ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಾರನ್ನೇ ಹೊತ್ತೊಯ್ದ ಕಳ್ಳರು
ದೆಹಲಿ, ಅಕ್ಟೋಬರ್ 12: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಾರನ್ನೇ ಕಳ್ಳರು ಹೊತ್ತೊಯ್ದಿದ್ದಾರೆ. ಮುಖ್ಯಮಂತ್ರಿ ಕಚೇರಿ ಪಕ್ಕದಿಂದಲೇ ಕಾರನ್ನು ಕಳ್ಳತನ ಮಾಡಲಾಗಿದೆ.
ಅರವಿಂದ್ ಕೇಜ್ರಿವಾಲ್ ರ ದೆಹಲಿ ರಿಜಿಸ್ಟ್ರೇಷನ್ ಸಂಖ್ಯೆ DL9 G9769 ಕಾರನ್ನು ಕಳ್ಳತನ ಮಾಡಲಾಗಿದೆ. ನೀಲಿ ಬಣ್ಣದ ಮಾರುತಿ ಸುಝುಕಿ ವ್ಯಾಗನ್-ಆರ್ ಕಾರನ್ನು ದೆಹಲಿ ಮುಖ್ಯಮಂತ್ರಿಯಾದ ಬಳಿಕವೂ ಕೇಜ್ರಿವಾಲ್ ಓಡಾಟಕ್ಕೆ ಬಳಸುತ್ತಿದ್ದರು.

ಈ ಕಾರನ್ನು ಕೇಜ್ರಿವಾಲ್ ಅವರಿಗೆ ಅವರ ವಿದೇಶಿ ಗೆಳೆಯರೊಬ್ಬರು ಕೊಡುಗೆಯಾಗಿ ನೀಡಿದ್ದರು. ಪ್ರತಿಭಟನೆ ಮೊದಲಾದ ಸಂದರ್ಭದಲ್ಲೆಲ್ಲಾ ಕೇಜ್ರಿವಾಲ್ ಈ ಕಾರನ್ನೇ ಬಳಸುತ್ತಿದ್ದರು. ಹೀಗಾಗಿ ಈ ಕಾರಿಗೆ 'ವಿಐಪಿ ಮೊಬೈಲ್' ಎಂಬ ಹೆಸರು ಬಂದಿತ್ತು.
ವಿಐಪಿ ಸಂಸ್ಕೃತಿ ವಿರುದ್ಧ ಮಾತನಾಡುತ್ತಿದ್ದ ಅವರು ತಮ್ಮ ವ್ಯಾಗನ್-ಆರ್ ಕಾರಿನಲ್ಲೇ ಓಡಾಡುತ್ತಿದ್ದರು. ಇದಕ್ಕೆ ಸಾಕ್ಷಿಯಾಗಿ ಅವರ ನೂರಾರು ಫೋಟೋಗಳು ಕಾರಿನ ಜತೆಗಿವೆ.
ಇದೀಗ ಈ ಕಾರನ್ನೇ ಕಳ್ಳರು ಹೊತ್ತೊಯ್ದಿದ್ದಾರೆ. ಈ ಕುರಿತು ಮಧ್ಯಾಹ್ನ 3 ಗಂಟೆ 30 ನಿಮಿಷಕ್ಕೆ ಪ್ರಕರಣ ದಾಖಲಾಗಿದೆ. ಪೊಲೀಸರು ಕಾರನ್ನು ಹುಡುಕಾಡುತ್ತಿದ್ದಾರೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications