ಡೀಸೆಲ್ ಮೇಲಿನ VAT ಇಳಿಸಲು ದೆಹಲಿ ಸರ್ಕಾರ ನಿರ್ಧಾರ
ನವದೆಹಲಿ, ಜುಲೈ 30: ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸಂಪುಟವು ಡೀಸೆಲ್ ಮೇಲಿನ ವ್ಯಾಲ್ಯೂ ಆಡೆಡ್ ಟ್ಯಾಕ್ಸ್ (VAT) ಅನ್ನು 30ರಿಂದ 16.75 ಪರ್ಸೆಂಟ್ ಗೆ ಇಳಿಸಲು ನಿರ್ಧಾರ ಮಾಡಿದೆ. ಇದರಿಂದ ಡೀಸೆಲ್ ಪ್ರತಿ ಲೀಟರ್ ಗೆ 8.36 ರುಪಾಯಿ ಇಳಿಕೆ ಆಗಲಿದೆ. 82 ರುಪಾಯಿ ಇರುವ ಲೀಟರ್ ಡೀಸೆಲ್ ಬೆಲೆ 73.64ಕ್ಕೆ ಇಳಿಕೆ ಆಗಲಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗುರುವಾರ ಹೇಳಿದರು.
ದೆಹಲಿ ಆರ್ಥಿಕತೆಯನ್ನು ಮುನ್ನಡೆಸುವಲ್ಲಿ ಡೀಸೆಲ್ ಬೆಲೆ ಇಳಿಕೆ ಪ್ರಮುಖ ಹೆಜ್ಜೆ ಎಂದಿದ್ದಾರೆ. ಇನ್ನು ಉದ್ಯೋಗ ಪೋರ್ಟಲ್ ನಲ್ಲಿ 7577 ಕಂಪೆನಿಗಳು ನೋಂದಣಿ ಆಗಿದ್ದು, 2,04,785 ಉದ್ಯೋಗಗಳ ಜಾಹೀರಾತು ನೀಡಲಾಗಿದೆ. ದೆಹಲಿ ಸರ್ಕಾರಿ ಉದ್ಯೋಗ ಪೋರ್ಟಲ್ ಆರಂಭಿಸಿದ ನಾಲ್ಕು ದಿನಗಳೊಳಗೆ 3,22,865 ಮಂದಿ ಅರ್ಜಿ ಸಲ್ಲಿಸಿದ್ದಾರೆ ಎಂದು ಕೇಜ್ರಿವಾಲ್ ಮಾಹಿತಿ ನೀಡಿದ್ದಾರೆ.
ದೆಹಲಿಯ ವರ್ತಕರು, ಕೈಗಾರಿಕೋದ್ಯಮಿಗಳು, ಉದ್ಯಮಿಗಳು ಕೈ ಜೋಡಿಸಿ. ಆ ಮೂಲಕ ದೆಹಲಿ ಆರ್ಥಿಕತೆಯನ್ನು ಮರಳಿ ಹಳಿಗೆ ತರಲು ಸಹಕರಿಸಿ ಎಂದು ಅರವಿಂದ್ ಕೇಜ್ರಿವಾಲ್ ಮನವಿ ಮಾಡಿದ್ದಾರೆ.

ದೆಹಲಿಯ ಎರಡು ಕೋಟಿ ಜನರು ಕೊರೊನಾವನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಹಾಗೂ ಮಾಸ್ಕ್ ಧರಿಸಬೇಕು. ಒಂದು ವೇಳೆ ನಾವು ನಿರ್ಲಕ್ಷ್ಯ ತೋರಿದರೆ ಮತ್ತೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತವೆ. ನಾವೀಗ ದೆಹಲಿ ಆರ್ಥಿಕತೆಯ ಪುನಶ್ಚೇತನದ ಕಡೆಗೆ ಗಮನ ನೀಡಬೇಕು. ಕಾರ್ಖಾನೆ- ವ್ಯಾಪಾರ, ವ್ಯವಹಾರ ಮುಚ್ಚಿರುವುದರಿಂದ ಹಲವರು ಸಂಕಷ್ಟದಲ್ಲಿ ಸಿಲುಕಿದ್ದಾರೆ ಎಂದರು.
ಈ ಆರ್ಥಿಕ ಸವಾಲನ್ನು ನಾವು ಸ್ವೀಕರಿಸಿ, ಗೆಲ್ಲುತ್ತೇವೆ. ಈ ದಿನ ನಡೆದ ಸಂಪುಟ ಸಭೆಯಲ್ಲಿ ಪ್ರಮುಖ ತೀರ್ಮಾನ ತೆಗೆದುಕೊಂಡಿದ್ದೇವೆ. ಆರ್ಥಿಕತೆ ಮುನ್ನಡೆಸಲು ಇದು ಮುಖ್ಯ ಹೆಜ್ಜೆ ಆಗುತ್ತದೆ ಎಂದು ನಂಬಿರುವುದಾಗಿ ಕೇಜ್ರಿವಾಲ್ ತಿಳಿಸಿದರು.
ಡೀಸೆಲ್ ಬೆಲೆ ಇಳಿಕೆಗಾಗಿ ಕೈಗಾರಿಕೋದ್ಯಮಿಗಳು, ವರ್ತಕರು, ಉದ್ಯಮಿಗಳು ಬೇಡಿಕೆ ಇಟ್ಟಿದ್ದರು. ಏಕೆಂದರೆ ಇದರಿಂದ ಜನರ ಬಜೆಟ್ ಮೇಲೆ ಪರಿಣಾಮ ಆಗುತ್ತಿತ್ತು. ಈಗ ಡೀಸೆಲ್ ಬೆಲೆ ಇಳಿಸಿರುವುದರಿಮ್ದ ದೆಹಲಿ ಆರ್ಥಿಕತೆ ಮೇಲೆ ಪರಿಣಾಮ ಆಗುತ್ತದೆ ಎಂದು ನಾನು ನಂಬುತ್ತೇನೆ ಎಂಬ ಮಾತನ್ನಾಡಿದ್ದಾರೆ.
ಮಳಿಗೆಗಳ ಮಾಲೀಕರು, ವರ್ತಕರು, ಕೈಗಾರಿಕೋದ್ಯಮಿಗಳು ತಮ್ಮ ಕಾರ್ಖಾನೆ ಹಾಗೂ ಅಂಗಡಿಗಳ ಬಾಗಿಲು ತೆರೆಯುವಂತೆ ಮನವಿ ಮಾಡಲು ಬಯಸುತ್ತೇನೆ. ಅಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಮಾಸ್ಕ್ ಧರಿಸಿ. ಮತ್ತೆ ಕೆಲಸ ಶುರು ಆಗಲಿ. ಮುಂಬರುವ ದಿನಗಳಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಹಲವು ಕೈಗಾರಿಕೋದ್ಯಮಿಗಳು ಮತ್ತು ವರ್ತಕರ ಜತೆ ಚರ್ಚೆ ನಡೆಸಲಿದ್ದೇನೆ. ಅವರ ಸಮಸ್ಯೆಗಳನ್ನು ಬಗೆಹರಿಸಲಿದ್ದೇನೆ ಎಂದು ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications