರವಿಂದ್ ಹದಿನೆಂಟು ಷರತ್ತುಗಳು]
ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದ್ದರಿಂದ ರಾಷ್ಟ್ರಪತಿ ಆಳ್ವಿಕೆ ಹೇರುವುದು ಅನಿವಾರ್ಯವಾಗಿದೆ ಎಂದು ಕೇಂದ್ರ ಗೃಹ ಮಂತ್ರಾಲಯಕ್ಕೆ ರಾಜ್ಯಪಾಲರು ಪತ್ರ ಬರೆದಿದ್ದಾರೆ. ಕೇಂದ್ರ ಸರಕಾರ ಕೂಡ ಕಾನೂನು ಪಂಡಿತರ ಸಲಹೆ ಯಾಚಿಸಿದೆ. ನಾವು ಬೇಕಿದ್ದರೆ ಮತ್ತೊಂದು ಚುನಾವಣೆ ಎದುರಿಸಲು ಸಿದ್ಧರಿದ್ದೇವೆ, ಆದರೆ ಯಾರೊಂದಿಗೂ ಅಪವಿತ್ರ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಎಎಪಿ ಅಧ್ಯಕ್ಷ ಅರವಿಂದ್ ಕೇಜ್ರಿವಾಲ್ ಕಡ್ಡಿಮುರಿದಂತೆ ಹೇಳಿಕೆ ನೀಡಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications