ಅತೃಪ್ತ ವಿಜಯ್ ಮೇಲ್ಮನೆಗೆ; ಹರ್ಷವರ್ಧನ್ ಸಿಎಂ ಅಭ್ಯರ್ಥಿ
ನವದೆಹಲಿ, ಅ.23: ನರೇಂದ್ರ ಮೋದಿ ದೆಹಲಿ ಗದ್ದುಗೆ ಏರುವ ಮೊದಲು ಅಲ್ಲಿನ ವಿಧಾಸನಭೆಯನ್ನು ತನ್ನ ಕಬ್ಜಾಗೆ ಪಡೆಯಲು ಸರ್ವಪ್ರಯತ್ನ ನಡೆಸಿರುವ ಬಿಜೆಪಿ ನವೆಂಬರಿನಲ್ಲಿ ನಡೆಯುವ ಚುನಾವಣೆಗೆ ಹರ್ಷವರ್ಧನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬುಧವಾರ ಆಯ್ಕೆ ಮಾಡಿದೆ. ಇದೇ ವೇಳೆ, ಅತೃಪ್ತ ವಿಜಯ್ ಗೋಯಲ್ ಅವರನ್ನು ಮೇಲ್ಮನೆಗೆ ಕಳುಹಿಸಲು ಸಹ ತೀರ್ಮಾನಿಸಿದೆ.
ಇದರೊಂದಿಗೆ ತಲೆಬಿಸಿಯಾಗಿ ಪರಿಣಮಿಸಿದ್ದ ದೆಹಲಿ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ವಿಷಯ ಇತ್ಯರ್ಥವಾದಂತಿದ್ದು, ವೃತ್ತಿಯಿಂದ ENT surgeon ಆಗಿರುವ ಹರ್ಷವರ್ಧನ್ ಸಿಎಂ ಅಭ್ಯರ್ಥಿಯಾಗಿ 'ಸರ್ವಾನುಮತ'ದಿಂದ ಆಯ್ಕೆಯಾದಂತಿದೆ.

ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಹರ್ಷವರ್ಧನ್ ಹಾಗೂ ವಿವಾದಿತ ವಿಜಯ್ ಗೋಯಲ್ ಮಧ್ಯೆ ಪ್ರಬಲ ಸ್ಪರ್ಧೆ ಏರ್ಪಟ್ಟಿತ್ತು. ಆದರೆ ಅಂತಿಮವಾಗಿ ಹರ್ಷವರ್ಧನ್ ಅವರು ಆಯ್ಕೆಯಾಗಿದ್ದಾರೆ. ಡಿಸೆಂಬರ್ 4ರಂದು ದೆಹಲಿ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಡಿ. 8 ಭಾನುವಾರ ಫಲಿತಾಂಶ ಪ್ರಕಟವಾಗಲಿದೆ.
ಕಾಂಗ್ರೆಸ್ ವತಿಯಿಂದ ಶೀಲಾ ದೀಕ್ಷಿತ್, ಆಮ್ ಆದ್ಮಿ ಪಾರ್ಟಿ ವತಿಯಿಂದ ಅರವಿಂದ್ ಕೇಜ್ರಿವಾಲಾ ಮತ್ತು ಇದೀಗ ಬಿಜೆಪಿ ಡಾ. ಹರ್ಷವರ್ಧನ್ ಮಧ್ಯೆ ದೆಹಲಿ ವಿಧಾನಸಭೆ ನಾಯಕತ್ವಕ್ಕಾಗಿ ಜಿದ್ದಾಜಿದ್ದಿ ಹೋರಾಟ ನಡೆಯಲಿದೆ. ವಿಜಯ್ ಗೋಯಲ್ ಪ್ರಸ್ತುತ ದೆಹಲಿ ಬಿಜೆಪಿ ಘಟಕದ ಅಧ್ಯಕ್ಷರಾಗಿದ್ದು, ಅದೇ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅವರಿಗೆ ಟಿಕೆಟ್ ನೀಡಲು ಬಯಸಿದ್ದು, ಒಂದೇ ವೇಳೆ ಆ ಚುನಾವಣೆಯಲ್ಲಿ ಸೋತರೂ ಮುಂದೆ ರಾಜ್ಯ ಸಭೆಗೆ ಅವರನ್ನು ಆರಿಸಿ ಕಳುಹಿಸಲು ಬಿಜೆಪಿ ವರಿಷ್ಠರು ಆಶ್ವಾಸನೆ ನೀಡಿದ್ದಾರೆ ಎನ್ನಲಾಗಿದೆ.
ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಂದು ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ '2013ರ ದೆಹಲಿ ವಿಧಾನಸಭೆ ಚುನಾವಣೆಗೆ ಹರ್ಷವರ್ಧನ್ ಅವರನ್ನು ಪಕ್ಷದ ಸಿಎಂ ಅಭ್ಯರ್ಥಿಯಾಗಿ ಒಮ್ಮತದಿಂದ ಆಯ್ಕೆ ಮಾಡಲಾಗಿದೆ; ಎಂದು ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರು ಪ್ರಕಟಿಸಿದ್ದಾರೆ.
ಸಂಸದೀಯ ಮಂಡಳಿ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಾಜನಾಥ್ ಸಿಂಗ್, ಹರ್ಷವರ್ಧನ್ ಅವರನ್ನು ಸಿಎಂ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದ್ದು, ಮತ್ತೊರ್ವ ಆಕಾಂಕ್ಷಿ ದೆಹಲಿ ಬಿಜೆಪಿ ಅಧ್ಯಕ್ಷ ವಿಜಯ್ ಗೋಯಲ್ ಅವರು ಪಕ್ಷದ ತೀರ್ಮಾನಕ್ಕೆ ಸಮ್ಮತಿ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.
ಹರ್ಷವರ್ಧನ್ ಅವರು ಚಿಕ್ಕ ವಯಸ್ಸಿನಿಂದಲೂ ಆರ್ಎಸ್ಎಸ್ ಸಕ್ರೀಯ ಕಾರ್ಯಕರ್ತರಾಗಿದ್ದರಿಂದ ಆರ್ಎಸ್ಎಸ್ ಅವರ ಬೆಂಬಲಕ್ಕೆ ನಿಂತಿದೆ ಎನ್ನಲಾಗಿದೆ. ಬಿಜೆಪಿ ಹಿರಿಯ ನಾಯಕ ಎಲ್ ಕೆ ಆಡ್ವಾಣಿ, ಲೋಕಸಭೆ ಪ್ರತಿಪಕ್ಷದ ನಾಯಕಿ ಸುಷ್ಮಾ ಸ್ವರಾಜ್, ನಿತಿನ್ ಗಡ್ಕರಿ, ಅರುಣ್ ಜೇಟ್ಲಿ ಹಾಗೂ ಅನಂತ್ ಕುಮಾರ್ ಅವರು ಸಂಸದೀಯ ಮಂಡಳಿ ಸಭೆಯಲ್ಲಿ ಭಾಗವಹಿಸಿದ್ದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ












Click it and Unblock the Notifications