ಆಸ್ಪತ್ರೆಗಳಲ್ಲಿ ಅಕ್ರಮ: 'ನಿಮ್ಮನ್ನು ಸುಮ್ಮನೆ ಬಿಡಲ್ಲ' ಎಂದ ದೆಹಲಿ ಸಿಎಂ
ದೆಹಲಿ, ಜೂನ್ 6: ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ಈ ಸಂದರ್ಭದಲ್ಲಿ ಸರ್ಕಾರಕ್ಕೆ ಸಹಕಾರ ನೀಡುತ್ತಿಲ್ಲ ಎಂಬ ಕಾರಣಕ್ಕೆ ಕೆಲವು ಖಾಸಗಿ ಆಸ್ಪತ್ರೆಗಳಿಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಎಚ್ಚರಿಕೆ ನೀಡಿದ್ದಾರೆ.
Recommended Video
ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲು ನಿರಾಕರಣೆ ಮಾಡಲಾಗುತ್ತಿದೆ. ಹಾಸಿಗೆಗಳು ಇದ್ದರೂ ಇಲ್ಲವೆಂದು ಸುಳ್ಳು ಹೇಳುತ್ತಿದ್ದಾರೆ. ನಂತರ ಕೆಲವು ರಾಜಕೀಯ ಪಕ್ಷಗಳ ಜೊತೆ ಕೈಸೇರಿಸಿ ಹಾಸಿಗೆ ವಿಚಾರದಲ್ಲಿ ಅಕ್ರಮ ಎಸೆಯಲಾಗುತ್ತಿದೆ. ಇದನ್ನು ನೋಡಿಕೊಂಡು ಸುಮ್ಮಿರುವುದಿಲ್ಲ. ಇದು ನಿಮಗೆ ಕೊನೆ ಎಚ್ಚರಿಕೆ ಎಂದು ಕೇಜ್ರಿವಾಲ್ ವಾರ್ನ್ ಮಾಡಿದ್ದಾರೆ.
Some hospitals are denying admission to #COVID19 patients. I am warning those who think they will be able to do black-marketing of beds using the influence of their protectors from other parties, you will not be spared: Delhi Chief Minister Arvind Kejriwal pic.twitter.com/vuQvMc762Z
— ANI (@ANI) June 6, 2020
ಆಸ್ಪತ್ರೆಯ ಹಾಸಿಗೆಗಳ ಲಭ್ಯತೆ ಕುರಿತ ಮಾಹಿತಿಗೆ 'ದೆಹಲಿ ಕೊರೊನಾ' ಅಪ್ಲಿಕೇಷನ್
ಇಂದು ಬೆಳಿಗ್ಗೆ ದೆಹಲಿಯಲ್ಲಿನ ಕೊರೊನಾ ಪರಿಸ್ಥಿತಿ ಕುರಿತು ಮಾಹಿತಿ ನೀಡಿದ ಸಿಎಂ ''ಖಾಸಗಿ ಆಸ್ಪತ್ರೆಗಳು ತಮ್ಮ ಬಳಿ ಬರುವ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಬೇಕಾಗುತ್ತದೆ. ಇಂದು ವೇಳೆ ಚಿಕಿತ್ಸೆ ನಿರಾಕರಣೆ ಮಾಡಿದ್ರೆ ಅಂತಹ ಆಸ್ಪತ್ರೆಗಳು ಕಾರ್ಯನಿರ್ವಹಿಸಲು ಬಿಡುವುದಿಲ್ಲ'' ಎಂದು ಹೇಳಿದ್ದಾರೆ.
''ಅಕ್ರಮವಾಗಿ ಬೆಡ್ ಮಾರಾಟವನ್ನು ನಿಲ್ಲಿಸಲು ನಾವು ಮೊಬೈಲ್ ಅಪ್ಲಿಕೇಶನ್ ಪ್ರಾರಂಭಿಸಿದ್ದೇವೆ. ಆಸ್ಪತ್ರೆಗಳಲ್ಲಿನ ಹಾಸಿಗೆಗಳು ಮತ್ತು ವೆಂಟಿಲೇಟರ್ಗಳ ಸಂಖ್ಯೆಯ ಮಾಹಿತಿಯನ್ನು ಪಾರದರ್ಶಕವಾಗಿಸಲು ನಾವು ಯೋಚಿಸಿದ್ದೇವೆ ಎಂದು ಕೇಜ್ರಿವಾಲ್ ಮಾಹಿತಿ ನೀಡಿದ್ದಾರೆ.
ಕೊರೊನಾ ವೈರಸ್ ಪರಿಸ್ಥಿತಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಕೆಲವು ಆಸ್ಪತ್ರೆಗಳು, ಸರ್ಕಾರಕ್ಕೆ ಸರಿಯಾದ ಮಾಹಿತಿ ನೀಡುತ್ತಿಲ್ಲ. ಕೊವಿಡ್ ರೋಗಿಗಳು ಬಂದ್ರೆ ಹಾಸಿಗೆಗಳು ಇಲ್ಲ ಎಂದು ಹೇಳಿ ಕಳುಹಿಸುತ್ತಿದೆ. ಆದರೆ, ಅಕ್ರಮವಾಗಿ ಬೇರೆಯವರಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಇದೆ.
ಕೊರೊನಾ ಪೀಡಿತ ಮುಂಬೈನಿಂದ ಹೊರಬಿದ್ದ ಗುಡ್ ನ್ಯೂಸ್
ಪ್ರಸ್ತುತ ದೆಹಲಿಯಲ್ಲಿ 26333 ಜನರಿಗೆ ಕೊರೊನಾ ಸೋಂಕು ತಗುಲಿದೆ. 708 ಮಂದಿ ಸೋಂಕಿನಿಂದ ಚೇತರಿಸಿಕೊಳ್ಳದೇ ಮೃತಪಟ್ಟಿದ್ದಾರೆ.