ದೆಹಲಿ ಬಿಜೆಪಿ ಮುಖ್ಯಸ್ಥ ಮನೋಜ್ ತಿವಾರಿ ಮನೆಗೆ ಅಪರಿಚಿತರ ದಾಳಿ
ದೆಹಲಿ ಬಿಜೆಪಿ ಮುಖ್ಯಸ್ಥ-ಸಂಸದ ಮನೋಜ್ ತಿವಾರಿ ಮನೆ ಮೇಲೆ ದುಷ್ಕರ್ಮಿಗಳ ಗುಂಪು ದಾಳಿ ನಡೆಸಿದ್ದು, ಇದರಲ್ಲಿ ಪೊಲೀಸರ ಕೈವಾಡವಿರುವ ಸಾಧ್ಯತೆ ಇದೆ ಎಂದು ಮನೋಜ್ ತಿವಾರಿ ಮಾಧ್ಯಮಗಳಿಗೆ ಹೇಳಿದ್ದಾರೆ.
ನವದೆಹಲಿ, ಮೇ 1: ದೆಹಲಿ ಬಿಜೆಪಿ ಮುಖ್ಯಸ್ಥ ಮನೋಜ್ ತಿವಾರಿ ಅವರ ಮನೆ ಮೇಲೆ ಭಾನುವಾರ ರಾತ್ರಿ ದಾಳಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಈ ದಾಳಿಯ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ. ಘಟನೆ ನಡೆದ ವೇಳೆ ಮನೋಜ್ ತಿವಾರಿ ಅವರು ಮನೆಯಲ್ಲಿ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ದೂರು ದಾಖಲಾದ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ನಾಲ್ವರನ್ನು ಬಂಧಿಸಿದ್ದಾರೆ. ಮೇಲ್ನೋಟಕ್ಕೆ ಇದು ದರೋಡೆ ಯತ್ನದಂತೆ ಅನಿಸುತ್ತಿದೆ ಎಂದಿದ್ದಾರೆ. ಈಚೆಗೆ ದೆಹಲಿ ಪಾಲಿಕೆಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯು ಅದ್ಭುತ ಗೆಲುವು ಸಾಧಿಸಿದ್ದರ ಹಿಂದೆ ಒಳ್ಳೆ ಕೆಲಸ ಮಾಡಿದ್ದು ಇದೇ ಮನೋಜ್ ತಿವಾರಿ. ಅವರದೇ ನೇತೃತ್ವದಲ್ಲಿ ಬಿಜೆಪಿ ಚುನಾವಣೆ ಎದುರಿಸಿತ್ತು.[ನಾನು ಪಾಕ್ ನ ISI ಏಜೆಂಟ್, ಆದ್ರೆ ಭಾರತದಲ್ಲಿರೋಕೆ ಇಷ್ಟ!]

ದೆಹಲಿಯಲ್ಲಿ ಅಧಿಕಾರದಲ್ಲಿರುವ ಆಮ್ ಆದ್ಮಿ ಪಕ್ಷ ಸ್ಥಾನ ಗಳಿಕೆಯಲ್ಲಿ ಎರಡನೇ ಪಕ್ಷವಾಗಿ ಹೊರಹೊಮ್ಮಿದರೆ, ಕಾಂಗ್ರೆಸ್ ಮೂರನೇ ಸ್ಥಾನ ತಲುಪಿತ್ತು. ಇದೊಂದು ದೊಡ್ಡ ಪಿತೂರಿ. ಇದರ ಹಿಂದೆ ಪೊಲೀಸರು ಕೂಡ ಭಾಗಿಯಾದಂತಿದೆ ಎಂದು ಮಾಧ್ಯಮದವರಿಗೆ ತಿವಾರಿ ಹೇಳಿದ್ದಾರೆ.[ಸೋಲಿನ ನಂತರ ಬಿಜೆಪಿಯನ್ನು ಅಭಿನಂದಿಸಿದ ಕೇಜ್ರಿವಾಲ್]
ತಿವಾರಿ ಆರೋಪಿಸುವ ಪ್ರಕಾರ, ಎಂಟರಿಂದ ಹತ್ತು ಮಂದಿ ಇದ್ದ ಗುಂಪು ಮನೆಯೊಳಗೆ ನುಗ್ಗಿ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದೆ. ಆ ನಂತರ ಕೋಣೆಗಳಲ್ಲಿ ಹುಡುಕಾಟ ನಡೆಸಿದೆ. ಸಮವಸ್ತ್ರದಲ್ಲಿರುವ ವ್ಯಕ್ತಿ ಅವರಿಗೆ ಕೋಣೆಯನ್ನು ತೋರಿಸಿರುವುದು ಕಂಡುಬಂದಿದೆ. "ಇದು ದೊಡ್ಡ ಬೆದರಿಕೆ" ಎಂದು ತಿವಾರಿ ಘಟನೆಯನ್ನು ವ್ಯಾಖ್ಯಾನಿಸಿದ್ದಾರೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications