ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿ ಮುಖ್ಯಕಾರ್ಯದರ್ಶಿ ಮೇಲಿನ ಹಲ್ಲೆ ಪ್ರಕರಣ: ಕೇಜ್ರಿವಾಲ್, ತಂಡಕ್ಕೆ ಜಾಮೀನು

|
Google Oneindia Kannada News

ನವದೆಹಲಿ, ಅಕ್ಟೋಬರ್ 25: ದೆಹಲಿಯ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷ(ಎಎಪಿ)ದ ಇತರ ಶಾಸಕರಿಗೆ ದೆಹಲಿಯ ಪಟಿಯಾಲಾ ಹೌಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಅರವಿಂದ್ ಕೇಜ್ರಿವಾಲ್ ಧರಣಿಗೆ ದೆಹಲಿ ಹೈಕೋರ್ಟ್ ಛೀಮಾರಿ! ಅರವಿಂದ್ ಕೇಜ್ರಿವಾಲ್ ಧರಣಿಗೆ ದೆಹಲಿ ಹೈಕೋರ್ಟ್ ಛೀಮಾರಿ!

ಕಳೆದ ಫೆಬ್ರವರಿ 19 ರಂದು ಆಮ್ ಆದ್ಮಿ ಪಕ್ಷದ ಶಾಸಕರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ, ಮುಖ್ಯಮಂತ್ರಿಗಳ ಸಮ್ಮುಖದಲ್ಲೇ ದೆಹಲಿಯ ಮುಖ್ಯ ಕಾರ್ಯದರ್ಶಿಯ ಮೇಲೆ ಹಲ್ಲೆ ನಡೆಸಲಾಗಿತ್ತು.

ಎಎಪಿ, ಬಿಜೆಪಿ ಧರಣಿ ನಾಟಕದಲ್ಲಿ ದೆಹಲಿಗರು ಅತಂತ್ರ: ರಾಹುಲ್ ಎಎಪಿ, ಬಿಜೆಪಿ ಧರಣಿ ನಾಟಕದಲ್ಲಿ ದೆಹಲಿಗರು ಅತಂತ್ರ: ರಾಹುಲ್

ಈ ಘಟನೆಯ ನಂತರ ಹಲ್ಲೆ ನಡೆಸಿದ್ದ ಅಮನಾತುಲ್ಲಾಹ್ ಖಾನ್ ಮತ್ತು ಪ್ರಕಾಶ್ ಜರ್ವಾಲ್ ಅವರ ವಿರುದ್ಧ ಪ್ರಕರಣ ದಾಖಲಿಸಿ, ಅವರನ್ನು ಬಂಧಿಸಲಾಗಿತ್ತು.

Delhi Chief Secretary assualt case: Court gransta bail to Kejriwal and others

ಈ ಘಟನೆಯ ನಂತರ ದೆಹಲಿಯಲ್ಲಿ ಐಎಎಸ್ ಅಧಿಕಾರಿಗಳು ವ್ಯಾಪಕ ಪ್ರತಿಭಟನೆ ನಡೆಸಿದ್ದರು. ಐಎಎಸ್ ಅಧಿಕಾರಿಗಳು ಪ್ರತಿಭಟನೆ ವಾಪಸ್ ಪಡೆಯುವಂತೆ ಒತ್ತಾಯಿಸಿ ನಂತರ ದೆಹಲಿಯ ಉಪ ಗವರ್ನರ್ ನಿವಾಸದಲ್ಲಿ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಮುಂತಾದ ಎಎಪಿ ಮುಖಂಡರು ಪ್ರತಿಭಟನೆ ನಡೆಸಿದ್ದರು.

ಕೊನೆಗೂ ಪ್ರತಿಭಟನೆ ಹಿಂಪಡೆದ ಅರವಿಂದ ಕೇಜ್ರಿವಾಲ್ಕೊನೆಗೂ ಪ್ರತಿಭಟನೆ ಹಿಂಪಡೆದ ಅರವಿಂದ ಕೇಜ್ರಿವಾಲ್

ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಮತ್ತು ಒಟ್ಟು 11 ಶಾಸಕರಿಗೆ ಜಾಮೀನು ನೀಡಿರುವ ನ್ಯಾಯಾಲಯ, ತಲಾ 50,000 ರೂ. ಬಾಂಡ್ ವಿಧಿಸಿದೆ.

English summary
Delhi's Patiala House Court granted bail to Chief Minister Arvind Kejriwal, deputy CM Sisodia and 11 AAP legislators in the Delhi Chief Secretary Anshu Prakash assault case on Thursday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X